Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » 2025ರ ‘ಈ ಹೊತ್ತಿಗೆ’ ಕಥಾ ಮತ್ತು ಕಾವ್ಯ ಪ್ರಶಸ್ತಿ ಪ್ರಕಟ
    Awards

    2025ರ ‘ಈ ಹೊತ್ತಿಗೆ’ ಕಥಾ ಮತ್ತು ಕಾವ್ಯ ಪ್ರಶಸ್ತಿ ಪ್ರಕಟ

    January 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶಿರಸಿ ತಾಲೂಕಿನ ಸಣ್ಣಕೇರಿಯ ಪೂರ್ಣಿಮಾ ಭಟ್ಟ ಅವರ ‘ಕತೆ ಜಾರಿಯಲ್ಲಿರಲಿ’ ಅಪ್ರಕಟಿತ ಕಥಾಸಂಕಲನಕ್ಕೆ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ಹಾಗೂ ಬೆಳಗಾವಿ ಜಿಲ್ಲೆ ಮೋಳೆಯ ಡಾ. ವಿ.ಎ. ಲಕ್ಷ್ಮಣ ಅವರ ‘ಪರಿಮಳದ ಬಾಕಿ ಮೊತ್ತ’ ಅಪ್ರಕಟಿತ ಕವನ ಸಂಕಲನಕ್ಕೆ ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ಪ್ರಕಟಿಸಲಾಗಿದೆ.

    ಕಥೆ ವಿಭಾಗಕ್ಕೆ ‘ಸುಧಾ’ ವಾರ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಹಾಗೂ ಕಾವ್ಯ ವಿಭಾಗಕ್ಕೆ ದೂರದರ್ಶನದ ನಿರ್ದೇಶಕಿ ಆರತಿ ಎಚ್.ಎನ್. ತೀರ್ಪುಗಾರರಾಗಿದ್ದರು. ಎರಡೂ ಪ್ರಶಸ್ತಿಗಳು ತಲಾ ರೂ.10,000/- ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ.

    ಪೂರ್ಣಿಮಾ ಭಟ್ಟ ಸಣ್ಣಕೇರಿ :
    ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ವಿಜೇತರಾದ ಪೂರ್ಣಿಮಾ ಭಟ್ಟ ಸಣ್ಣಕೇರಿಯವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು, ಇವರು ಕೆಲ ಕಾಲ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಕೆಲ ವರ್ಷ ಪತ್ರಿಕೆಗಳಲ್ಲಿ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದು, ಪ್ರಸ್ತುತ ಮಕ್ಕಳಿಗೆ ಮನೆಪಾಠ ಮಾಡುವ ಮೂಲಕ ಕನ್ನಡ ಕಲಿಸುತ್ತಿದ್ದಾರೆ. ಇವರು ಬರೆದ ಕತೆ, ಕವನ, ಲೇಖನಗಳು ಪತ್ರಿಕೆಗಳಲ್ಲಿ, ವಿಶೇಷಾಂಕಗಳಲ್ಲಿ ಪ್ರಕಟಗೊಂಡಿವೆ.

    ಡಾ. ಲಕ್ಷ್ಮಣ ವಿ.ಎ. :
    ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ವಿಜೇತರಾದ ಡಾ. ಲಕ್ಷ್ಮಣ ವಿ.ಎ. ಇವರು ವೃತ್ತಿಯಲ್ಲಿ ವೈದ್ಯರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಇವರ ಪ್ರಕಟಿತ ಕೃತಿಗಳೆಂದರೆ ‘ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ’, ‘ಅಪ್ಪನ ಅಂಗಿ’, ‘ಕಾಯಿನ್ ಬೂತ್’ ಕವನ ಸಂಕಲನಗಳು, ‘ಗರ್ದಿ ಗಮ್ಮತ್ತು ನೋಡಾ ಗೋಲಗುಮ್ಮಟ ನೋಡಾ’, ‘ಮಿಲ್ಟ್ರಿ ಟ್ರಂಕು’ ಎಂಬ ಕಿರು ಪ್ರಬಂಧ ಸಂಕಲನಗಳು, ‘ಕವಲುಗುಡ್ಡ’ ಕಾದಂಬರಿ ಮತ್ತು ‘ಜಿರಿಮಳೆಯ ಕಣ್ಣು’ ಕಥಾ ಸಂಕಲನ.

    Literature
    Share. Facebook Twitter Pinterest LinkedIn Tumblr WhatsApp Email
    Previous Article‘ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ’ಗೆ ಶ್ರೀಮತಿ ಕೂಡಕಂಡಿ ಓಂಶ್ರೀ ದಯಾನಂದ ಇವರ ಕೃತಿ ಆಯ್ಕೆ
    Next Article ತಿಂಗಳ ನಾಟಕ ಸಂಭ್ರಮದಲ್ಲಿ ‘ವಾಲಿವಧೆ’ ನಾಟಕ ಪ್ರದರ್ಶನ | ಜನವರಿ 18
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.