Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿ ಗೋಷ್ಠಿ ಮತ್ತು ಪುಸ್ತಕ ಲೋಕಾರ್ಪಣಾ ಕಾರ್ಯಕ್ರಮ
    Book Release

    ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿ ಗೋಷ್ಠಿ ಮತ್ತು ಪುಸ್ತಕ ಲೋಕಾರ್ಪಣಾ ಕಾರ್ಯಕ್ರಮ

    March 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಕೋಟದ ಸು. ವಿ.ಕಾ. ಸಾಂಸ್ಕೃತಿಕ ಸಂಘಟನೆಯು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿ ಗೋಷ್ಠಿ ಮತ್ತು ಪುಸ್ತಕ ಅನಾವರಣ ಕಾರ್ಯಕ್ರಮವು ದಿನಾಂಕ 09 ಮಾರ್ಚ್ 2025ರ ಆದಿತ್ಯವಾರದಂದು ಕೋಟದ ಕಾರಂತ ಥೀಂ ಪಾರ್ಕ್ ನಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಮಾತನಾಡಿ “ಅತಿ ಕಡಿಮೆ ಶಬ್ದಗಳ ಮೂಲಕ ಧ್ವನಿ ಪೂರ್ಣವಾಗಿ ಕಟ್ಟುವುದೇ ಕವಿತೆ. ಅನುಕರಣೆಯ ಮಿತಿಯನ್ನು ಮೀರಿ, ಅನುಭವದೊಂದಿಗೆ ಸೃಜನಶೀಲತೆಯನ್ನು ಸಾಧಿಸುವಲ್ಲಿ ಕವಿಯಾದವನು ಪ್ರಯತ್ನಿಸಬೇಕು. ನಮ್ಮ ಹೆಚ್ಚಿನ ಓದು ನಮ್ಮನ್ನು ಒಳ್ಳೆಯ ಬರಹಗಾರರನ್ನಾಗಿಸುತ್ತದೆ. ಕವಿತೆ ವಾಚ್ಯವಾಗದೆ ಓದುಗನಲ್ಲಿ ಹೊಸ ಹೊಳಹನ್ನು ಅರಳಿಸಬೇಕು” ಎಂದರು.

    ಇದೇ ಸಂದರ್ಭ ಉಪನ್ಯಾಸಕ ಸುಜಯೀಂದ್ರ ಹಂದೆಯವರ ಸಂಪಾದಿತ ಕಾಲೇಜು ವಿದ್ಯಾರ್ಥಿಗಳ ಕವನ ಸಂಕಲನ ‘ನನೆ ಮೊಗ್ಗು’ ಕೃತಿಯನ್ನು ಅನಾವರಣಗೊಳಿಸಿದ ಕವಯತ್ರಿ ಚಿತ್ರಪಾಡಿ ಸುಮನಾ ಆರ್ ಹೇರ್ಳೆ ಮಾತನಾಡಿ “ಪ್ರತಿಯೊಬ್ಬ ಕವಿಗೆ ತುಡಿಯುವ ಮನಸ್ಸು ಮತ್ತು ಅದನ್ನು ಸೃಜನಾತ್ಮಕವಾಗಿ ಕಟ್ಟುವ ಕಲೆ ತಿಳಿದಿರಬೇಕು. ಜೀವನ ಪ್ರೀತಿ ಹೊಳೆಯಾಗಿ ಹರಿಯಬೇಕು, ತಲೆ ತಗ್ಗಿಸಿ ಓದುವ ನಮ್ಮ ಹವ್ಯಾಸ ಮುಂದೆ ಬದುಕಿನಲ್ಲಿ ತಲೆಯೆತ್ತಿ ನಡೆಯುವಂತೆ ಮಾಡಬಲ್ಲುದು” ಎಂದರು.

    ಕೋಟತಟ್ಟು ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಫಾರ್ಮಾಸುಟಿಕಲ್ ಸಂಸ್ಥೆಗಳ ಗುಣ ಮಟ್ಟ ನಿಯಂತ್ರಣ ಸಲಹೆಗಾರ ಡಾ. ವೆಂಕಟಕೃಷ್ಣ ಕೆ., ಸಾಹಿತಿ ಜನಾರ್ದನ ಹಂದೆ ಉಪಸ್ಥಿತರಿದ್ದರು. ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸಯನ್ಸ್ ಕಾಲೇಜಿನ ಅಂತಿಮ ಬಿ. ಎಸ್ಸಿ. ವಿದ್ಯಾರ್ಥಿನಿ ಐಶ್ವರ್ಯ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು ಇಪ್ಪತ್ತಮೂರು ವಿದ್ಯಾರ್ಥಿ ಕವಿಗಳು ಕವಿತಾ ವಾಚನ ಮಾಡಿದರು.
    ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಕಾವ್ಯ ಎಚ್. ಕಾರ್ಯಕ್ರಮ ನಿರ್ವಹಿಸಿ, ಸಂಘಟನೆಯ ಕಾರ್ಯದರ್ಶಿ ವಿನಿತ ಎಸ್ ವಂದಿಸಿದರು.

    baikady Book release kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರಾಷ್ಟ್ರೀಯ ವೃತ್ತಿ ರಂಗೋತ್ಸವ – 25 : ಕಾಲೇಜು ವಿದ್ಯಾರ್ಥಿಗಳಿಗೆ ನಾಟಕ ವಿಮರ್ಶಾ ಸ್ಪರ್ಧೆ
    Next Article ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಬಯಲಾಟ | ಮಾರ್ಚ್ 13
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.