Subscribe to Updates

    Get the latest creative news from FooBar about art, design and business.

    What's Hot

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 11, 2025

    ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಸೆಪ್ಟೆಂಬರ್ 15 ಕೊನೆಯ ದಿನಾಂಕ

    June 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯಾಮೃತ’ ಸರಣಿ ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣ ‘ಭರತನಾಟ್ಯದೊಳಗಿನ ಧ್ವನಿ ಬೆಳಕು’ | ನವಂಬರ್ 18
    Literature

    ‘ನೃತ್ಯಾಮೃತ’ ಸರಣಿ ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣ ‘ಭರತನಾಟ್ಯದೊಳಗಿನ ಧ್ವನಿ ಬೆಳಕು’ | ನವಂಬರ್ 18

    November 16, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆಸುತ್ತಿರುವ ‘ನೃತ್ಯಾಮೃತ 12’ ಸರಣಿ ಕಾರ್ಯಕ್ರಮದ ಅಂಗವಾಗಿ ‘ಭರತನಾಟ್ಯದೊಳಗಿನ ಧ್ವನಿ ಬೆಳಕು’ ಎಂಬ ಪ್ರಾತ್ಯಕ್ಷಿಕೆ ಸಹಿತ ವಿಚಾರ ಸಂಕಿರಣ – ಸಂವಾದವನ್ನು ಆಯೋಜಿಸಿದೆ.

    ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಂಗ ಅಧ್ಯಯನ‌ ಕೇಂದ್ರದ ಸಹಯೋಗದೊಂದಿಗೆ ದಿನಾಂಕ 18 ನವಂಬರ್ 2024ರ ಸೋಮವಾರದಂದು ಬೆಳಗ್ಗೆ 9-30 ಗಂಟೆಗೆ ಸಂತ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಈ ಕಾರ್ಯಾಗಾರವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಉದ್ಘಾಟಿಸಲಿದ್ದಾರೆ.

    ಮುಖ್ಯ ಅಭ್ಯಾಗತರಾಗಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾದ ರೆ. ಡಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಸಂಘದ ನಿರ್ದೇಶಕಿಯಾಗಿರುವ ಶ್ರೀಮತಿ ಸುಭದ್ರಾ ರಾವ್, ನೃತ್ಯ ಸೌರಭ ನಾಟ್ಯಾಲಯ ಉಳ್ಳಾಲದ ನಿರ್ದೇಶಕರಾದ ವಿದ್ವಾನ್ ಪ್ರಮೋದ್ ಉಳ್ಳಾಲ್ ಭಾಗವಹಿಸಲಿದ್ದು, ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪ್ರಖ್ಯಾತ ರಂಗಭೂಮಿ ಕಲಾವಿದ, ನಿರ್ದೇಶಕ ಮತ್ತು ಬೆಳಕುತಜ್ಞರಾದ ಶ್ರೀ ಕ್ರಿಸ್ಟೋಫರ್ ಡಿಸೋಜ ನೀನಾಸಂ ಇವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.

    ಶಿಬಿರಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದ್ದು ಆಸಕ್ತರು (9686801878) ಹೆಸರು ನೋಂದಾಯಿಸಬಹುದೆಂದು ಸಂಸ್ಥೆಯ ನಿರ್ದೇಶಕಿ ಗುರು ವಿದುಷಿ ಸುಮಂಗಲಾ ರತ್ನಾಕರ್ ರಾವ್, ಟ್ರಸ್ಟಿ ಶ್ರೀ ಬಿ. ರತ್ನಾಕರ ರಾವ್ ಮತ್ತು ಸಂಘಟನಾ ಕಾರ್ಯದರ್ಶಿ ಶ್ರೀ ಶಶಿರಾಜ್ ರಾವ್ ಕಾವೂರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಅನಘಶ್ರೀ ಇವರ ನೃತ್ಯ ಪ್ರದರ್ಶನ | ನವೆಂಬರ್ 18
    Next Article ‘ಕಾವ್ಯ ಸಂಸ್ಕೃತಿ ಯಾನ’ ಚಿಕ್ಕಮಗಳೂರಿನ ಕಡೆಗೆ ಕಾವ್ಯದೀವಟಿಗೆಯ ಪಯಣ | ನವೆಂಬರ್ 17
    roovari

    Add Comment Cancel Reply


    Related Posts

    ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 11, 2025

    ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಸೆಪ್ಟೆಂಬರ್ 15 ಕೊನೆಯ ದಿನಾಂಕ

    June 11, 2025

    ಕನ್ನಡ ಸಾಹಿತ್ಯ ಪರಿಷತ್ತಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಮಿತ್ರಾ ವೆಂಕಟ್ರಾಜು ಆಯ್ಕೆ

    June 11, 2025

    ಕವನ | ಮುಂಜಾವಿನ ಬೆಡಗು

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.