Subscribe to Updates

    Get the latest creative news from FooBar about art, design and business.

    What's Hot

    ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ

    October 25, 2025

    ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31

    October 25, 2025

    ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01

    October 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯಲ್ಲಿ ‘ಕೊಡಗು ಜಾನಪದ ಬೆಡಗು-ಜಾನಪದ ನಡೆ ವಿದ್ಯಾರ್ಥಿಗಳ ಕಡೆ’ ಕಾರ್ಯಕ್ರಮ |ಫೆಬ್ರವರಿ 24
    Folk

    ಮಡಿಕೇರಿಯಲ್ಲಿ ‘ಕೊಡಗು ಜಾನಪದ ಬೆಡಗು-ಜಾನಪದ ನಡೆ ವಿದ್ಯಾರ್ಥಿಗಳ ಕಡೆ’ ಕಾರ್ಯಕ್ರಮ |ಫೆಬ್ರವರಿ 24

    February 23, 2025Updated:February 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಜಾನಪದ ಅಕಾಡೆಮಿ ಮತ್ತು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ‘ಕೊಡಗು ಜಾನಪದ ಬೆಡಗು-ಜಾನಪದ ನಡೆ ವಿದ್ಯಾರ್ಥಿಗಳ ಕಡೆ’ ಎನ್ನುವ ವಿಶಿಷ್ಟ ಕಾರ್ಯಕ್ರಮ ದಿನಾಂಕ 24 ಫೆಬ್ರವರಿ 2025 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ. ಕಾವೇರಿ ಪ್ರಕಾಶ್ ಮಾತನಾಡಿ “ಜಾನಪದ ಎನ್ನುವುದು ಸಾಹಿತ್ಯದ ಮೂಲಬೇರು. ಇಂತಹ ಅಮೂಲ್ಯ ಜಾನಪದ ಸಂಸ್ಕೃತಿ ಪರಂಪರೆಗಳು ತಲೆತಲಾಂತರಗಳಿಂದ ಹರಿದು ಬಂದಿದ್ದು, ಇದನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿನವಾಗಿದೆ. ಅಂದು ಬೆಳಗ್ಗೆ ಘಂಟೆ 10.30ಕ್ಕೆ ‘ಕೊಡಗು ಜಾನವದ ಬೆಡಗು’ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವ ಪ್ರಸಾದ್ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟೇಶ ಪ್ರನನ್ನ ಪಿ. ಕೆ. ವಹಿಸಲಿದ್ದಾರೆ” ಎಂದು ಹೇಳಿದರು.

    ಕಾರ್ಯಕ್ರಮದ ಸಹ ಸಂಚಾಲಕರು ಹಾಗೂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಮೋಹನ್ ಕುಮಾರ್ ಮಾತನಾಡಿ “ಕಾರ್ಯಕ್ರಮದಲ್ಲಿ ‘ಕೊಡಗಿನ ಸಾಂಪ್ರದಾಯಿತ ಊಟೋಪಚಾರಗಳು’ ವಿಷಯದ ಕುರಿತು ಡಾ. ಕಾವೇರಿ ಪ್ರಕಾಶ್ ಮತ್ತು ‘ಬುಡಕಟ್ಟು ಸಂಸ್ಕೃತಿಯಲ್ಲಿ ಕುಡಿಯರು’ ವಿಷಯದ ಕುರಿತು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಅತಿಥಿಗಳಾಗಿ ಐಕ್ಯೂಎಸಿ ಸಂಚಾಲಕರಾದ ಡಾ. ನಿರ್ಮಲ ಕೆ. ಡಿ., ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಅಂಬೇಕಲ್ ನವೀನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾನಕ ಡಾ.ಮೋಹನ್ ಕುಮಾರ್, ಜಾನಪದ ಅಕಾಡೆಮಿಯ ಸದಸ್ಯ ಸಂಚಾಲಕರಾದ ಡಾ. ಮೈನೂರು ಉಮೇಶ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಕಣ್ಣೀರ ತುಳಸಿ ಮೋಹನ್ ತಂಡದಿಂದ ಸುಗ್ಗಿ ಕುಣಿತ, ವಿಷ್ಣು ಪ್ರಿಯ ಮತ್ತು ತಂಡದಿಂದ ಕೊಡವ ಜಾನಪದ ನೃತ್ಯ, ಕುಡಿಯರ ಮುತ್ತಪ್ಪ ತಂಡದಿಂದ ದುಡಿಕೊಟ್ಸ್ ಪಾಟ್ ಪ್ರದರ್ಶನಗೊಳ್ಳಲಿದೆ” ಎಂದು ತಿಳಿಸಿದರು.

    folk
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ‘ಕಲಾ ಕದಂಬ’ದಲ್ಲಿ ‘ರಂಗಉದ್ಭೋಧ -3’ |ಫೆಬ್ರವರಿ 23
    Next Article ನೃತ್ಯ ವಿಮರ್ಶೆ | ನೃತ್ಯ ಲೋಕದಲ್ಲಿ ‘ಶಾಶ್ವತ’ ಭರವಸೆ ಮೂಡಿಸಿದ ರಂಗ ಪ್ರವೇಶ
    roovari

    Add Comment Cancel Reply


    Related Posts

    ಮಂಗಳೂರು ದೇರಳಕಟ್ಟೆಯಲ್ಲಿ ಕಥಾಬಿಂದು ಪ್ರಕಾಶನದ ‘ಸಾಹಿತ್ಯೋತ್ಸವ’ | ಅಕ್ಟೋಬರ್ 26

    October 25, 2025

    ರಾಜ್ಯ ಸರ್ಕಾರಿ ನೌಕರರಿಗಾಗಿ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ

    October 25, 2025

    ಎಸ್. ಬಂಗಾರಪ್ಪ ವಿಚಾರ ವೇದಿಕೆಯ ‘ಬಂಗಾರ ಪ್ರಶಸ್ತಿ’ ಪ್ರಕಟ

    October 23, 2025

    ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’

    October 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.