Subscribe to Updates

    Get the latest creative news from FooBar about art, design and business.

    What's Hot

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ವಿಶ್ವವಿದ್ಯಾಲಯದಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಮತ್ತು ಗೀತೋತ್ಸವ’ ಸಮಾರಂಭ
    Felicitation

    ಕೊಡಗು ವಿಶ್ವವಿದ್ಯಾಲಯದಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಮತ್ತು ಗೀತೋತ್ಸವ’ ಸಮಾರಂಭ

    December 2, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕೊಡಗು ವಿಶ್ವವಿದ್ಯಾಲಯ, ಕನ್ನಡ ಜಾನಪದ ಪರಿಷತ್ತು ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್ತು ಕೊಡಗು ಜಿಲ್ಲಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ ಸಮಾರಂಭ’ವು ದಿನಾಂಕ 29 ನವೆಂಬರ್ 2024ರಂದು ಕೊಡಗು ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ನಡೆಯಿತು.

    ಈ ಕಾರ್ಯಕ್ರಮವನ್ನು ಕೊಡಗಿನ ಪಾರಂಪರಿಕ ಕಲೆಯಾದ ‘ದುಡಿ’ಯನ್ನು ಬಾರಿಸುವ ಮೂಲಕ ಉದ್ಘಾಟಿಸಿದ ಕೊಡಗು ವಿ.ವಿ. ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಇವರು ಮಾತನಾಡಿ “ಮನುಷ್ಯನ ಬದುಕಿನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ರಾಜಕೀಯ ಇತಿಹಾಸದ ಎಷ್ಟೋ ಸಂಗತಿಗಳನ್ನು ಒಳಗೊಂಡ ಸಮಷ್ಟಿ ಪ್ರಜ್ಞೆಯ ಸೃಷ್ಟಿಯೇ ಜಾನಪದ. ಅದರಲ್ಲಿನ ವಿವೇಕಯುತ ಚಿಂತನೆಗಳು ನಮ್ಮ ನಾಡಿನ ಪರಂಪರೆಯನ್ನು ಶ್ರೀಮಂತಗೊಳಿಸಿವೆ. ಪೂರ್ವಜರು ಜತನದಿಂದ ಸಂರಕ್ಷಿಸಿಕೊಂಡು ಬಂದಿರುವ ಜಾನಪದವನ್ನು ಮುಂದಿನ ಪೀಳಿಗೆಗೆ ಜೋಪಾನವಾಗಿ ಒಯ್ಯಬೇಕಿದೆ. ಜಾನಪದ ಎಂಬುದು ವಾಸ್ತವಿಕ ಆಧಾರಗಳ ಮೇಲೆ ನಿಲ್ಲಬಲ್ಲ ವಿಜ್ಞಾನವಾಗಿದ್ದು, ಕಲೆಯ ಜೊತೆಗೆ ಶಾಸ್ತ್ರೀಯ ಮುಖವನ್ನು ಸಹ ಒಳಗೊಂಡಿದೆ. ಕಲೆಯ ಜೊತೆಗೆ ಶಾಸ್ತ್ರೀಯವಾಗಿರುವ ಜಾನಪದವನ್ನು ನಾವೆಲ್ಲರೂ ಅರಿಯಬೇಕಿದೆ. ಮನುಷ್ಯನ ಬದುಕನ್ನು ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವ ಜನಪದ ಮನುಷ್ಯನ ಆತ್ಮದೊಳಗೆ ಇರುವ ಬಹು ದೊಡ್ಡ ಕಲಾ ಪ್ರಾಕಾರವಾಗಿದೆ. ಜಾನಪದದಲ್ಲಿ ಕಂಸಾಳೆ, ವೀರಗಾಸೆ, ಡೊಳ್ಳುಕುಣಿತ, ಯಕ್ಷಗಾನ, ದುಡಿ, ಕೋಲಾಟ ಮೊದಲಾದ ಜಾನಪದ ಕಲೆಗಳು ವೈವಿಧ್ಯಮಯವಾಗಿ ಹಾಸು ಹೊಕ್ಕಾಗಿವೆ. ಕೇಳಿದಷ್ಟು ಮತ್ತೆ ಮತ್ತೆ ಕೇಳಬೇಕೆನ್ನುವ ಕಲೆ ಜಾನಪದ ಕಲೆ. ಬೀಸುವ ಕಲ್ಲು, ಕುಟ್ಟುವ ಒನಕೆ, ಕೇರುವ ಮರ ಮೊದಲಾದ ಜಾನಪದ ಸಂಸ್ಕೃತಿಗಳನ್ನು ನಶಿಸಲು ಬಿಡದೇ ಪೀಳಿಗೆಯಿಂದ ಪೀಳಿಗೆಗೆ ಮುಂದುವರಿಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮೆಲ್ಲರದ್ದಾಗಬೇಕು” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೊಡಗಿನ ಹೆಮ್ಮೆಯ ಹೆಣ್ಣು ಮಗಳು ಹಾಗೂ ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಪದ್ಮ ಶೇಖರ್ ಇವರು ಸನ್ಮಾನ ಸ್ವೀಕರಿಸಿ ಮಾತನಾಡಿ, “ನಾನು ಹುಟ್ಟಿ ಬೆಳೆದ ನೆಲದಲ್ಲಿ ಕೊಡಗು ವಿಶ್ವವಿದ್ಯಾಲಯವು ಸ್ಥಾಪನೆಯಾಗಿರುವುದು ಬಹು ದೊಡ್ಡ ಸಂತಸದ ಸಂಗತಿ. ಈ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುದಾನವನ್ನು ಕೋರುವ ನಿಟ್ಟಿನಲ್ಲಿ ಕೊಡಗಿನ ಮಗಳಾಗಿ ನಾನು ಕೂಡ ನಿಮ್ಮ ಜೊತೆ ಕೈಜೋಡಿಸುತ್ತೇನೆ. ಗುಣಮಟ್ಟದ ಶಿಕ್ಷಣಕ್ಕೆ ಕೊಡಗು ವಿಶ್ವವಿದ್ಯಾಲಯ ಆದ್ಯತೆ ನೀಡಲಿ. ಪ್ರತಿಭೆ ಮತ್ತು ಜ್ಞಾನದ ಮೂಲಕ ಸಾಧನೆಯ ಶಿಖರವೇರಲಿಕ್ಕೆ ಸಾಧ್ಯ ಇದೆ” ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕೊಡಗು ವಿ.ವಿ. ಕುಲಸಚಿವರು (ಮೌಲ್ಯಮಾಪನ) ಆದ ಡಾ. ಎಂ. ಸುರೇಶ್ ಅಲೆಟ್ಟಿಯವರು “ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದುವ ಮೂಲಕ ತಲ ತಲಾಂತರದಿಂದ ಬಂದಿರುವ ಹಾಗೂ ಪರಂಪರೆಯಲ್ಲಿ ಬೆಸೆದು ಹೋಗಿರುವ ಜಾನಪದವು ಅನಕ್ಷರಸ್ಥರಿಂದಲೇ ಬೆಳೆದು ಬಂದಿದೆ” ಎಂದರು.

    ಕೊಡಗು ವಿ.ವಿ. ನಿಕಟ ಪೂರ್ವ ಕುಲಸಚಿವ ಡಾ. ಸೀನಪ್ಪ ಇವರು ಮಾತನಾಡಿ, “ಕನ್ನಡ ನಾಡು-ನುಡಿ, ಸಂಸ್ಕೃತಿಯ ಸಂರಕ್ಷಣಾ ಹೊಣೆ, ಜಾನಪದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಂದರ ಬದುಕನ್ನು ರೂಪಿಸಿಕೊಳ್ಳುವುದು ನಮ್ಮ ಕರ್ತವ್ಯ. ಯಾವುದೇ ಅಧಿಕಾರದ, ಸಂಪ್ರದಾಯದ ಪೋಷಣೆಯಿಲ್ಲದೇ ತನ್ನಿಂದ ತಾನೇ ಹರಿದು ಬಂದು ಮಣ್ಣಿನ ಸಂಸ್ಕೃತಿಯ ಸಾರವಾಗಿರುವ ಜನಪದವನ್ನು ಮಕ್ಕಳಾದಿಯಾಗಿ ಎಲ್ಲರೂ ಉಳಿಸಿ ಬೆಳೆಸಬೇಕು” ಎಂದು ಹೇಳಿದರು.

    ಮೈಸೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೊಡಗು ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷರಾದ ಡಾ. ಕಾವೇರಿ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, “ಜಾನಪದ ಎಂಬುದು ಎಲ್ಲಾ ಸಂಸ್ಕೃತಿಗಳ ತಾಯಿ ಬೇರು. ಜಾಗತೀಕರಣದ ಪ್ರಭಾವದಿಂದ ನಶಿಸುತ್ತಿರುವ ಜನಪದ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ಸಂರಕ್ಷಿಸಬೇಕು” ಎಂದರು.

    ಮೈಸೂರು ಜಿಲ್ಲಾ ಕ.ಜಾ.ಪ. ಅಧ್ಯಕ್ಷರಾದ ಡಾ. ರಾಣಿಪ್ರಭಾ, ಖಜಾಂಚಿಗಳಾದ ಡಾ. ವಿನೋದ, ಜಂಟಿ ಕಾರ್ಯದರ್ಶಿಯಾದ ಡಾ. ರವಿಶಂಕರ ಜಿ., ಕ.ಜಾ.ಪ., ಎಸ್.ಆರ್. ಕ್ಷೇತ್ರ ಮೈಸೂರು ಇದರ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಟಿ.ಎನ್., ಕೊಡಗು ವಿ.ವಿ. ಸ್ನಾತಕ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಸಂಯೋಜಕರಾದ ಡಾ. ರವಿಶಂಕರ್, ವಿವಿಧ ವಿಭಾಗದ ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವೃಂದ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಡಾ. ಪದ್ಮ ಶೇಖರ್, ಜಾನಪದ ಕಲಾ ಸಾಧಕರಾದ ಕುಡಿಯರ ದೇವಕಿ, ಸುಳ್ಳಿಮಾಡ ಗೌರಿ ನಂಜಪ್ಪ ಹಾಗೂ ಕೊಡಗು ವಿ.ವಿ. ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಜೀವ್ ಹಾಗೂ ವಿದ್ಯಾಶ್ರೀ ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭ ಹೆಸರಾಂತ ಜಾನಪದ ಗಾಯಕರಾದ ಅಮ್ಮ ರಾಮಚಂದ್ರ, ಯರಗನಹಳ್ಳಿ ಶ್ರೀಧರ್ ಅವರಿಂದ ಗೀತೋತ್ಸವ ನಡೆಯಿತು. ಕೊಡಗು ವಿ.ವಿ. ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ನಿರೂಪಿಸಿ, ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಐ.ಕೆ. ಮಂಜುಳಾ ಸ್ವಾಗತಿಸಿ, ಉಪನ್ಯಾಸಕ ಡಾ. ರಮೇಶ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ಕುಮಾರವ್ಯಾಸ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಕವಿ-ಕಾವ್ಯ ಪರಿಚಯ ಭಾಷಣ ಸ್ಪರ್ಧೆ | ಡಿಸೆಂಬರ್ 06
    Next Article ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ತಾಳಮದ್ದಳೆ
    roovari

    Add Comment Cancel Reply


    Related Posts

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ಇಪ್ಪತ್ತನಾಲ್ಕು ಗಂಟೆಗಳ ಕಾಲ ನಿರಂತರ ಹಾಡಿ ವಿಶ್ವದಾಖಲೆ ನಿರ್ಮಿಸಿದ ಯಶವಂತ್ ಎಂ.ಜಿ.

    June 5, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.