Subscribe to Updates

    Get the latest creative news from FooBar about art, design and business.

    What's Hot

    ವಿದ್ವಾನ್ ಯಶವಂತ್ ಎಂ. ಜಿ. ಇವರಿಗೆ ‘ಜನಮಾನಸ ಗೌರವ’

    October 3, 2025

    ‘ಕಥೆ ಕೇಳೋಣ ಬನ್ನಿ’ ಕಾರ್ಯಕ್ರಮದ 900ನೇ ವಿಶೇಷ ಸಂಚಿಕೆ | ಅಕ್ಟೋಬರ್ 04

    October 3, 2025

    ಉಡುಪಿಯ ರಂಗಭೂಮಿ (ರಿ.) ಸಂಸ್ಥೆಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

    October 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಚ್ಚಿಲದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ದ ಸಮಾರೋಪ ಸಮಾರಂಭ
    Yakshagana

    ಉಚ್ಚಿಲದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ದ ಸಮಾರೋಪ ಸಮಾರಂಭ

    December 30, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಚ್ಚಿಲ : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುತ್ತಿರುವ ‘ಕಿಶೋರ ಯಕ್ಷಗಾನ ಸಂಭ್ರಮ 2024’ ಪ್ರಯುಕ್ತ ಕಾಪು ವಿಧಾನ ಸಭಾ ವ್ಯಾಪ್ತಿಗೆ ಸೇರಿದ ಎಂಟು ಶಾಲೆಗಳ ಯಕ್ಷಗಾನ ಪ್ರದರ್ಶನವು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಆಶ್ರಯದಲ್ಲಿ, ದೇವಳದ ವಠಾರದಲ್ಲಿ ನಡೆದಿದ್ದು, ಅದರ ಸಮಾರೋಪ ಸಮಾರಂಭವು ದಿನಾಂಕ 23 ಡಿಸೆಂಬರ್ 2024ರಂದು ಜರಗಿತು.

    ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ ಶೆಟ್ಟಿಯವರು ಮಾತನಾಡಿ “ಯಕ್ಷ ಶಿಕ್ಷಣ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚು ಶಾಲೆಗಳಿಗೆ ಇದನ್ನು ವಿಸ್ತರಿಸೋಣ” ಎಂದರು. ಈ ಮಹಾಭಿಯಾನದ ಯಶಸ್ಸಿಗೆ ಕಾರಣರಾದ ಕಲಾರಂಗದ ಕಾರ್ಯಕರ್ತರನ್ನು ಅಭಿನಂದಿಸಿದರು. ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ.ಎನ್. ಭಟ್, ಗುರು ಬನ್ನಂಜೆ ಸಂಜೀವ ಸುವರ್ಣ, ನಿವೃತ್ತ ಪ್ರಾಧ್ಯಾಪಕ ಡಾ. ಚಂದ್ರಶೇಖರ ಶೆಟ್ಟಿ, ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ದ.ಕ. ಮೊಗವೀರ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ ಹೆಜಮಾಡಿ, ಕಲಾ ಗಂಗೋತ್ರಿಯ ಸದಾಶಿವ ಅಭ್ಯಾಗತರಾಗಿ ಭಾಗವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಉಪಾಧ್ಯಕ್ಷ ವಿ.ಜಿ. ಶೆಟ್ಟಿ ಉಪಸ್ಥಿತರಿದ್ದರು.

    ಪ್ರದರ್ಶನ ನೀಡಿದ ಶಾಲೆಗಳ ಐವರು ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಶಾಲಾ ಮುಖ್ಯೋಪಾಧ್ಯಾಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನಾರಾಯಣ ಎಂ. ಹೆಗಡೆ ಸ್ವಾಗತಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಲಾರಂಗದ ಕಾರ್ಯಕರ್ತರಾದ ಕೆ. ಅಜಿತ್ ಕುಮಾರ, ಕಿಶೋರ ಸಿ. ಉದ್ಯಾವರ, ನಾಗರಾಜ ಹೆಗಡೆ ಸಹಕರಿಸಿದರು. ಸಮಾರಂಭದ ಪೂರ್ವದಲ್ಲಿ ಉದ್ಯಾವರದ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ನಿರಂಜನ ಭಟ್ ನಿರ್ದೇಶನದಲ್ಲಿ ‘ಕೃಷ್ಣಾರ್ಜುನ ಕಾಳಗ’ ಬಳಿಕ ಉಚ್ಚಿಲದ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನಿಶ್ವಲ್ ತೀರ್ಥಹಳ್ಳಿ ನಿರ್ದೇಶನದ ‘ಜಾಂಬವತೀ ಕಲ್ಯಾಣ’ ಪ್ರಸಂಗಗಳು ಪ್ರಸ್ತುತಗೊಂಡವು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಕೆಂಡದ ರೊಟ್ಟಿ’ ದಾಂಪತ್ಯ ಬದುಕನ್ನು ಫೋಕಸ್ ಆಗಿಟ್ಟುಕೊಂಡ ಕಾದಂಬರಿ
    Next Article ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬದ ಪ್ರಯುಕ್ತ ‘ರಜತ ರಂಗು’ ಸಮಾರಂಭ | ಜನವರಿ 05
    roovari

    Add Comment Cancel Reply


    Related Posts

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಯಕ್ಷಗಾನ ಸಪ್ತೋತ್ಸವ -2025’ | ಅಕ್ಟೋಬರ್ 04ರಿಂದ 10

    October 2, 2025

    ಯಕ್ಷ ಅಭಿಮಾನಿ ಬಳಗ ಟ್ರಸ್ಟ್ (ರಿ), ಸುರತ್ಕಲ್ ಇದರ ದಶಮ ಸಂಭ್ರಮ | ಅಕ್ಟೋಬರ್ 04

    September 30, 2025

    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ನವರಾತ್ರಿ ಕಾರ್ಯಕ್ರಮದಲ್ಲಿ ತಾಳಮದ್ದಳೆ

    September 30, 2025

    ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಸಂಪನ್ನಗೊಂಡ ‘ಪೊಳಲಿ ಯಕ್ಷೋತ್ಸವ’

    September 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.