Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಬಸವನಗುಡಿಯಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮಾರ್ಚ್ 13
    Drama

    ಬೆಂಗಳೂರಿನ ಬಸವನಗುಡಿಯಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮಾರ್ಚ್ 13

    March 10, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಅಂತರಂಗ ಇದರ 45ನೇ ವರ್ಷದ ರಂಗ ಯುಗಾದಿ ಪ್ರಯುಕ್ತ ಬೆಂಗಳೂರಿನ ಪ್ರವರ ಥಿಯೇಟರ್ ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕವು ದಿನಾಂಕ 13 ಮಾರ್ಚ್ 2025ರಂದು ಸಂಜೆ ಗಂಟೆ 6-30ಕ್ಕೆ ಬೆಂಗಳೂರಿನ ಬಸವನಗುಡಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ವಾಡಿಯಾ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

    ಈ ನಾಟಕದ ರಂಗರೂಪ ಕರಣಂ ಪವನ್ ಪ್ರಸಾದ್ ಮಾಡಿದ್ದು, ಸಂಗೀತ ಅಕ್ಷಯ್ ಭೊಂಸ್ಲೆ ಮತ್ತು ಬೆಳಕು ಸೂರ್ಯ ಸಾಥಿ ನೀಡಿದ್ದು, ಹನು ರಾಮಸಂಜೀವ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಮಹೇಶ್ ಎಸ್.ಪಿ., ಹನು ರಾಮಸಂಜೀವ, ನಾಗಶ್ರೀ ಪುಟ್ಟರಾಜು, ಸುಶಾಂತ್ ರಾಜ್ ಆರಾಧ್ಯ, ಋತ್ವಿಕ್ ಕೆ.ಸಿ., ಅಂಬಿಕಾ ಶೆಟ್ಟಿ, ಅಜಯ್ ಕುಮಾರ್, ಸಂಜೀವಿನಿ, ಚಂದನ್ ರಾಮಚಂದ್ರೇಗೌಡ, ಶ್ರೀನಾಥ್ ಎನ್., ಪ್ರವೀಣ್ ಭಟ್, ಚರಣ್ ಗೌಡ, ದಿಲೀಪ್ ಮಹದೇವ್, ಭರಣಿ ವಿನಾಯಕ್, ಲೇಖನ, ಹರ್ಷಿತಾ, ಯಶಸ್ವಿನಿ, ಮನ್ವಿತ್ ವಿನಯ್ ಕುಮಾರ್ ರಂಗದ ಮೇಲೆ ರಂಜಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9686869676 ಸಂಖ್ಯೆಯನ್ನು ಸಂಪರ್ಕಿಸಿರಿ.

    ಪ್ರವರ ಥಿಯೇಟರ್ ಪ್ರಸ್ತುತಿ ‘ಅಣ್ಣನ ನೆನವು’ ಸಾಕ್ಷ್ಯ ನಾಟಕ ಈಗಾಗಲೇ ರಾಜ್ಯದ ಹಲವೆಡೆ ಪ್ರದರ್ಶನಗಳನ್ನು ಕಂಡಿದ್ದು ಅಪಾರ ಜನಮೆಚ್ಚುಗೆ ಪಡೆಯುವ ಜೊತೆಗೆ ಸಾಹಿತ್ಯಾಸಕ್ತರ ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು” ಕೃತಿ, ಮಹಾಕವಿ ಕುವೆಂಪುರವರ ಜೀವನದ ಹಲವು ಮಹತ್ವದ ಅಧ್ಯಾಯಗಳು ಒಂದರ್ಥದಲ್ಲಿ ತೇಜಸ್ವಿಯವರು ಹುಟ್ಟಿದಲ್ಲಿಂದ ಇಲ್ಲಿಯವರೆಗಿನ ಕುವೆಂಪುರವರ ಕಥೆ, ಹಾಗೆಯೇ ಇದು ತೇಜಸ್ವಿಯವರ ಆತ್ಮಕಥೆಯ ಹಲವು ಅಧ್ಯಾಯಗಳೆಂದೂ ಹೇಳಬಹುದು. ಕುವೆಂಪು, ಕನ್ನಡ ಸಾಂಸ್ಕೃತಿಕ ಚರಿತ್ರೆಯಲ್ಲಿ ವಹಿಸಿದ ಮಹತ್ವಪೂರ್ಣ ಪಾತ್ರದಿಂದಾಗಿ ಇವು ಕನ್ನಡ ಸಾಂಸ್ಕೃತಿಕ ಚರಿತ್ರೆಯ ಬಹುಮುಖ್ಯ ಅಧ್ಯಾಯಗಳೂ ಆಗಿದೆ. ಪೂರ್ಣಚಂದ್ರ ತೇಜಸ್ವಿಯವರು ತಮ್ಮ ತಂದೆ ರಾಷ್ಟ್ರಕವಿ ಕುವೆಂಪುರವರನ್ನು ಕೇಂದ್ರವಾಗಿಟ್ಟುಕೊಂಡು ಬರೆದಿರುವ ನೆನಪುಗಳು ‘ಅಣ್ಣನ ನೆನಪು’ (1996) ಕೃತಿಯಲ್ಲಿ ಸಂಗ್ರಹಗೊಂಡಿವೆ. ಕುವೆಂಪುರವರನ್ನು ಒಬ್ಬ ತಂದೆಯಾಗಿ, ಒಬ್ಬ ಮನುಷ್ಯನಾಗಿ ಚಿತ್ರಿಸಿ ಒಂದು ಅಪರೂಪದ ಕೃತಿಯನ್ನು ಪೂರ್ಣಚಂದ್ರ ತೇಜಸ್ವಿಯವರು ಬರೆದಿದ್ದಾರೆ.

