Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11

    June 9, 2025

    ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ : ಶ್ಯಾಮಲಾ ಮಾಧವ ಅಧ್ಯಕ್ಷತೆ
    News

    ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ : ಶ್ಯಾಮಲಾ ಮಾಧವ ಅಧ್ಯಕ್ಷತೆ

    March 10, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    10 ಮಾರ್ಚ್ 2023, ಉಳ್ಳಾಲ: ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯೋಜಿಸಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಇದೇ 17ರಂದು ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
    ತಾಲೂಕಿನ ಮೊದಲ ಸಾಹಿತ್ಯ ಸಮ್ಮೇಳನ ಇದಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಮತ್ತು ತಜ್ಞರ ಸಮಿತಿ ಶ್ರೀಮತಿ ಶ್ಯಾಮಲಾ ಮಾಧವ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದು ಕಸಾಪ ಉಳ್ಳಾಲ ಘಟಕದ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ.
    ಉಳ್ಳಾಲ ಸೋಮೇಶ್ವರದ ಯು. ನಾರಾಯಣ ಮತ್ತು ವಸಂತಿ ದಂಪತಿಯ ಪುತ್ರಿ ಶ್ಯಾಮಲಾ ಮಾಧವ ಅವರು ಮುಂಬೈಯಲ್ಲಿ ವಾಸವಾಗಿದ್ದು, ಹಿಂದಿ ಕಾದಂಬರಿ ‘ಅಲಂಪನಾ’, ಇಂಗ್ಲೀಷ್ ವಿಶ್ವ ಸಾಹಿತ್ಯ ಕೃತಿಗಳಾದ ‘ಗಾನ್ ವಿದ್ ದ ವಿಂಡ್’, ಫ್ರಾಂಕ್ಲಿನ್ ಸ್ಟೈನ್’, ‘ಜೇನ್ ಏರ್’, ‘ವುದರಿಂಗ್ ಹೈಟ್ಸ್’, ರಾಮಯ್ಯ ರೈ ಅವರ ‘ಪೊಲೀಸ್ ಡೈರಿ’, ಎಂ.ಆರ್. ಪೈ ಅವರ ‘ಏನ್ ಅನ್ ಕಾಮನ್ ಕಾಮನ್ ಮ್ಯಾನ್’ ಕೃತಿಗಳನ್ನು ಕನ್ನಡಕ್ಕೆ, ‘ಯಾತ್ರಿ’ ಎಂಬ ಕೃತಿಯನ್ನು ಇಂಗ್ಲೀಷಿಗೆ ಅನುವಾದಿಸಿದ್ದಾರೆ ಎಂದು ಧನಂಜಯ ಕುಂಬ್ಳೆ ತಿಳಿಸಿದ್ದಾರೆ.
    ವಿಲ್ ಡ್ಯುರಾಂಟ್ ಅವರ ‘ದ ಸ್ಟೋರಿ ಆಫ್ ಸಿವಿಲೈಸೇಷನ್’ ಗ್ರಂಥವನ್ನು ಅಂಬೇಡ್ಕರ್ ಬರಹ ಮತ್ತು ಭಾಷಣಗಳ ಸಂಪುಟವನ್ನು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ್ದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅದನ್ನು ಪ್ರಕಟಿಸಿದೆ. ‘ಆ ಲೋಕ’ ಕಥಾಸಂಕಲನ, ‘ಬದುಕು ಚಿತ್ರ ಚಿತ್ತಾರ’ ಲೇಖನ ಸಂಪುಟ, ವಾಸ್ತವವಾದದ ಸಾಹಿತಿ ರಾಮಚಂದ್ರ ಉಚ್ಚಿಲ, ಅರುಂಧತಿ ರಾಯ್ ಅವರ ‘ದ ಗಾಡ್ ಆಫ್ ಸ್ಮಾಲ್ ಥಿಂಗ್ಸ್’ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ‘ನಾಳೆ ಇನ್ನೂ ಕಾದಿದೆ’ ಎಂಬ ಆತ್ಮ ಕಥನ ಪ್ರಕಟಗೊಂಡಿದೆ ಎಂದು ಶ್ಯಾಮಲಾ ಮಾಧವ ತಿಳಿಸಿದ್ದಾರೆ.
    ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ. ಸಾವಿತ್ರಮ್ಮ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ, ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿಗಳಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಮಹಾರಾಷ್ಟ್ರ ಘಟಕದ ಗೌರವ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿ. ಮುಂಬೈ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಗೌರವ ಪ್ರಶಸ್ತಿ ಅವರಿಗೆ ಸಂದಿವೆ ಎಂದು ಹೇಳಿದ್ದಾರೆ.
    ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿ ನಡೆದ ಸಭೆಯಲ್ಲಿ ಕಸಾಪ ತಾಲೂಕು ಘಟಕದ ಕಾರ್ಯದರ್ಶಿಗಳಾದ ರವೀಂದ್ರ ರೈ ಕಳ್ಳಿಮಾರು, ಎಡ್ವರ್ಡ್ ಲೋಬೊ, ಸ್ವಾಗತ ಸಮಿತಿಯ ಪ್ರಸಾದ್ ರೈ ಕಲ್ಲಿಮಾರು, ಕೋಶಾಧಿಕಾರಿ ಲಯನ್ ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಉಳ್ಳಾಲ ಹೋಬಳಿ ಕಸಾಪ ಅಧ್ಯಕ್ಷೆ ವಿಜಯಲಕ್ಷ್ಮಿ ರೈ ಕಳ್ಳಿಮಾರು ಇದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಶಿಕ್ಷಕಿ ಬಿಂದು ಅವರಿಗೆ ಮಹಿಳಾ ಚೈತನ್ಯ ರತ್ನ ಪ್ರಶಸ್ತಿ
    Next Article ಭರತನಾಟ್ಯ ಕಲಾವಿದೆ ಆಸ್ತಿಕಾ ಸುನಿಲ್ ಶೆಟ್ಟಿ ಇನ್ನಿಲ್ಲ
    roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.