Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಕಟೀಲಿನಲ್ಲಿ ದ್ವಿದಿನ ಯಕ್ಷಗಾನ ತಾಳಮದ್ದಲೆ ಕಮ್ಮಟ
    Workshop

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಕಟೀಲಿನಲ್ಲಿ ದ್ವಿದಿನ ಯಕ್ಷಗಾನ ತಾಳಮದ್ದಲೆ ಕಮ್ಮಟ

    March 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಹಯೋಗದಲ್ಲಿ ಹಮ್ಮಿಕೊಂಡ ಎರಡು ದಿನಗಳ ಯಕ್ಷಗಾನ ತಾಳಮದ್ದಲೆ ಕಮ್ಮಟದ ಉದ್ಘಾಟನಾ ಸಮಾರಂಭವು ದಿನಾಂಕ 18 ಮಾರ್ಚ್ 2025ರ ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲಿಯೂ ಹೌದು, ಯಕ್ಷಗಾನದ ಶಕ್ತಿಯೂ ಹೌದು. ಯಕ್ಷಗಾನದ ಬೆಳವಣಿಗೆಗೆ ಕಟೀಲು ಕ್ಷೇತ್ರದ ಕೊಡುಗೆ ಶ್ಲಾಘನೀಯ. ಯಕ್ಷಗಾನ ನಮ್ಮ ಮಣ್ಣಿನ ಕಲೆ. ಇದು ಅನ್ಯ ಕಲಾಪ್ರಕಾರಗಳ ಹಾಗೆ ಅಲ್ಲ. ಇಲ್ಲಿ ಅಭಿನಯ, ನೃತ್ಯ, ಮಾತು , ಹಾಡು, ವೇಷಭೂಷಣ, ಬಣ್ಣಗಾರಿಕೆ ಹೀಗೆ ನವರಸದ ಭಾವಾಭಿವ್ಯಕ್ತಿಗೆ ಅವಕಾಶವಿದೆ. ಯಕ್ಷಗಾನ ಕೇವಲ ಮನೋರಂಜನೆಗಾಗಿ ಅಲ್ಲ. ಇದು ಸುಸಂಸ್ಕೃತ ಸಮಾಜವನ್ನು ಕಟ್ಟಿಕೊಡಬಲ್ಲ ಶಕ್ತಿಹೊಂದಿದೆ. ಇದನ್ನು ಅಭ್ಯಾಸಿಸಿ ಪ್ರದರ್ಶಿಸುವ ಕಲಾವಿದರೆಲ್ಲಾ ಶ್ರೇಷ್ಠರೇ ಆಗಿದ್ದಾರೆ. ಯಕ್ಷಗಾನವನ್ನು ಕಲಿತ ಮಕ್ಕಳು ಗುರುಹಿರಿಯರಿಗೆ ಗೌರವ ಕೊಡುವುದು ಸೇರಿದಂತೆ ತಮ್ಮಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಸಮಾಜದ ನೈಜ ಆಸ್ತಿಯಾಗಬಲ್ಲರು. ಹೀಗಾಗಿ ಯಕ್ಷಗಾನ ಅಕಾಡೆಮಿ ಮಕ್ಕಳ ಮೇಳಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ. ಹಿಂದೆ ಕಲೆಗಳಿಗೆ ರಾಜಾಶ್ರಯ ಸಿಕ್ಕಿದಂತೆ ಇಂದು ನಮ್ಮ ಶ್ರದ್ಧಾ ಕೇಂದ್ರಗಳಾಗಿರುವ ದೇವಳಗಳಿಂದ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಸಂತೋಷದ ವಿಚಾರ. ಇಂದು ಕಟೀಲು ದೇವಳದಿಂದ 6 ಮೇಳಗಳು, ಮಂದಾರ್ತಿ ದೇವಳದಿಂದ 5 ಮೇಳಗಳು ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ 40ಕ್ಕೂ ಅಧಿಕ ಯಕ್ಷಗಾನ ಮೇಳಗಳಿಂದು ಕಾರ್ಯಾಚರಿಸುತ್ತಿವೆ. ದುರ್ಗಾ ಮಕ್ಕಳ ಮೇಳದ ಸಾಧನೆಯನ್ನು ನಾನು ಗಮನಿಸಿದ್ದೇನೆ. ಯಕ್ಷಗಾನ ಅಕಾಡೆಮಿ ವೃತ್ತಿಪರ ಮತ್ತು ಹವ್ಯಾಸಿ ಕಲಾವಿದರಿಗೆ ನಿರಂತರ ಬೆಂಬಲ ನೀಡಲಿದೆ. ಯಕ್ಷಗಾನಕ್ಕೆ ಸಂಬಂಧಪಟ್ಟ ವಿವಿಧ ಕಮ್ಮಟಗಳು, ತರಬೇತಿಗಳನ್ನು ನಡೆಸಲು ಸಂಘಸಂಸ್ಥೆಗಳು ಮುಂದೆ ಬರಬೇಕು. ಅವುಗಳಿಗೆ ಅಕಾಡೆಮಿ ಪ್ರೋತಾಹ ನೀಡಲಿದೆ” ಎಂದು ಹೇಳಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ದುರ್ಗಾ ಮಕ್ಕಳ ಯಕ್ಷಗಾನ ಮೇಳದ ಅಧ್ಯಕ್ಷರು ಹಾಗೂ ಕಟೀಲು ದೇವಳದ ಅನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣ ಮಾತನಾಡಿ “ಯಕ್ಷಗಾನದ ತಾಳಮದ್ದಲೆ ಇಂದು ಬಹು ಜನಪ್ರಿಯತೆ ಪಡೆಯುತ್ತಿದೆ. ದೇವಿಗೆ ಅತೀ ಪ್ರಿಯವಾದ ಯಕ್ಷಗಾನವನ್ನು ಮಕ್ಕಳಿಗೆ ಅಭ್ಯಾಸಿಸಲು ‘ಯಕ್ಷ ಝೇಂಕಾರ’ ಎಂಬ ವಿಭಾಗವನ್ನು ಕಾಲೇಜಿನಲ್ಲಿ ಪ್ರಾರಂಭಿಸಲಾಗಿದೆ. ಸಾತ್ವಿಕ ಅಭಿನಯದ ಭಾಗವಾದ ಈ ತಾಳಮದ್ದಲೆ ಬೆಳೆಯಲಿ” ಎಂದು ಶುಭ ಹಾರೈಸಿದರು.

