Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೇರಳ ಶಾಲಾ ‘ಕಲೋತ್ಸವಂ’ನ ಸಮಾರೋಪ ಸಮಾರಂಭ
    Competition

    ಕೇರಳ ಶಾಲಾ ‘ಕಲೋತ್ಸವಂ’ನ ಸಮಾರೋಪ ಸಮಾರಂಭ

    November 22, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂಬಳೆ : ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದಿನಾಂಕ 20 ನವೆಂಬರ್ 2024ರಂದು ಸಂಜೆ ಕುಂಬಳೆ ಉಪಜಿಲ್ಲಾ ಮಟ್ಟದ 63ನೇ ಕೇರಳ ಶಾಲಾ ‘ಕಲೋತ್ಸವಂ’ನ ಸಮಾರೋಪ ಸಮಾರಂಭವು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಇವರು ಮಾತನಾಡಿ “ತುಳುನಾಡು ಸಾಂಸ್ಕೃತಿಕ ಪರಂಪರೆಯ ನೆಲೆಬೀಡು. ಕಾಸರಗೋಡು ಅನೇಕ ಕವಿಗಳು, ಕಲಾವಿದರನ್ನು ನಾಡಿಗೆ ನೀಡಿದೆ. ಕಲೋತ್ಸವವು ಅನೇಕ ಕಲಾವಿದರನ್ನು ನಾಡಿಗೆ ಸಮರ್ಪಿಸುವ ಉತ್ತಮ ವೇದಿಕೆಯಾಗಿದೆ. ಕಲೋತ್ಸವವು ಬದುಕಿನಲ್ಲಿ ಆದರ್ಶ, ಸಂಸ್ಕಾರ, ಗುಣ ನಡತೆ, ಸೇವಾತತ್ಪರ ತಲೆಮಾರನ್ನು ರೂಪಿಸಲು ಸಹಾಯ ಮಾಡುತ್ತದೆ. ಕಲೋತ್ಸವದ ಸ್ಪರ್ಧೆಗಳಲ್ಲಿ ಯಾರೂ ಸೋಲುವುದಿಲ್ಲ. ಗೆಲ್ಲುವುದೂ ಇಲ್ಲ. ಕಲೋತ್ಸವವು ಮಕ್ಕಳ ನಡುವಿನ ಸ್ಪರ್ಧೆಯಾಗಬೇಕೇ ಹೊರತು ಪೋಷಕರ ನಡುವಿನ ಸ್ಪರ್ಧೆಯಾಗಬಾರದು” ಎಂದು ಹೇಳಿದರು.

    ಕಾಸರಗೋಡಿನ ಶಾಸಕರಾದ ಎನ್.ಎ. ನೆಲ್ಲಿಕ್ಕುನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೋಮಶೇಖರ ಜೆ.ಎಸ್. ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂಬ್ದಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಮೀದ್ ಪೊಸಳಿಗೆ, ಎಣ್ಮಕಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಮ್ಲಾ ಇಬ್ರಾಹಿಂ, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ., ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಶ್ಯಾಮಲ ಆರ್. ಭಟ್, ಶ್ರೀ ಶಾರದಾಂಬಾ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕಿ ಶಾರದಾ ವೈ, ಕುಂಬಳೆ ಬಿ.ಆರ್‌.ಸಿ.ಯ ಬಿ.ಪಿ.ಸಿ. ಜಯರಾಮ ಮಾತನಾಡಿದರು.

    ಕೇರಳ ರಾಜ್ಯ ಶಾಲಾ ಒಲಿಂಪಿಕ್ಸ್ ಸ್ಪರ್ಧೆಯ 100 ಮೀಟರ್ ವಿಭಾಗದ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ನಿಯಾಸ್ ಅಹಮ್ಮದ್, ರಾಜ್ಯ ಸಬ್ ಜೂನಿಯರ್ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದ ಶೇಣಿಯ ಶ್ರೀ ಶಾರದಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿ ಅಭಿನವ್ ಎಸ್. ಇವರುಗಳನ್ನು ಸನ್ಮಾನಿಸಲಾಯಿತು. ಪ್ರಿನ್ಸಿಪಾಲ್ ಶಾಸ್ತ್ರ ಕುಮಾರ್ ಎ., ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ, ರಾಧಾಕೃಷ್ಣ ನಾಯಕ್ ಜೆ.ಎಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಉಮ್ಮರ್ ಕಂಗಿನಮೂಲೆ, ಪ್ರೈಮರಿ ಎಚ್‌.ಎಂ. ಫಾರಂ ಸಂಚಾಲಕ ವಿಷ್ಣುಪಾಲ್, ಕಾರ್ಯಕ್ರಮ ಆಯೋಜಕ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಊರಿನ ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು. ಕುಂಬಳೆ ಉಪ ವಿದ್ಯಾಧಿಕಾರಿ ಶಶಿಧರ ಸ್ವಾಗತಿಸಿ, ಶೇಣಿ ಪ್ರೌಢ ಶಾಖೆಯ ಮುಖ್ಯೋಪಾಧ್ಯಾಯ ಶ್ರೀಶ ಕುಮಾರ್ ಯಂ.ಪಿ. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 23
    Next Article ವಾಮಂಜೂರಿನಲ್ಲಿ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆ | ನವೆಂಬರ್ 23
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.