ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ದಿನಾಂಕ 01 ಫೆಬ್ರವರಿ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾರ್ತಿಸುಬ್ಬ ವಿರಚಿತ ‘ಸುಗ್ರೀವ ಸಖ್ಯ’ ಆಖ್ಯಾನ ನಡೆಯಿತು.
ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಕುಮಾರಿ ಶರಣ್ಯ ನೆತ್ರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ಗುಡ್ಡಪ್ಪ ಬಲ್ಯ), ಸುಗ್ರೀವ (ಮಾಂಬಾಡಿ ವೇಣುಗೋಪಾಲ ಭಟ್). ಹನೂಮಂತ (ಹರಿಣಾಕ್ಷಿ ಜೆ. ಶೆಟ್ಟಿ ಮತ್ತು ಭಾರತಿ ರೈ ಅರಿಯಡ್ಕ) ಸಹಕರಿಸಿದರು. ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿ, ಗೌರವ ಕಾರ್ಯದರ್ಶಿ ಟಿ. ರಂಗನಾಥ ರಾವ್ ವಂದಿಸಿದರು. ಉಪಾಧ್ಯಕ್ಷ ಗುಡ್ಡಪ್ಪ ಬಲ್ಯ ಪ್ರಾಯೋಜಿಸಿದ್ದರು.