Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿರಾಸತ್ ನೆಲದಲ್ಲಿ ನೃತ್ಯದ ರಾಸಲೀಲೆ, ‘ತ್ರಿಪರ್ಣ’ ಶಾಂತಿಯ ಮಂತ್ರದ ಸಾಂಸ್ಕೃತಿಕ ಸಂಚಲನ
    Bharathanatya

    ವಿರಾಸತ್ ನೆಲದಲ್ಲಿ ನೃತ್ಯದ ರಾಸಲೀಲೆ, ‘ತ್ರಿಪರ್ಣ’ ಶಾಂತಿಯ ಮಂತ್ರದ ಸಾಂಸ್ಕೃತಿಕ ಸಂಚಲನ

    December 14, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ದಿನಾಂಕ 13 ಡಿಸೆಂಬರ್ 2024ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು.

    ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರದರ್ಶಿಸಿದರು. ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕವು ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು. ‘ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’ ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ ಸೃಷ್ಟಿಸಿತು. ಚೆಂಡು, ನೀರಾಟ, ಉಯ್ಯಾಲೆ, ಕೋಲಾಟವನ್ನುಬಯಕ್ಷ ರೂಪಕದಲ್ಲಿ ಬಿಂಬಿಸಿದರು. ಕೃಷ್ಣನ ಬಾಲ ಲೀಲೆ ಸಾರುವ ಕಾಳಿಂಗ ಮರ್ಧನ, ಕಂಸ ವಧೆ, ರಾಧೆಯರು, ವಸುದೇವ, ಪೂತನಿ ಸಂಹಾರದ ದೃಶ್ಯಾವಳಿಗಳನ್ನು ಅಂತಿಮವಾಗಿ ಮೂಡಿಸಿದ್ದು, ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿತು.

    ನಂತರ ವೇದಿಕೆಯಲ್ಲಿ ಮೊಳಗಿದ್ದು ಡೊಳ್ಳಿನ ಸದ್ದು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ನೆಲದ ದೇಸಿ ಕಲೆಯನ್ನು ಉಳಿಸುವ ಸಲುವಾಗಿ ರೂಪಿಸಿದ ಸಾಂಸ್ಕೃತಿಕ ತಂಡವು ಡೊಳ್ಳಿನ ಅಬ್ಬರದ ಅಲೆಯನ್ನೇ ಸೃಷ್ಟಿಸಿತು. ಡೊಳ್ಳು ಹಾಗೂ ತಾಳದ ಜೊತೆ ಕಸರತ್ತು ಮೈ ನವಿರೇಳಿಸಿತು. ಡೊಳ್ಳಿನಲ್ಲೂ ಹುಡುಗ-ಹುಡುಗಿಯರು ಸವಾಲ್ ಜವಾಬ್ ನಡೆಸಿದರು. ಕರ್ನಾಟಕದ ದೇಸಿ ಕಲೆಯಾದ ಡೊಳ್ಳು ಕುಣಿತವನ್ನು ಆಳ್ವಾಸ್ ನ ತಾಂತ್ರಿಕ ವಿದ್ಯಾರ್ಥಿಗಳು ಪ್ರದರ್ಶಿಸಿದಾಗ ಪ್ರೇಕ್ಷಕ ವರ್ಗವೇ ಧ್ವನಿಯಾಯಿತು. ಹುಡುಗ- ಹುಡುಗಿಯರ ಸ್ಪರ್ಧೆಯೇ ಏರ್ಪಟ್ಟು, ಕನ್ನಡ ಧ್ವಜ ಹಾರಾಡಿತು.

