Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಮಣಿಪಾಲ ಅಂದು-ಇಂದು ‘ಮಿನಿ ಕಾಫಿಟೇಬಲ್’ ಚಿತ್ರ ಸಂಪುಟ ಲೋಕಾರ್ಪಣೆ | ಫೆಬ್ರವರಿ 01
    Book Release

    ಉಡುಪಿ ಮಣಿಪಾಲ ಅಂದು-ಇಂದು ‘ಮಿನಿ ಕಾಫಿಟೇಬಲ್’ ಚಿತ್ರ ಸಂಪುಟ ಲೋಕಾರ್ಪಣೆ | ಫೆಬ್ರವರಿ 01

    January 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮೂರುದಶಕಗಳ ಉಡುಪಿಯ ಪ್ರಗತಿಯ ಕುರಿತಾಗಿ ಚಿತ್ರಗಳ ಮೂಲಕ ಸಾಕ್ಷೀಕರಿಸುವ ವಿಶಿಷ್ಟ ‘ಮಿನಿ ಕಾಫಿಟೇಬಲ್’ ಪುಸ್ತಕ ದಿನಾಂಕ 01 ಫೆಬ್ರವರಿ 2025ರಂದು ಸಂಜೆ 4-30 ಗಂಟೆಗೆ ಉಡುಪಿಯ ಶಾರದಾ ಕಲ್ಯಾಣ ಮಂಟಪದ ಬಳಿ ಇರುವ ಯಕ್ಷಗಾನ ಕಲಾ ರಂಗದ ಐ.ವೈ.ಸಿ. ಹವಾ ನಿಯಂತ್ರಿಕ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ಮಣಿಪಾಲ ವಿ.ವಿ.ಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಕೃತಿ ಬಿಡುಗಡೆಗೊಳಿಸಲಿದ್ದು, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಇದರ ಕಾರ್ಯನಿರ್ವಾಹಕ ಅಧ್ಯಕ್ಷರಾದ ಶ್ರೀ ಸತೀಶ್ ಯು. ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಯಶ್ ಪಾಲ ಸುವರ್ಣ, ಅದಾನಿ ಸಮೂಹದ ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಿಶೋರ್ ಆಳ್ವ, ಹಿರಿಯ ಛಾಯಾಚಿತ್ರ ಕಲಾವಿದ ಯಜ್ಞ ಮಂಗಳೂರು ಇವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

    ಭೂತರಾಜ ಪ್ರಕಾಶನದ 4ನೇ ಕೃತಿ ಇದಾಗಿದ್ದು, ಉಡುಪಿಯ 30 ವರ್ಷಗಳ ಬೆಳವಣಿಗೆ ಕುರಿತು ಈ ಪುಸ್ತಕ ಬೆಳಕು ಚೆಲ್ಲಲಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಚಿತ್ರ ಕಲಾವಿದ ಆಸ್ಟ್ರೋ ಮೋಹನ್ 30 ವರ್ಷಗಳ ಹಳೆಯ ಚಿತ್ರಗಳನ್ನು ನೀಡಿದ್ದಾರೆ. ಉಡುಪಿ ಜಿಲ್ಲೆಗೂ ಮುನ್ನ ಇದ್ದ ಪರಿಸರ ಮತ್ತು ಅಭಿವೃದ್ಧಿ ಹೊಂದಿದ ಅದೇ ಸ್ಥಳಗಳನ್ನ ಅಕ್ಕ ಪಕ್ಕದಲ್ಲಿರಿಸಿ ಪುಸ್ತಕವನ್ನು ಕಟ್ಟಲಾಗಿದೆ ಎಂದು ಪ್ರಕಾಶಕರಾದ ಶ್ರೀಮತಿ ಪ್ರವೀಣಾ ಮೋಹನ್ ಅವರು ಮಾಹಿತಿ ನೀಡಿದ್ದಾರೆ.

    ಉಡುಪಿಯ ಸ್ಥಿತಿಗತಿಯ ಬಗ್ಗೆ ಹಿಂದಿನ ಮತ್ತು ವರ್ತಮಾನದ ಕುರಿತು ಸಚಿತ್ರ ಮಾಹಿತಿ ನೀಡುವ ಈ ಪುಸ್ತಕವು ಭವಿಷ್ಯದ ಬೆಳವಣಿಗೆಯ ಕುರಿತು ಎಚ್ಚರಿಕೆಯ ಗಂಟೆಯನ್ನೂ ಬಾರಿಸುತ್ತದೆ. ಉದಯವಾಣಿಯ ವಿಶ್ರಾಂತ ಸಂಪಾದಕರಾದ ಶ್ರೀ ಗುರುರಾಜ್ ಮುನ್ನುಡಿ ಬರೆದಿದ್ದು, ಫೋಟೋಗ್ರಫಿ ಸೊಸೈಟಿ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀ ನಾರಾಯಣ ಪಂಜೆ ಸಂದೇಶ ನೀಡಿದ್ದಾರೆ.

     

    Book release
    Share. Facebook Twitter Pinterest LinkedIn Tumblr WhatsApp Email
    Previous Articleಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 13 ‘ನಾಟ್ಯ ಮೋಹನ ನವತ್ಯುತ್ಸಹ’ | ಜನವರಿ 29
    Next Article ವಿಶೇಷ ಲೇಖನ | ಕೃತಿ ವಿಭೂತಿ ಪುರುಷ ಸಾ.ಶಿ. ಮರುಳಯ್ಯ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೊ’ ಕಥಾ ಸಂಕಲನ ಲೋಕಾರ್ಪಣೆ

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.