Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ವಿವೇಕಾನಂದ ಶಾಲೆಯಲ್ಲಿ ‘ನೃತ್ಯೋತ್ಕ್ರಮಣ’ ರಂಗಪ್ರವೇಶ ಸ್ಮೃತಿ ಸಂಧ್ಯಾ | ಜನವರಿ 11

    January 10, 2026

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ಹನುಮದ್ವಿಲಾಸ’ ಯಕ್ಷಗಾನ ಪ್ರದರ್ಶನ
    Yakshagana

    ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ಹನುಮದ್ವಿಲಾಸ’ ಯಕ್ಷಗಾನ ಪ್ರದರ್ಶನ

    December 23, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ತೆಕ್ಕಟ್ಟೆ: ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಇವರ ‘ಸಿನ್ಸ್ – 1999 ಶ್ವೇತಯಾನ – 87’ ಕಾರ್ಯಕ್ರಮದಡಿಯಲ್ಲಿ ರಸರಂಗ ಪ್ರಸ್ತುತ ಪಡಿಸಿದ ‘ಹನುಮದ್ವಿಲಾಸ’ ಯಕ್ಷಗಾನ ಪ್ರದರ್ಶನವು ದಿನಾಂಕ 22 ಡಿಸೆಂಬರ್ 2024ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು.
    ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಧನಸಹಾಯ ಯೋಜನೆಯಡಿಯಲ್ಲಿ ಯಕ್ಷಗಾನದ ಹಿರಿಯ ಕಲಾವಿದ ಚಂದ್ರ ಕುಲಾಲ್ ನೀರ್ಜಡ್ಡು ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸಿ ಪುರಸ್ಕೃತ ಉದಯ್ ಹೊಸಾಳ ಈವರನ್ನು ಅಭಿನಂದಿಸಲಾಯಿತು. ಗೌರವಾನ್ವಿತರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ  ತಲ್ಲೂರು ಶಿವರಾಮ ಶೆಟ್ಟಿ “ಇಳಿ ವಯಸ್ಸಿನಲ್ಲಿಯೂ ಕ್ರಿಯಾಶೀಲರಾಗಿರಬೇಕಾದರೆ ಕಲೆಯ ಹಾಗೂ ಇನ್ನಿತರ ಸಂಘಟನೆಯ ಮುಖ್ಯಸ್ಥರಾಗಿದ್ದಾಗ ಮಾತ್ರ ಸಾಧ್ಯ. ಇಂತಹ ಕ್ರಿಯಾಶೀಲರನ್ನು ಗುರುತಿಸುವ ಕಾರ್ಯ ಸರಕಾರದಿಂದ ಆಗಬೇಕು. ಮಕ್ಕಳು, ಮಹಿಳೆಯರು ಯಕ್ಷರಂಗಕ್ಕೆ ಪಾದಾರ್ಪಣ ಮಾಡುವ ಸಂಖ್ಯೆ ಹೆಚ್ಚಾಗಬೇಕು. ಕಥೆಗೆ ಹಾಗೂ ಕಲೆಗೆ ಲೋಪ ಆಗದಂತೆ ರಂಗದಲ್ಲಿ ಉಳಿಸಿ, ದಾಟಿಸುವ ಕಾರ್ಯ ಸಂಘ ಸಂಸ್ಥೆಗಳಿಂದ ಸಾಧ್ಯ.” ಎಂದರು.
    ಮಂಗಳೂರು ಯಕ್ಷಧಾಮದ ಜನಾರ್ದನ ಹಂದೆ ಮಾತನಾಡಿ “ಕಲಾವಿದರನ್ನು ಅವಕಾಶ ಕೊಟ್ಟು ಪ್ರೋತ್ಸಾಹಿಸುವ ಕಾರ್ಯ ಪ್ರಶಂಸನೀಯ. ಸರ್ವಾಂಗ ಸುಂದರ ಕಲೆಯಾದ ಯಕ್ಷಗಾನವನ್ನು ಈ ವರೆಗೆ ಪೋಷಿಸಿ, ಈ ಜನಾಂಗಕ್ಕೆ ದಾಟಿಸಿದ ಗಣ್ಯರನೇಕರ ಆಶೋತ್ತರಗಳನ್ನು ಇಂದಿನ ಸಮಾಜ ಉತ್ತಮ ಪ್ರದರ್ಶನ ನೀಡಿ ಮುಂದೆ ದಾಟಿಸಬೇಕು. ಉಭಯ ಸಂಸ್ಥೆಗಳ ಸಾಧನೆ ವರ್ಣನಾತೀತ.” ಎಂದರು.
     ಯಕ್ಷಗಾನದ ಅಭಿಮಾನಿ ಮೋಹನಚಂದ್ರ ಪಂಜಿಗಾರು, ಸಕು ರಮೇಶ್, ವೀಣಾ ಕಾರಂತ್, ರಜನಿ ಹಂದೆ, ಗಾಯತ್ರಿ ಹೆಬ್ಬಾರ್, ಪಿ. ಶ್ರೀಧರ ಹಂದೆಯವರ ಪುತ್ರಿಯರು ಉಪಸ್ಥಿತರಿದ್ದರು. ಪಾರ್ವತಿ ಮೈಯ್ಯ, ನಮನ ಹೇರ್ಳೆ, ಸಮ್ಮಾನ ಪತ್ರ ವಾಚಿಸಿದರು. ಬಳಿಕ ಪ್ರಸಿದ್ಧ ಬಯಲಾಟ ಮೇಳದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ‘ಹನುಮದ್ವಿಲಾಸ’ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸರಕಾರಿ ಪ್ರೌಢಶಾಲೆ ಮೂಡುಶೆಡ್ಡೆಯಲ್ಲಿ ‘ಕಲಾದರ್ಶನ ದತ್ತಿ ಉಪನ್ಯಾಸ’ 
    Next Article ಕೊಡವ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ | ಜನವರಿ 20
    roovari

    Add Comment Cancel Reply


    Related Posts

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.