    ಈ ಎರಡು ದಿನಗಳ ವಿಚಾರಗೋಷ್ಠಿಗಳಲ್ಲಿ ತಾಳಮದ್ದಲೆಯಲ್ಲಿ ಪುರಾಣ ಹಾಗೂ ಪ್ರಸಂಗಗಳ ಸಮನ್ವಯ, ಪ್ರಸ್ತುತ ತಾಳಮದ್ದಲೆ ಸ್ಥಿತಿಗತಿ ಹಾಗೂ ತಾಳಮದ್ದಲೆ ಔಚಿತ್ಯ ಪರಾಮರ್ಶೆ ಎಂಬ ವಿಷಯದಲ್ಲಿ 3 ವಿಚಾರಗೋಷ್ಠಿಗಳು ನಡೆಯಲಿವೆ.
    ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ರಾಜೇಶ್ ಕುಳಾಯಿ, ಸಿವಿಲ್ ಎಂಜೀನಿಯರ್ ದೊಡ್ಡಯ್ಯ ಮೂಲ್ಯ, ಕಟೀಲು ಕೊಂಡೆಲ್ತಾಯ ದೇವಳದ ಮೊಕ್ತೇಸರ ಲೋಕಯ್ಯ ಸಾಲ್ಯಾನ್, ಕಾಲೇಜಿನ ಪ್ರಾಂಶುಪಾಲ ಡಾ.ವಿಜಯ, ಕ. ಸಾ. ಪ. ಮುಲ್ಕಿ ತಾಲೂಕು ಅಧ್ಯಕ್ಷರಾದ ಮಿಥುನ್ ಉಡುಪ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಕೃತ ಅಧ್ಯಾಪಕ ಶ್ರೀವತ್ಸ ಎಸ್. ಆರ್. ಕಾರ್ಯಕ್ರಮ ನಿರೂಪಿಸಿದರು.

    baikady roovari workshop yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸ್ವರಚಿನ್ನಾರಿಯಿಂದ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ -2’ | ಮಾರ್ಚ್ 23
    Next Article ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಸಂಪುಟ ಭಾಗ-2 ಲೋಕಾರ್ಪಣೆ | ಮಾರ್ಚ್ 23
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.