Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಜಿ.ಎಸ್. ಶಿವರುದ್ರಪ್ಪರವರ 99ನೆಯ ಜನ್ಮದಿನೋತ್ಸವ
    Literature

    ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಜಿ.ಎಸ್. ಶಿವರುದ್ರಪ್ಪರವರ 99ನೆಯ ಜನ್ಮದಿನೋತ್ಸವ

    February 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಬೆಂಗಳೂರು ಕ.ಸಾ.ಪ. ವತಿಯಿಂದ ಜಿ.ಎಸ್. ಶಿವರುದ್ರಪ್ಪರವರ 99ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 07 ಫೆಬ್ರವರಿ 2025ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಜಿ.ಎಸ್.ಎಸ್. ತಮ್ಮ ಕವಿತೆಗಳಲ್ಲಿ ಎರಡು ಜಗತ್ತುಗಳಿಗೆ ಸ್ಪಂದಿಸಿದ್ದನ್ನು ಕಾಣಬಹುದು. ಒಂದು ಜೀವಸಂಮೃದ್ಧ ಪ್ರಕೃತಿ; ಇನ್ನೊಂದು ಮಾನವ ಕೇಂದ್ರಿತ ಸಮಾಜ. ಬೆರಗು ಮತ್ತು ಹುಡಕಾಟ ಅವರ ಕವಿತೆಗಳ ಪ್ರಧಾನ ಭಾವಗಳಾಗಿದ್ದವು. ಪ್ರಕೃತಿಯ ನಿಯತ ಲಯಗಳು ಕವಿಗೆ ಸದಾ ಆಕರ್ಷಣೆಯನ್ನು ಉಂಟುಮಾಡಿದ್ದವು. ಕವಿಗಳ ಕುರಿತ ‘ಮಧುರ ಮಧುರವೀ ಮಂಜುಳಗಾನ’ ಕಾರ್ಯಕ್ರಮವನ್ನು ಏರ್ಪಡಿಸಿದಾಗ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಷ್ಟೇ ಎತ್ತರಕ್ಕೆ ಏರಿದರೂ ತಮ್ಮ ಬಡತನದ ದಿನಗಳನ್ನು ಅವರು ಮರೆತಿರಲಿಲ್ಲ. ಹೀಗಾಗಿ ಅವರಿಗೆ ಬದುಕಿನಲ್ಲಿ ಯಾವುದಕ್ಕೆ ಮಹತ್ವ ನೀಡಬೇಕು ಎನ್ನುವುದು ಖಚಿತವಾಗಿ ಗೊತ್ತಿತ್ತು. ಅವರ ‘ಸ್ತ್ರೀ’ ಕವಿತೆ ನನ್ನ ಮೇಲೆ ಅಪಾರ ಪ್ರಭಾವವನ್ನು ಬೀರಿದಂತಹದು. ಈ ಪ್ರೇರಣೆಯಿಂದಲೇ ನಾನು ಎಲ್ಲಾ ಸ್ತ್ರೀಯರನ್ನು ಗೌರವಿಸುತ್ತೇನೆ. ‘ಕಾಣದ ಕಡಲಿ’ಗೆ ಕೂಡ ಇದೇ ರೀತಿಯಲ್ಲಿ ನನ್ನನ್ನು ಕಾಡುವ ಕವಿತೆ. ಕಳೆದ ಶತಮಾನದ ಕನ್ನಡ ಸಾಹಿತ್ಯವನ್ನು ಜಿ.ಎಸ್.ಎಸ್. ಹೇಗೆ ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ್ದರೂ ಅದೇ ರೀತಿಯಲ್ಲಿ ತಮ್ಮ ಆಡಳಿತದಿಂದ ಕಸುವು ತುಂಬಿದ್ದರು. ಅವರು ರೂಪಿಸಿದ ಶಿಷ್ಯ ಪಡೆ ಇಂದು ನಾಡಿನೆಲ್ಲೆಡೆ ಕನ್ನಡದ ಕೀರ್ತಿಯನ್ನು ಎತ್ತಿ ಹಿಡಿಯುತ್ತಿದೆ.

