Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಹಾಲಾಡಿಯವರು ಮಾಡಿದ ‘Solo ಟ್ರಿಪ್’ ಕಥನ

    February 5, 2026

    ಹರಿಕಥಾ ಪರಿಷತ್ತಿನ 16ನೇ ವಾರ್ಷಿಕೋತ್ಸವ

    February 5, 2026

    ಡಾ. ಕೆ.ಬಿ. ಸೂರ್ಯಕುಮಾರ್‌ಗೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ ಪ್ರಕಟ

    February 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಂಬಾಡಿ ರಾಮಯ್ಯ ಮತ್ತು ಗುರುಪ್ರಸಾದ್ ಕಂಟಲಗೆರೆಯವರಿಗೆ ‘ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ’ ಪ್ರಕಟ
    Awards

    ತುಂಬಾಡಿ ರಾಮಯ್ಯ ಮತ್ತು ಗುರುಪ್ರಸಾದ್ ಕಂಟಲಗೆರೆಯವರಿಗೆ ‘ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ’ ಪ್ರಕಟ

    March 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ (ರಿ.) ಕೊಡಮಾಡುವ 2024ರ ಸಾಲಿನ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ತುಂಬಾಡಿ ರಾಮಯ್ಯರವರ ‘ಜಾಲ್ಕಿರಿ’ ಮತ್ತು ಗುರುಪ್ರಸಾದ್ ಕಂಟಲಗೆರೆಯವರ ‘ಅಟ್ರಾಸಿಟ’ ಕಾದಂಬರಿಗಳು ಈ ಪ್ರಶಸ್ತಿಯನ್ನು ಸಮನಾಗಿ ಹಂಚಿಕೊಂಡಿವೆ. ಪ್ರಶಸ್ತಿಯು 25,000 ರೂಪಾಯಿ ನಗದು (ಇಬ್ಬರಿಗೂ ಸೇರಿ) ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.

    ತೀರ್ಪುಗಾರರಾಗಿ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ್ ಮತ್ತು ಹಿರಿಯ ಲೇಖಕಿ ಅನುಪಮಾ ಪ್ರಸಾದ್ ಕಾರ್ಯ ನಿರ್ವಹಿಸಿದ್ದರು. ಸ್ಪರ್ಧೆಗೆ 54 ಕಾದಂಬರಿಗಳು ಬಂದಿದ್ದು, ಅಂತಿಮ ಹಂತಕ್ಕೆ ತುಂಬಾಡಿರಾಮಯ್ಯ ಮತ್ತು ಗುರುಪ್ರಸಾದ್ ಕಂಟಲಗೆರೆಯವರ ಕೃತಿಗಲ್ಲದೆ, ಧರಣೇಂದ್ರ ಕುರಕುರಿ ಇವರ ‘ಜಾತ್ರಿ’, ಡಾ. ಶುಭದಾ ಎಚ್.ಎಸ್. ಇವರ ‘ದೇವಿ ಕುರುಬತಿ’ ಹಾಗೂ ಡಾ. ಹಳೆಮನೆ ರಾಜಶೇಖರ್ ಇವರ ‘ಒಡಲುಗೊಂಡವರು’ ಕಾದಂಬರಿಗಳು ತಲುಪಿದ್ದವು.

    ದ್ವಾರನಕುಂಟೆ ಪಾತಣ್ಣನವರ ಜನ್ಮದಿನವಾದ ದಿನಾಂಕ 14 ಮಾರ್ಚ್ 2025ರ ಸಂಜೆ 5-00ಕ್ಕೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಆಡಿಟೋರಿಯಂನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶೇಷಾದ್ರಿಪುರಂ ದತ್ತಿ ಶಿಕ್ಷಣ ಗೌರವ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ. ಹನೀಫ್ ಇವರು ತಿಳಿಸಿದ್ದಾರೆ.

    award Literature
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಲೋಕಾರ್ಪಣೆಗೊಂಡ ‘ಬೆಳ್ಳಿ ಬೆಳಕು’ ಹಾಗೂ ‘ವಿ.ಜಿ. ದೀಕ್ಷಿತ್ ಸಮಗ್ರ ಕೃತಿ ಸಂಪುಟ’
    Next Article ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಹಾಲಾಡಿಯವರು ಮಾಡಿದ ‘Solo ಟ್ರಿಪ್’ ಕಥನ

    February 5, 2026

    ಡಾ. ಕೆ.ಬಿ. ಸೂರ್ಯಕುಮಾರ್‌ಗೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ ಪ್ರಕಟ

    February 5, 2026

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.