Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ
    Awards

    ಯಕ್ಷಗಾನ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ

    December 16, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ವೇದಿಕೆ ಹಾಗೂ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ದಿನಾಂಕ 14 ಡಿಸೆಂಬರ್ 2024ರಂದು ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿತು.

    ಯಕ್ಷಗಾನ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ ಈ ವೇಳೆ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಅರುವ ಕೊರಗಪ್ಪ ಶೆಟ್ಟಿ ಮಾತನಾಡಿ “ಕುಂಬ್ಳೆ ಸುಂದರ ರಾವ್ ಜೊತೆ ಅನ್ಯೋನ್ಯ ಸಂಬಂಧ ಹೊಂದಿದ್ದೆ. ಅವರಿಂದಾಗಿ ನನಗೆ ಸಂಘದ ಸಂಪರ್ಕ ಸಿಕ್ಕಿತು. ನನ್ನ ಯಕ್ಷಗುರು ಪಡ್ರೆ ಚಂದು. ಆದರೆ, ಯಕ್ಷಗಾನ ರಂಗದಲ್ಲಿ ನನಗೆ ವ್ಯಕ್ತಿತ್ವ ಕರುಣಿಸಿದ್ದು ಕುಂಬ್ಳೆ” ಎಂದರು.

    ಸಂಸ್ಮರಣಾ ಭಾಷಣ ಮಾಡಿದ ಯಕ್ಷಗಾನ ಅರ್ಥಧಾರಿ ಭಾಸ್ಕರ ರೈ ಕುಕ್ಕುವಳ್ಳಿ, “ಕುಂಬ್ಳೆ ಸುಂದರ ರಾವ್ ಅವರು ಯಕ್ಷಗಾನ ರಂಗದ ಪ್ರಾತಃಸ್ಮರಣೀಯರು. ಯಕ್ಷಗಾನದಲ್ಲಿ ಅರ್ಥಗಾರಿಕೆಗೆ ಹೊಸ ಆಯಾಮ ನೀಡಿದ ಇವರು ಅಮೋಘ ಮಾತಿನ ಸಾಹಿತ್ಯದ ಮೂಲಕವೇ ಅಭಿಮಾನಿಗಳನ್ನು ಸೆಳೆಯುತ್ತಿದ್ದ ಅಪ್ರತಿಮ ಕಲಾವಿದ. ತಾಳಮದ್ದಳೆಯಲ್ಲಿ ಅವರ ಮಾತುಗಾರಿಕೆ ಅಸಾಧಾರಣ. ಅವರದು ಪ್ರೇರಣಾದಾಯಕ ಹಾಗೂ ಸ್ನೇಹಶೀಲ ವ್ಯಕ್ತಿತ್ವ. ಶಾಸಕನಾದ ಬಳಿಕವೂ ಸರಳ, ಸಜ್ಜನಿಕೆಯ ವ್ಯಕ್ತಿತ್ವನ್ನು ಬಿಟ್ಟು ಕೊಡದೇ ಜನರ ನಡುವೆ ಸದಾ ಇದ್ದವರು” ಎಂದರು.

    ಅಗರಿ ಎಂಟರ್‌ಪ್ರೈಸಸ್ ಮಾಲೀಕ ಆಗರಿ ರಾಘವೇಂದ್ರ ರಾವ್, “ಕುಂಬ್ಳೆ ಹೆಸರು ಕೇಳುವಾಗಲೇ ವಿದ್ಯುತ್ ಸಂಚಾರವಾಗುತ್ತದೆ. ಶಾಸಕರಾಗಿ ಕಾರ್ಯ ನಿರ್ವಹಿಸಿದ ಏಕೈಕ ಯಕ್ಷಗಾನ ಕಲಾವಿದ ಅವರು. ಮುಂದಿನ ತಲೆಮಾರಿನ ಕಲಾವಿದರಿಗೂ ಅವರು ಪ್ರೇರಣೆ” ಎಂದರು.

    ಹಿರಿಯ ಸಾಹಿತಿ ನಾ. ದಾಮೋದರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಸ್ವಾಗತಿಸಿ, ಕುಂಬ್ಳೆ ಸುಂದರ ರಾವ್ ಅವರ ಅಳಿಯ ಸತ್ಯನಾರಾಯಣ ರಾವ್ ವಂದಿಸಿ, ರಂಗ ಸಂಗಾತಿಯ ಶಶಿರಾಜ್ ಕಾವೂರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಹಿರಿಯ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ಸುಧನ್ವ ಮೋಕ್ಷ’ ಯಕ್ಷಗಾನ ತಾಳಮದ್ದಲೆ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ
    Next Article ಲೀಲಾವತಿ ಬೈಪಡಿತ್ತಾಯ ಸಂಸ್ಮರಣೆ
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.