Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಸದನದಲ್ಲಿ ‘ಓದು ಸಂವಾದ’ ಮತ್ತು ‘ಕೃತಿ ಬಿಡುಗಡೆ’ ಸಮಾರಂಭ | ನವೆಂಬರ್ 23 ಮತ್ತು 24
    Book Release

    ಸಾಹಿತ್ಯ ಸದನದಲ್ಲಿ ‘ಓದು ಸಂವಾದ’ ಮತ್ತು ‘ಕೃತಿ ಬಿಡುಗಡೆ’ ಸಮಾರಂಭ | ನವೆಂಬರ್ 23 ಮತ್ತು 24

    November 20, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.) ಇದರ ವತಿಯಿಂದ ದಿನಾಂಕ 23 ನವೆಂಬರ್ 2024ರಂದು ‘ಓದು-ಸಂವಾದ’ ಕಾರ್ಯಕ್ರಮ ಮತ್ತು ದಿನಾಂಕ 24 ನವೆಂಬರ್ 2024 ರಂದು ಕೃತಿ ಬಿಡುಗಡೆ ಸಮಾರಂಭವು ಮಂಗಳೂರಿನ ಉರ್ವಸ್ಟೋರ್ ಅಶೋಕ ನಗರ ಕಚೇರಿ ಬಳಿಯಿರುವ ಸಾಹಿತ್ಯ ಸದನದಲ್ಲಿ ನಡೆಯಲಿದೆ.

    ದಿನಾಂಕ 23 ನವೆಂಬರ್ 2024ರಂದು ಅಪರಾಹ್ನ 2-30 ಗಂಟೆಗೆ ನಡೆಯಲಿರುವ ‘ಓದು-ಸಂವಾದ’ ಕಾರ್ಯಕ್ರಮದಲ್ಲಿ ಲೇಖಕಿ ಉಷಾ ಪಿ. ರೈಯವರ ‘ಒಲ್ಲೆನೆನ್ನದಿರು ನಮ್ಮದಲ್ಲದ ನಾಳೆಗಳ’ (ಆತ್ಮಕಥನ ಭಾಗ -2) ಸಂವಾದ ನಡೆಯಲಿದೆ. ಶ್ರೀಮತಿ ವನಜಾಕ್ಷಿ ಉಳ್ಳಾಲ ಇವರು ಆಶಯ ಗೀತೆ ಹಾಗೂ ಶ್ರೀಮತಿ ಕಾತ್ಯಾಯಿನಿ ಭಿಡೆಯವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದು, ಕ.ಲೇ.ವಾ. ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ.

    ದಿನಾಂಕ 24 ನವೆಂಬರ್ 2024ರಂದು ಅಪರಾಹ್ನ 3-00 ಗಂಟೆಗೆ ನಡೆಯಲಿರುವ ಕೃತಿ ಬಿಡುಗಡೆ ಸಮಾರಂಭದಲ್ಲಿ ಚಂದ್ರಕಲಾ ನಂದಾವರ ಇವರ ‘ಸಾಹಿತ್ಯ ಕವಳ’ ಕೃತಿ ಲೋಕಾರ್ಪಣೆಗೊಳ್ಳಲಿದೆ. ಶ್ರೀಮತಿ ಆಕೃತಿ ಭಟ್ ಇವರು ಆಶಯ ಗೀತೆ ಹಾಗೂ ಶ್ರೀಮತಿ ಅರುಣಾ ನಾಗರಾಜ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದು, ಕ.ಲೇ.ವಾ. ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶೈಲಾ ಯು. ಇವರು ಕೃತಿ ಬಿಡುಗಡೆ ಹಾಗೂ ಪರಿಚಯ ನೀಡಲಿದ್ದಾರೆ.

    invitation

     

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ವೈಕಂ ಮುಹಮ್ಮದ್ ಬಷೀರ್ ಅವರ ‘ಪ್ರೇಮಪತ್ರ’   
    Next Article ಭಾಸ್ಕರ ರೈ ಕುಕ್ಕುವಳ್ಳಿಯವರ ಕವನ ಸಂಕಲನ ಲೋಕಾರ್ಪಣೆ – ವಿಚಾರಗೋಷ್ಠಿ
    roovari

    Add Comment Cancel Reply


    Related Posts

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    ‘ನುಡಿ ತೋರಣ’ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇದರ ತ್ರೈವಾರ್ಷಿಕ ಸಾಹಿತ್ಯ ಸಮಾವೇಶ -2025 | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.