    ನಂತರ ದಾಂಡಿಯಾ ಗಾರ್ಭಾದ ಹೊಳಪು. ಗುಜರಾತ್‌ನಲ್ಲಿ ನವರಾತ್ರಿ ಸಂದರ್ಭದಲ್ಲಿ ದಾಂಡಿಯಾ ನರ್ತನ ಮಾಡುತ್ತಾರೆ. ಈ ದಾಂಡಿಯಾದಲ್ಲಿ ಕೃಷ್ಣ-ರಾಧೆಯರ ಮೋಹಕತೆ. ನವರಾತ್ರಿಯ ನವದುರ್ಗೆಯ ಆರಾಧನೆ ಸಂದರ್ಭದಲ್ಲಿ ಗುಜರಾತಿನಲ್ಲಿ ನರ್ತಿಸುವ ಗಾರ್ಭ ಮತ್ತು ದಾಂಡಿಯಾದ ನೃತ್ಯ. ರಾಧಾ-ಶ್ಯಾಮ ನರ್ತನವು ವಿದ್ಯಾರ್ಥಿ ಸಾಗರದ ನಡುವೆ ಪ್ರೀತಿಯ ಅಲೆ ಸೃಷ್ಟಿಸಿತು. ‘ರಾಧೆ ಶ್ಯಾಮ್’ ಹಾಡಿಗೆ ಹೆಜ್ಜೆ ಹಾಕಿದರು. ಕೋಲಾಟದ ಕೋಲು ದುರ್ಗಾ ದೇವಿಯ ದುಷ್ಟ ಸಂಹಾರದ ಕತ್ತಿಯ ಪ್ರತೀಕವಾಯಿತು. ಕೆಂಪು, ಗುಲಾಬಿ, ಹಳದಿ, ಕಿತ್ತಳೆ ಸೇರಿದಂತೆ ಪ್ರಖರ ಬಣ್ಣಗಳ ಚಾನ್ಯ, ಚೋಲಿ ಅಥವಾ ಘಾಗ್ರ ಚೋಲಿ, ಬಾಂದನಿ, ಅಭ್ಲಾ (ಕನ್ನಡಿ) ಸಹಿತ ದಪ್ಪನೆಯ ಗುಜರಾತಿ ಅಂಚನ್ನು ಹೊಂದಿದ ದುಪ್ಪಟ್ಟ ತೊಟ್ಟ ಹುಡುಗಿಯರು ಹೊಳೆವ ನೆಕ್ಲೆಸ್, ಬಳೆ, ಸೊಂಟ ಪಟ್ಟಿ, ಕಿವಿಯೋಲೆ ಸೇರಿದಂತೆ ಭಾರಿ ಆಭರಣಗಳನ್ನು ಧರಿಸಿ ಹೆಜ್ಜೆ ಹಾಕಿದಾಗ, ಸಾಂಪ್ರದಾಯಿಕ ಕೆಡಿಯಾ ಹಾಗೂ ಪೈಜಾಮ (ಧೋತಿ) ತೊಟ್ಟ ಶ್ವೇತ ವರ್ಣಧಾರಿ ಪುರುಷರು ಸಾಥ್ ನೀಡಿದ್ದು, ಅವರ ನರ್ತನಕ್ಕೆ ವರ್ಣಮಯ ಲೋಕವೇ ಸೃಷ್ಟಿಯಾಗಿತ್ತು.

    ಆಳ್ವಾಸ್ ತಂಡದ ಬಳಿಕ ಬೆಂಗಳೂರಿನ ಶ್ರೀ ರಾಜರಾಜೇಶ್ವರಿ ಕಲಾನಿಕೇತನದ ನೃತ್ಯ ಪಟುಗಳು ವಿದ್ವಾನ್ ವೀಣಾ ಮೂರ್ತಿ ವಿಜಯ ಅವರ ನಿರ್ದೇಶನದಲ್ಲಿ ಸಂತ ನಾರಾಯಣ ತೀರ್ಥರ ‘ಶಿವ ತರಂಗಂ’ ಪ್ರಸ್ತುತ ಪಡಿಸಿದರು. ಭಕ್ತಿ, ಕರ್ಮ, ರಾಜ ಯೋಗದ ಮಿಶ್ರಣದ ಈ ನೃತ್ಯಲಾಸ್ಯವು ಶಿವಾರಾಧನೆಯ ಭಾಗವಾಗಿದೆ. ಆಂಧ್ರಪ್ರದೇಶದ ಕೂಚುಪುಡಿಯಲ್ಲಿ ಹುಟ್ಟಿದ ಈ ನೃತ್ಯ ಪ್ರಕಾರವು ಭಾರತೀಯ ಪ್ರಮುಖ 8 ಶಾಸ್ತ್ರೀಯ ನೃತ್ಯ ಪ್ರಕಾರದಲ್ಲಿ ಪ್ರಮುಖವಾಗಿದೆ. ಮಡಿಕೆ ಮೇಲೆ ನಿಂತು ಹಾಗೂ ತಲೆಯ ಮೇಲೆ ತಂಬಿಗೆ ಇರಿಸಿ ತಟ್ಟೆ ಮೇಲೆ ನರ್ತಿಸಿದ ಸಮತೋಲನ ಆಕರ್ಷಕವಾಗಿ ಮೂಡಿಬಂತು.

