Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸೊರಬದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ
    Kannada

    ಸೊರಬದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ

    December 9, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸೊರಬ : ಹಳೇಸೊರಬದ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದಿನಾಂಕ 28 ನವೆಂಬರ್ 2024ರಂದು ‘ಸಾಹಿತ್ಯ ರಚನಾ ಕಮ್ಮಟ’ವನ್ನು ಹಮ್ಮಿಕೊಳ್ಳಲಾಗಿತ್ತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕ.ಸಾ.ಪ. ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಇವರು ಮಾತನಾಡಿ “ಮಕ್ಕಳಿಗೆ ಶಾಲಾ ಕಲಿಕೆ ಹಂತದಲ್ಲಿಯೇ ಸಾಹಿತ್ಯಾಸಕ್ತಿ ಮೂಡಿಸಬೇಕು ಹಾಗೂ ಸ್ಪಷ್ಟವಾಗಿ ಓದುವ ಬರೆಯುವ ಮತ್ತು ಮಾತನಾಡುವುದನ್ನು ರೂಢಿಸಬೇಕು. ಇಲ್ಲಿ ಕಳೆದ ಹತ್ತೊಂಬತ್ತು ವರ್ಷಗಳಿಂದ ಸತತ ಪ್ರಯತ್ನದ ಭಾಗವಾಗಿ ಸಾಹಿತ್ಯ ಕಮ್ಮಟ ನಡೆಸಲಾಗುತ್ತಿದೆ. ಕನ್ನಡವೇ ಪರಿಸರದ ಭಾಷೆಯಾಗಿದ್ದು, ಮಕ್ಕಳಿಗಾಗಿ ಶಾಲೆಗಳಲ್ಲಿ ಕಮ್ಮಟವನ್ನು ಏರ್ಪಡಿಸಲಾಗುತ್ತಿದೆ. ಬರೆಯುವ ಕಲೆ ಉತ್ತಮವಾಗಬೇಕೆಂದರೆ ಹೆಚ್ಚು ಓದುವ ಹವ್ಯಾಸವನ್ನು ಮಕ್ಕಳು ಬೆಳೆಸಿಕೊಳ್ಳಬೇಕು. ಕನ್ನಡಕ್ಕೆ ಸುಮಾರು 2500 ವರ್ಷಗಳ ಇತಿಹಾಸ ಇರುವ ಹಿನ್ನೆಲೆಯಲ್ಲಿಯೇ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತಿದೆ. ಭಾಷಾ ಕಲಿಕೆ ಅತ್ಯಂತ ಜವಾಬ್ದಾರಿಯುತವಾಗಿದ್ದು, ರಾಜ್ಯೋತ್ಸವದ ಸಂದರ್ಭದಲ್ಲಿ ಸಂಭ್ರಮಿಸಿದರೆ ಸಾಲದು. ಮಕ್ಕಳಿಗೆ ಪಠ್ಯದ ಜೊತೆಗೆ ಸಾಹಿತ್ಯ ಅಭಿರುಚಿ ಮೂಡಿಸಲು ಕಥೆ, ಕವನ, ಪ್ರಬಂಧ ವಿಚಾರವಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ. ಅವುಗಳನ್ನು ಅರ್ಥೈಸಿಕೊಂಡು ಸಾಹಿತ್ಯ ಬರೆಯುವ ಪ್ರಯತ್ನ ಮಾಡಬೇಕು” ಎಂದು ತಿಳಿಸಿದರು.

    ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿ, “ಸಾಹಿತ್ಯ ಕಮ್ಮಟದಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. ಕನ್ನಡ ಸುಂದರ, ಸುಲಲಿತವಾದ ಭಾಷೆಯಾಗಿದ್ದು, ಅನ್ಯ ಭಾಷಿಕರನ್ನು ತನ್ನತ್ತ ಸೆಳೆಯುವ ಶಕ್ತಿ ಹೊಂದಿದೆ. ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ತಾಲೂಕು ಕೇಂದ್ರದಲ್ಲಿ ನಡೆದಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿ. ಸಂಘಟನೆಯಿಂದ ಸುಮಾರು 400 ಸಾಧಕರನ್ನು ಗುರುತಿಸಿ, ಗೌರವಿಸುವ ಕೆಲಸ ಮಾಡಲಾಗಿದೆ. ಇಂತಹ ಕಮ್ಮಟಗಳು ನಿರಂತರವಾಗಿ ನಡೆಯಬೇಕು” ಎಂದರು.

    ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಎಸ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಡಾ. ಶಾಂತಾರಾಮ್ ಪ್ರಭು, ಅಂಕಣ ಬರಹಗಾರ ಬಿ. ಚಂದ್ರೇಗೌಡ ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಸಿ. ಸಿಲ್ವಿಯಾ ಸಿಕ್ವೇರಾ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಶಿಕ್ಷಣ ಇಲಾಖೆಯ ಸಂಜೀವ ಕುಮಾ‌ರ್, ರವಿಕುಮಾ‌ರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ‘ನಿಬಂಧನ’ ಭರತನಾಟ್ಯ ಕಾರ್ಯಕ್ರಮ | ಡಿಸೆಂಬರ್ 08
    Next Article ಮಡಿಕೇರಿಯಲ್ಲಿ ಕೈಮುಡಿಕೆ ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ
    roovari

    Add Comment Cancel Reply


    Related Posts

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.