    ಈ ಕೃತಿ ತೇಜಸ್ವಿಯವರ ಅನುಭವ ಕಥನಗಳ ಸಂಕಲನ. ಇದರಲ್ಲಿರುವ ಪ್ರತಿಯೊಂದು ಅಧ್ಯಾಯವು ಹಾಸ್ಯಬುಗ್ಗೆಯನ್ನು ತರಿಸುವುದರೊಂದಿಗೆ ಕುವೆಂಪುರವರ ವ್ಯಕ್ತಿತ್ವವನ್ನು ಪರಿಚಯಿಸುತ್ತದೆ. ತೇಜಸ್ವಿ ರಾಷ್ಟ್ರಕವಿ ಕುವೆಂಪು ಅವರಂತಹ ಅದ್ಭುತ ಸಾಹಿತಿಯ ಮಗನಾಗಿಯೂ ತಂದೆಯ ಸಾಹಿತ್ಯದ ನೆರಳಿಂದ ದೂರ ಸಾಗಿ ತಮ್ಮದೇ ಆದ ಪ್ರತ್ಯೇಕ ಶೈಲಿಯಿಂದ, ವೈವಿಧ್ಯಮಯ ಬರಹಗಳಿಂದ ಕನ್ನಡ ಸಾಹಿತ್ಯಲೋಕದಲ್ಲಿ ಹೆಸರಾದವರು. ‘ಅಣ್ಣನ ನೆನಪು’ ಅವರ ಆತ್ಮಕಥೆಯೋ, ಅವರ ಅಣ್ಣನ ನೆನಪೋ, ಕನ್ನಡ ಸಂಸ್ಕೃತಿ ಇತಿಹಾಸದ ಅವಲೋಕನವೋ ಎಂಬ ಯೋಚನೆ ತೇಜಸ್ವಿಯವರಂತೆಯೇ ನಮಗೂ ಕಾಡಿದರೂ ಅದು ಇವೆಲ್ಲವುಗಳ ಮಿಶ್ರಣವಾಗಿದ್ದು, ಓದುಗರನ್ನು ಆ ಕಾಲದಲ್ಲಿ ವಿಹರಿಸುವಂತೆ ಮಾಡುತ್ತದೆ. ಎಲ್ಲೂ ತಂದೆಯ ಗುಣಗಾನ ಮಾಡದೆ, ಅವರ ನೈಜ ವ್ಯಕ್ತಿತ್ವವನ್ನು ಒಬ್ಬ ಸಾಮಾನ್ಯ ಮಗನಂತೆ ಕಟ್ಟಿಕೊಡುತ್ತಾರೆ ತೇಜಸ್ವಿ.

    ಕುವೆಂಪು ಅವರ ವ್ಯಕ್ತಿತ್ವದಲ್ಲಿದ್ದ ಮಾನವೀಯತೆ, ಮುಗ್ಧತೆ, ವೈಜ್ಞಾನಿಕ ಮನೋಭಾವ, ನಿಷ್ಠುರತೆಗಳನ್ನು ಅವರು ಅನೇಕ ಪ್ರಸಂಗಗಳ ಮುಖಾಂತರವೇ ತಿಳಿಸುತ್ತಾರೆ. ತಮ್ಮ ಬಾಲ್ಯ, ಯೌವ್ವನ ಕಾಲದ ಘಟನೆಗಳನ್ನು ತುಂಬ ಹಾಸ್ಯಮಯ ಶೈಲಿಯಲ್ಲಿ ನಿರೂಪಿಸುವ ತೇಜಸ್ವಿ, ನಂತರ ಕಾಲದ ಸಾಹಿತ್ಯಿಕ ವಿಪ್ಲವಗಳನ್ನು ವಿವರಿಸುವಾಗ ಗಂಭೀರವಾದ ಭಾಷಾ ಪ್ರಯೋಗಕ್ಕಿಳಿಯುತ್ತಾರೆ. ಅಂದಿನ ಕಾಲಘಟ್ಟದಲ್ಲಿ ನಡೆದ ನವ್ಯ-ನವೋದಯಗಳ ನಡುವಿನ ತಿಕ್ಕಾಟದ ಪರಿಚಯವನ್ನೂ ಮಾಡಿಕೊಡುತ್ತಾರೆ ತೇಜಸ್ವಿ. ಇದೆಲ್ಲದರ ಜೊತೆಗೆ ಇದೊಂದು ಅತಿಸುಂದರ ಕಾದಂಬರಿಯಂಥ ಕಲಾಕೃತಿ. ಇದರಲ್ಲಿ ಚಿತ್ರಿತವಾಗಿರುವ ಕುವೆಂಪುರವರ ವ್ಯಕ್ತಿತ್ವ ಮತ್ತು ಅವರ ಸುತ್ತ ಅರಳಿರುವ ಅನೇಕ ಪಾತ್ರಗಳು ಕನ್ನಡ ಸಾಹಿತ್ಯದಲ್ಲಿನ ಅನನ್ಯ ದಾಖಲೆ.

    baikady Kannada drama roovari
    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಬಯಲಾಟ | ಮಾರ್ಚ್ 13
    Next Article ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನದಲ್ಲಿ ಮಲಯಾಳಂ – ಕನ್ನಡ ಅನುವಾದ ಕಾರ್ಯಾಗಾರ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.