    ಕನ್ನಡ ಸಾಹಿತ್ಯ ಪರಿಷತ್ತಿಗೂ ಡಾ. ಜಿ.ಎಸ್. ಶಿವರುದ್ರಪಪ್ಪನವರಿಗೂ ನಿಕಟವಾದ ನಂಟು. ಪರಿಷತ್ತಿನಲ್ಲಿ ಹಲವು ಕಾರ್ಯಾಗಾರಗಳನ್ನು ಅವರು ರೂಪಿಸಿದ್ದರು. ಪರಿಷತ್ತಿನ ಹೆಮ್ಮೆಯ ಪ್ರಕಟಣೆ ಕನ್ನಡ-ಕನ್ನಡ ನಿಘಂಟು ರೂಪ ತಾಳಲು ಅವರೂ ಕಾರಣಕರ್ತರು. ಬಹು ಮುಖ್ಯವಾಗಿ 1992ರ ಜನವರಿ 9, 10, 11 ಮತ್ತು 12ರಂದು ದಾವಣಗೆರೆಯಲ್ಲಿ ನಡೆದ 61ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿ ಕನ್ನಡ ನುಡಿಯ ಕುರಿತು ಬಹು ಮುಖ್ಯವಾದ ಮಾತುಗಳನ್ನು ಆಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಸಾಗಬೇಕಾದ ದಾರಿಯನ್ನು ಸ್ಪಷ್ಟ ಮಾತುಗಳಲ್ಲಿ ಬಿಂಬಿಸಿದ್ದರು. ಈಗ ಜಿ.ಎಸ್. ಶಿವರುದ್ರಪ್ಪನವರ ಜನ್ಮಶತಮಾನೋತ್ಸವ ಬಂದಿದೆ. ಹಲವು ಹಿರಿಯರ ಜನ್ಮ ಶತಮಾನೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದವರು ಅವರು. ಅವರ ಜನ್ಮ ಶತಮಾನೋತ್ಸವಕ್ಕೆ ಅದು ಮೇಲ್ಪಂಕ್ತಿಯಾಗಬೇಕು. ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ” ಎಂದು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್. ಶ್ರೀಧರ ಮೂರ್ತಿ ಮಾತನಾಡಿ “ಜಿ.ಎಸ್.ಎಸ್ ಕವಿತೆಗಳು ಮತ್ತು ವಿಮರ್ಶೆಗಳ ನಡುವೆ ಭಿನ್ನತೆ ಇದೆ. ‘ಮಹಾಕಾವ್ಯ ಸಮೀಕ್ಷೆ’ ಗ್ರಂಥದಲ್ಲಿ ಭಾರತೀಯ ಮತ್ತು ಪಾಶ್ಚಾತ್ಯ ಮಹಾಕಾವ್ಯ ಸಂಬಂಧ ತತ್ತ್ವಗಳನ್ನು ತೌಲನಿಕವಾಗಿ ಅವರು ವಿವೇಚಿಸಿದ್ದರು. ಇಂತಹ ತೌಲನಿಕ ಅಧ್ಯಯನವನ್ನು ಸಾಹಿತ್ಯ ತತ್ವಗಳ, ತಾತ್ತ್ವಿಕ ಪರಿಕಲ್ಪನೆಗಳ ನೆಲೆಯಲ್ಲಿ ಬಳಸಿ ಬರೆದ ಲೇಖನಗಳ ಸಂಕಲನ, ‘ಕಾವ್ಯಾರ್ಥ ಚಿಂತನ’. ಜಿ.ಎಸ್.ಎಸ್.ರವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುರಸ್ಕಾರವನ್ನು ತಂದುಕೊಟ್ಟಿತು” ಎಂದು ಹೇಳಿ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡರು.

    ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿ, ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ಮತ್ತು ಪರಿಷತ್ತಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Literature
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ವಸಂತಕುಮಾರ ಪೆರ್ಲರವರ ಐತಿಹಾಸಿಕ ತುಳು ಕೃತಿ ‘ಪುಳ್ಕೂರುದ ಬಾಚೆ’ ಲೋಕಾರ್ಪಣೆ
    Next Article ಬೆಂಗಳೂರಿನ ಕಲಾಗ್ರಾಮದಲ್ಲಿ ‘ಶ್ರೀದೇವಿ ಮಹಾತ್ಮೆ’ ನಾಟಕ ಪ್ರದರ್ಶನ | ಫೆಬ್ರವರಿ 09
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.