Subscribe to Updates

    Get the latest creative news from FooBar about art, design and business.

    What's Hot

    ನೃತ್ಯಾಂತರಂಗದಲ್ಲಿ ಮಿಂಚಿದ ದುಬೈಯ ಬಾಲಪ್ರತಿಭೆ ಕು. ನಿತಾರಾ ನಾಯರ್

    July 29, 2025

    ಪುತ್ತೂರಿನಲ್ಲಿ ಶಿಕ್ಷಕ ಕವಿಗಳಿಗಾಗಿ ರಾಜ್ಯ ಮಟ್ಟದ ಕವಿಗೋಷ್ಠಿ | ಆಗಸ್ಟ್ 04

    July 29, 2025

    ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಜಗದೀಶ್ ಪೈ ನಿಧನ

    July 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸ
    Literature

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸ

    November 14, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸ ಕಾರ್ಯಕ್ರಮ ದಿನಾಂಕ 12 ನವೆಂಬರ್ 2024ರಂದು ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಇಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ “ಮಹಾ ಬೆಳಕು ಸ್ವಾಮಿ ವಿವೇಕಾನಂದರ ಜೀವನ – ಸಂದೇಶ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ ಕಾರ್ಕಳದ ಕು. ಅಕ್ಷಯಾ ಗೋಖಲೆಯವರು ಮಾತನಾಡಿ “ಸ್ವಾಮಿ ವಿವೇಕಾನಂದರು ಭಾರತದ ಮಾನವೀಯತೆಯ ಹಾಗೂ ಪ್ರಜ್ಞೆಯ ಶಾಶ್ವತ ಬೆಳಕಾಗಿ ಉಳಿದಿದ್ದಾರೆ. ಇಡೀ ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಸನಾತನ ಧರ್ಮದ ಮಹತ್ವವನ್ನು ಪರಿಚಯಿಸಿದ ಈ ಮಹಾನ್ ಯೋಗಿ, ತನ್ನ ಸಂದೇಶಗಳಿಂದ ಜನರ ಮನಸ್ಸಿನಲ್ಲಿ ಹೊಸ ಹುಮ್ಮಸ್ಸು ಉಂಟುಮಾಡಿದರು. “ಉತ್ತಿಷ್ಠತ, ಜಾಗ್ರತ!” ಎಂಬ ನಿನಾದದಲ್ಲಿ ಪ್ರತಿಫಲಿಸಿದಂತೆ ಅವರು ಜೀವನದ ಪ್ರತಿ ಕ್ಷಣವನ್ನು ಸಾರ್ಥಕತೆಯಿಂದ ಸಾಧನೆಯ ದಾರಿಗೆ ಬೆಳೆಸಲು ಪ್ರೇರೇಪಿಸಿದರು. ಸ್ವಾಮಿ ವಿವೇಕಾನಂದರು ದೈವಸಾಕ್ಷಾತ್ಕಾರವನ್ನು ಮಾತ್ರವಲ್ಲ, ಮಾನವ ಸೇವೆಯನ್ನೂ ಪ್ರಧಾನ ಧರ್ಮವೆಂದು ಸಾರಿದರು. ‘ನೀವು ಬಡವರ ಸೇವೆ ಮಾಡುತ್ತಿರುವಾಗ, ಆ ದೇವರೇ ನಿಮ್ಮ ಮುಂದೆ ನಿಂತಿರುವರು.’ ಎಂಬ ಅವರ ಸಂದೇಶ, ಧರ್ಮವನ್ನು ಕೇವಲ ದೇವಾಲಯದ ಭಿತ್ತಿಗಳ ಒಳಗೆ ಮಾತ್ರವಲ್ಲ, ಸಾಮಾಜಿಕ ಜೀವನದ ಪ್ರತಿಯೊಂದು ಅಂಶದಲ್ಲೂ ಪ್ರತಿಷ್ಠಾಪಿಸುವಂತೆ ತೋರಿಸಿತು. ಇಂದು ಸ್ವಾಮಿ ವಿವೇಕಾನಂದರ ಶಕ್ತಿ, ಧೈರ್ಯ, ಮತ್ತು ತತ್ವದ ಬೆಳಕು ಎಲ್ಲರಿಗೂ ಹೊಸ ಬೆಳಕಿನಂತಾಗಿದೆ. ಅವರ “ವಿಶ್ವಸಮಾಧಾನ”ದ ದೃಷ್ಟಿಕೋನ ನಮಗೆ ಸಹಾನುಭೂತಿ, ಸಹಬಾಳ್ವೆ ಮತ್ತು ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ನೀಡುತ್ತದೆ.” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ ಕಾಮತ್ ಎಂ., ತ್ರಿಶಾ ಸಂಧ್ಯಾ ಕಾಲೇಜಿನ ಪ್ರೊ. ಸುಪ್ರಭಾ ಎಂ., ತ್ರಿಶಾ ಸಮೂಹ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ, ತ್ರಿಶಾ ಕ್ಲಾಸೆಸ್ ಮಂಗಳೂರು ಇದರ ಮುಖ್ಯಸ್ಥರಾದ ಪ್ರೊ. ಯಶಸ್ವಿನಿ ಯಶಪಾಲ್, ಕಾರ್ಯಕ್ರಮ ಸಂಯೋಜಕರಾದ ಪ್ರೊ. ನಮೃತಾ ಮತ್ತು ಉಪನ್ಯಾಸಕರು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಚಂದ್ರು ಹೆಗ್ಡೆ ಸ್ವಾಗತಿಸಿ, ವಿದ್ಯಾರ್ಥಿನಿಯಾದ ಇಂಚರ ತಂತ್ರಿ ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯಕ್ರಮ ಸಂಯೋಜಕರಾದ ಪ್ರೊ. ವಿದ್ಯಾಲಕ್ಷ್ಮಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉದ್ಘಾಟನೆಗೊಂಡ  ಯಕ್ಷಾಂಗಣ ನುಡಿಹಬ್ಬ ತಾಳಮದ್ದಳೆ ಸಪ್ತಾಹ – 2024
    Next Article ಯಕ್ಷಫೌಂಡೇಷನ್ ಬೆಂಗಳೂರು ವತಿಯಿಂದ ಯಕ್ಷಗುರು ಕೋಟ ಸುದರ್ಶನ ಉರಾಳರಿಗೆ ಸನ್ಮಾನ
    roovari

    Add Comment Cancel Reply


    Related Posts

    ಪುತ್ತೂರಿನಲ್ಲಿ ಶಿಕ್ಷಕ ಕವಿಗಳಿಗಾಗಿ ರಾಜ್ಯ ಮಟ್ಟದ ಕವಿಗೋಷ್ಠಿ | ಆಗಸ್ಟ್ 04

    July 29, 2025

    ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಜಗದೀಶ್ ಪೈ ನಿಧನ

    July 29, 2025

    ಸಂದೇಶ ಸಭಾಂಗಣದಲ್ಲಿ ಗ್ಲೇಡಿಸ್ ರೇಗೊರವರಿಗೆ ಶ್ರದ್ಧಾಂಜಲಿ ಸಭೆ

    July 29, 2025

    ಯಶಸ್ವಿಯಾಗಿ ಜರಗಿದ ‘ಮನೆ ಮನೆ-ಕನ್ನಡ ಜಾಗೃತಿ ಅಭಿಯಾನ’ದ ದ್ವಿತೀಯ ಕಾರ್ಯಕ್ರಮ

    July 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.