ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು, ಮಡಿಕೇರಿ ಹಾಗೂ ಶ್ರೀಮತಿ ಸುಲೋಚನಾ ಹಾಗೂ ಡಾ. ಎಂ. ಜಿ. ನಾಗರಾಜ್ ದಂಪತಿ ದತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಸಾಹಿತ್ಯ, ಕಲೆ, ಜಾನಪದ, ಪರಿಸರ ಮತ್ತು ಪುರಾತತ್ವ ಕುರಿತ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ದಿನಾಂಕ 11 ಮಾರ್ಚ್ 2025ರ ಮಂಗಳವಾರ ಬೆಳಿಗ್ಗೆ ಘಂಟೆ 10.00ರಿಂದ ಮಡಿಕೇರಿಯ ಎಫ್. ಎಂ. ಸಿ. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಇಲ್ಲಿನ ಇತಿಹಾಸ ವಿಭಾಗದ ಮಾಜಿ ಮುಖ್ಯಸ್ಥರಾದ ಡಾ. ಕೋಡಿರ ಲೋಕೇಶ್ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಮಾಜಿ ಅಧ್ಯಕ್ಷರಾದ ಟಿ.ಪಿ ರಮೇಶ್ ಪ್ರಾಸ್ತಾವಿಕ ನುಡಿಯನ್ನು ಆಡಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಪ್ರತಿಮಾ ರೈ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ, ಖ್ಯಾತ ಸಂಶೋಧಕರು ಹಾಗೂ ದತ್ತಿದಾನಿಗಳಾದ ಬೆಂಗಳೂರಿನ ಡಾ. ಎಂ. ಜಿ. ನಾಗರಾಜ್, ಎಫ್. ಎಂ. ಸಿ. ಕಾಲೇಜು ಮಡಿಕೇರಿ ಇಲ್ಲಿನ ಪ್ರಾಂಶುಪಾಲರಾದ ಮೇ. ಡಾ. ಬಿ. ರಾಘವ, ಸಾಹಿತಿಗಳು ಹಾಗೂ ಎಫ್. ಎಂ. ಸಿ. ಕಾಲೇಜು ಮಡಿಕೇರಿ ಇಲ್ಲಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ್ ಹೆಗಡೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಕೊಡಗಿನ ಜನಪದ ಕಲೆ, ದೇವರ ಕಾಡುಗಳು ಮತ್ತು ಪುರಾತತ್ವ ಸಂಸ್ಕೃತಿ ಕುರಿತು ವಿಚಾರಗೋಷ್ಠಿ ಏರ್ಪಡಿಸಲಾಗಿದ್ದು, ಇದರ ಅಧ್ಯಕ್ಷತೆಯನ್ನು ಕೊಡಗು ವಿಶ್ವವಿದ್ಯಾಲಯದ ಕನ್ನಡ ಅದ್ಯಾಪಕರಾದ ಡಾ. ಜಮೀರ್ ಅಹಮದ್ ವಹಿಸಲಿದ್ದಾರೆ. ಕೊಡಗಿನ ಜಾನಪದ ಕಲೆ ಕುರಿತು ಸಾಹಿತಿ, ಪತ್ರಕರ್ತರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಜೆ. ಸೋಮಣ್ಣ, ಕೊಡಗಿನ ದೇವರ ಕಾಡುಗಳ ಕುರಿತು ಅರಣ್ಯ ಕಾಲೇಜಿನ ಮಾಜಿ ಮುಖ್ಯಸ್ಥರಾದ ಡಾಕ್ಟರ್ ಸಿ. ಜಿ ಕುಶಾಲಪ್ಪ ಹಾಗೂ ಕೊಡಗಿನ ಪುರಾತತ್ವ ಸಂಸ್ಕೃತಿ ಕುರಿತು ಪುರಾತತ್ವ ಇಲಾಖೆಯ ಸಹ ನಿರ್ದೇಶಕರಾದ ಶ್ರೀಮತಿ ರೇಖಾ ಇವರು ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ 2:00 ಗಂಟೆಗೆ ಜಿಲ್ಲೆಯ ಆಯ್ದ ಕವಿಗಳ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದ್ದು, ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀ ಬಿ. ಎ. ಶಂಷೂದ್ದೀನ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಆರ್. ಐಶ್ವರ್ಯ ನೆರವೇರಿಸಲಿದ್ದು, ಗೋಷ್ಠಿಯ ಆಶಯ ನುಡಿಯನ್ನು ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಯನಾ ಕಷ್ಯಪ್ ನಡೆಸಿಕೊಂಡಲಿದ್ದಾರೆ.
ಕವಿಗೋಷ್ಠಿಯಲ್ಲಿ ಶ್ರೀಮತಿ ಲೀಲಾವತಿ ತೋಡಿಕಾನ, ಶ್ರೀಮತಿ ಶ್ವೇತಾ ರವೀಂದ್ರ, ಡಾ. ಕಾವೇರಿ ಪ್ರಕಾಶ್, ಶ್ರೀಮತಿ ಪುಷ್ಪಲತಾ ಶಿವಪ್ಪ,, ಶ್ರೀಮತಿ ವಿಮಲಾ ದಶರಥ್, ಶ್ರೀಮತಿ ರೇವತಿ ರಮೇಶ್, ಕುಮಾರಿ ಕೆ. ಜಿ.ಅರ್ಪಿತಾ, ಗಿರೀಶ್ ಕಿಗ್ಗಾಲು, ಟಾಮಿ ಥೋಮಸ್, ನಾ ಕನ್ನಡಿಗ, ವಿ. ಎಸ್. ವೈಲೇಶ್, ರಂಜಿತ್ ಕವಲಪಾರ ಹಾಗೂ ಜಗದೀಶ್ ಜೋಡಬೀಟಿ ಭಾಗವಹಿಸಲಿದ್ದಾರೆ.
ಅಪರಾಹ್ನ 3:00 ಗಂಟೆಗೆ ಸಮರೊಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ. ಜಿ. ಅನಂತ ಶಯನ ವಹಿಸಲಿದ್ದಾರೆ. ಸಮಾರೋಪ ಭಾಷಣವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ನೆರವೇರಿಸಲಿದ್ದು, ಮಡಿಕೇರಿಯ ಪೊಲೀಸ್ ವೃತ್ತ ನಿರೀಕ್ಷಕರಾದ ಪಿ. ಕೆ ರಾಜು ಇವರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಶಂಸನಾ ಪತ್ರ ವಿತರಣೆ ಮಾಡಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ .ಐ. ಮುನೀರ್ ಅಹ್ಮದ್ ತಿಳಿಸಿದ್ದಾರೆ