    ಬೆಂಗಳೂರಿನ ಕಾರ್ತಿಸ್ ಪರ್ಫಾಮಿಂಗ್ ಆರ್ಟ್ಸ್ ಬೆಂಗಳೂರಿನ ಕಾರ್ತಿಕ್ ಶೆಟ್ಟಿ ಸಂಯೋಜನೆಯಲ್ಲಿ ಭಕ್ತಿ, ಭಾವಗಳನ್ನು ಪ್ರದರ್ಶಿಸುವ, ಕೃಷ್ಣನ ಲೀಲೆಗಳನ್ನು ಅನಾವರಣಾಗೊಳಿಸುವ ‘ಕೃಷ್ಣರಾಸ್’ ಅಪೂರ್ವ ನೃತ್ಯ ವೈಭವ ಸಾದರ ಪಡಿಸಿದರು. ನವಿಲು ಗರಿ, ನೀರ ಅಲೆ, ಒಡಿಸ್ಸಿ ವೇಷಭೂಷಣದಲ್ಲಿ ಗಮನ ಸೆಳೆದರು. ಅನಂತರ ಶಾಂತಿ, ಏಕತೆಯ ಮಂತ್ರದ ಜಪ. ಕೋಲ್ಕತ್ತಾದ ಆಶೀಮ್ ಬಂಧು ಭಟ್ಟಾಚಾರ್ಜಿ ಮಾರ್ಗದರ್ಶನದಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್ ನೃತ್ಯ ಸಂಗಮದ ‘ತ್ರಿಪರ್ಣ’ ಮೂಡಿ ಬಂತು. ಭರತನಾಟ್ಯ, ಕಥಕ್ ಹಾಗೂ ಒಡಿಸ್ಸಿ ಮೂರೂ ಭಾರತೀಯ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರವೇ ಆಗಿದ್ದರೂ, ಮೂಲ, ಶೈಲಿ, ತಂತ್ರ, ಹಿನ್ನೆಲೆ, ವೇಷಭೂಷಣ, ವಾದ್ಯಮೇಳ, ಕೇಶವಿನ್ಯಾಸ ಇತ್ಯಾದಿಯಲ್ಲಿ ವಿಭಿನ್ನತೆಯನ್ನು ಹೊಂದಿದೆ.

    ಪರ್ವತಶ್ರೇಣಿಯ ಒಡಿಶಾ ಮೂಲದ ಒಡಿಸ್ಸಿ, ಉತ್ತರ ಪ್ರದೇಶದ ಕಥಕ್ ಹಾಗೂ ತಮಿಳುನಾಡಿನ ಮೂಲದ ಭರತನಾಟ್ಯಂ ಮೂಡುಬಿದಿರೆಯ ಆಳ್ವಾಸ್ ವಿರಾಸತ್‌ನಲ್ಲಿ ಸಂಗಮಿಸಿ ನೃತ್ಯಲೋಕವನ್ನೇ ಸೃಷ್ಟಿಸಿತು. ಕಥಕ್ ಮುಖಭಾವ, ವೇಗ, ಶೈಲಿಯಲ್ಲಿದ್ದರೆ, ಒಡಿಶಾ ತನ್ನ ಆಂಗಿಕ ಹಾಗೂ ಹಸ್ತ ಚಲನೆಯಲ್ಲಿ ಗಮನ ಸೆಳೆಯಿತು. ‘ಆನಂದ ಮಂಗಳದಾಯಕ’ ಎಂಬ ಪ್ರೀತಿಯ ಆಧ್ಯಾತ್ಮಿಕ ಸಂದೇಶ ಹಾಗೂ ರವೀಂದ್ರನಾಥ ಠಾಗೋರ್ ಸಂದೇಶ ನೀಡಿದರು. ಬೇಧಭಾವ, ಹಿಂಸೆ, ಮೌಢ್ಯ ತೊಡೆದು ಹಾಕಿ, ಕ್ರೋಧ ದ್ವೇಷ ಹೊರ ಹಾಕಿ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಎಲ್ಲವೂ ಒಂದೇ ನಮ್ಮದು ಏಕತೆಯ ಮಂತ್ರ, ಅನಂತ ಪ್ರೇಮ, ಶಾಂತಿಯ ಮಂತ್ರ ಸಾರಿ ಎಂಬ ಸಂದೇಶವನ್ನು ತ್ರಿಪರ್ಣ ಮೂಲಕ ನೀಡಿದರು. ನಿತೇಶ್ ಮಾರ್ನಾಡು ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಘಟಕಿ ರೇಖಾ ಸುದೇಶ್ ರಾವ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ
    Next Article ಗುರು ನಿವಾಸದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣ ದಂಪತಿಗಳಿಗೆ ಅಭಿವಂದನೆ
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.