Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟಿನಲ್ಲಿ ದತ್ತಿನಿಧಿ ಕಾರ್ಯಕ್ರಮ
    Literature

    ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟಿನಲ್ಲಿ ದತ್ತಿನಿಧಿ ಕಾರ್ಯಕ್ರಮ

    January 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ಇದರ ವತಿಯಿಂದ ಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟ್ (ರಿ.) ಕಾಟಿಪಳ್ಳ ಮತ್ತು ಕ.ಸಾ.ಪ. ಸುರತ್ಕಲ್ ಹೋಬಳಿ ಘಟಕದ ಸಹಯೋಗದಲ್ಲಿ ‘ಪದ್ಮಾ ಶೆಣೈ, ಲಲಿತಾ ರೈ, ಎ.ಪಿ. ಮಾಲತಿ ಮತ್ತು ಶ್ರಿಕಲಾ ಉಡುಪ’ ದತ್ತಿನಿಧಿ ಕಾರ್ಯಕ್ರಮವು ದಿನಾಂಕ 25 ಜನವರಿ 2025ರಂದು ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟ್ ಕಾಟಿಪಳ್ಳದಲ್ಲಿ ನಡೆಯಿತು.

    ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕ.ಲೇ.ವಾ.ದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ‘ಪ್ರವಾಸ ಪ್ರಬಂಧ’ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಕ್ರಮ್ ಶೈಲೇಶ ನಾಯಕ್, ವರ್ಷಿಣಿ, ರೂಪಾ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಅರ್ಜುನ್ ಎಂ. ಮತ್ತು ವರುಣ್ ಪ್ರೋತ್ಸಾಹಕ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಿದ ಮುಖ್ಯ ಅತಿಥಿ, ಹಿರಿಯ ಲೇಖಕಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಜಾನಕಿ ಬ್ರಹ್ಮಾವರರವರು ವಿದ್ಯಾರ್ಥಿಗಳಿಗೆ ಪ್ರವಾಸ ಹೊರಡುವ ಮೊದಲು ಮಾಡಬೇಕಾದ ಪೂರ್ವ ತಯಾರಿ ಮತ್ತು ತಾವು ಭೇಟಿಕೊಟ್ಟ ಸ್ಥಳಗಳ ಬಗ್ಗೆ ತಮ್ಮ ಅನುಭವ, ಅನಿಸಿಕೆಗಳನ್ನು ಬರಹದ ರೂಪದಲ್ಲಿ ದಾಖಲೆ ಮಾಡುವ ಅವಶ್ಯಕತೆಯನ್ನು ವಿವರಿಸಿದರು.

    ಈ ಕಾರ್ಯಕ್ರಮದಲ್ಲಿ ಇಬ್ಬರು ವಿಜೇತರು ತಮ್ಮ ಪ್ರಬಂಧಗಳನ್ನು ವಾಚಿಸಿದರು. ಪ್ರವಾಸ ಪ್ರಬಂಧಗಳನ್ನು ಸಂಕಲಿಸಿದ ಪುಸ್ತಕ ‘ಪ್ರವಾಸ ಕಥನ’ವನ್ನು ಅನಾವರಣಗೊಳಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಡಾ. ಗಣೇಶ್ ಕುಮಾರ್ ಸಂಕಮಾರ್ ಮತ್ತು ಕ.ಸಾ.ಪ. ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್, ಕಾಲೇಜಿನ ಪ್ರಾಂಶುಪಾಲ ಉಮೇಶ್ ಕರ್ಕೇರಾ, ಮಹಾವೀರ ಜೈನ್ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಭಟ್ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿ, ಯಶೋದಾ ಮೋಹನ್ ವಂದಿಸಿದರು. ಯಶ್ವಿನಿ ಮತ್ತು ಬಳಗದವರು ಆಶಯಗೀತೆಯನ್ನು ಪ್ರಸ್ತುತ ಪಡಿಸಿದರು. ಅಕ್ಷತಾ ಕೇಶವ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

    Literature Music
    Share. Facebook Twitter Pinterest LinkedIn Tumblr WhatsApp Email
    Previous Articleಚನ್ನರಾಯಪಟ್ಟಣದಲ್ಲಿ ಪ್ರತಿಮಾ ಟ್ರಸ್ಟಿನ ರಂಗ ಲೋಕದಲ್ಲಿ ‘ಪ್ರತಿಮೋತ್ಸವ -2025’ | ಫೆಬ್ರವರಿ 02
    Next Article ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ -2025’ಕ್ಕೆ ಲೇಖಕಿಯರಿಂದ ಕವನ ಸಂಕಲನ ಆಹ್ವಾನ | ಮಾರ್ಚ್ 15
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications