Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಾವಂಜೆಯಲ್ಲಿ ಸಂತ ಸತ್ವ – ನಂದಿನಿಗೊಂದು ಸುತ್ತು
    Literature

    ಪಾವಂಜೆಯಲ್ಲಿ ಸಂತ ಸತ್ವ – ನಂದಿನಿಗೊಂದು ಸುತ್ತು

    April 5, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    05 ಏಪ್ರಿಲ್ 2023, ಮುಡಿಪು: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಇವರು ಮಂಗಳೂರು ವಿಶ್ವವಿದ್ಯಾಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಂಯೋಜನೆಯಲ್ಲಿ ನಿನಾದ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಪಾವಂಜೆ ನಿನಾದ ರಂಗಮಂದಿರದಲ್ಲಿ ನಡೆದ ‘ಭಾರತದ ಸಂತ ಸತ್ವ ಶೋಧ-ನಿನಾದ ನಂದಿನಿಗೊಂದು ಸುತ್ತು-ನಿನಾದ ನೆನಪು” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ “ನಾರಾಯಣ ಗುರುಗಳು ಕಂಡ ಮನುಷ್ಯ ಧರ್ಮದ ತತ್ವ ತುಳುನಾಡಿನ ಮಣ್ಣಿನಲ್ಲಿದೆ. ಅದರೊಳಗೆ ಭಾರತದ ಸಂತ ಸತ್ವ ಅಡಗಿದೆ. ಕರಾವಳಿ ಕರ್ನಾಟಕ ದೈವ ದೇವರುಗಳ ನೆಲೆ. ಇಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕೊಡುವ ಆಯುರ್ವೇದ ಸತ್ವ ಋಷಿ ಪರಂಪರೆ ಮತ್ತು ಕೃಷಿ ಪರಂಪರೆಯಿಂದ ಪಕ್ವಗೊಂಡಿದೆ” ಎಂದರು.

    ಉದ್ಯಮಿ ಕಡಂಬೋಡಿ ಮಹಾಬಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ‘ಶಾಂತಿಯ ಕ್ರಾಂತಿ-ನಾರಾಯಣ ಗುರು’ ಎಂಬ ವಿಷಯವಾಗಿ ಉಪನ್ಯಾಸ ನೀಡಿದರು.

    ಓರಿಯಂಟಲ್ ವಿಮಾ ಕಂಪನಿಯ ಪ್ರಬಂಧಕ ಯಾದವ ದೇವಾಡಿಗ, ಕಾಟಿಪಳ್ಳ ನಾರಾಯಣ ಗುರು ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಪಿ. ದಯಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ತುಳುನಾಡಿನ ಜನಪದ ಕ್ರೀಡೆ ತಪ್ಪಂಗಾಯಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂದಿನಿಗೊಂದು ಸುತ್ತು ಕಾರ್ಯಕ್ರಮದಲ್ಲಿ ಗ್ರಾಮೀಣ ಪರಿಸರದ ಜಾನಪದ ಮತ್ತು ಪೌರಾಣಿಕ ಹಿನ್ನೆಲೆಯ ವೈಶಿಷ್ಟ್ಯವನ್ನು ವಿವರಿಸಲಾಯಿತು.

    ಕುಸುಮಾ ಮಹಾಬಲ ಪೂಜಾರಿ, ಗುಣವತಿ ರಮೇಶ್, ಪುಷ್ಪಲತಾ ರಾವ್, ಅನು ಕಡಂಬೋಡಿ ಉಪಸ್ಥಿತರಿದ್ದರು. ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ್ ಅಮೀನ್ ಸಂಕಮಾರ್‌ ಸ್ವಾಗತಿಸಿ, ಉಪನ್ಯಾಸಕಿ ಅನು ಸಂಕಮಾರ್‌ ಕಾರ್ಯಕ್ರಮ ನಿರ್ವಹಿಸಿ, ಭವ ಸಂಕಮಾರ್‌ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸನಾತನ ನಾಟ್ಯಾಲಯ, ಮಂಗಳೂರು – ನಲ್ವತ್ತರ ಸಂಭ್ರಮದಲ್ಲಿ ಹಾರಿಕಾ ಮಂಜುನಾಥ್
    Next Article ಮಂಗಳೂರಿನಲ್ಲಿ ತುಳು ಹರಿಕಥಾ ಉಚ್ಚಯ -2023
    roovari

    Add Comment Cancel Reply


    Related Posts

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ | ಮೇ 31

    May 27, 2025

    ಕೂಡ್ಲಿ ಗುರುರಾಜ್‌ ಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’

    May 27, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಬೆಳದಿಂಗಳ ಸೋನೆಮಳೆ’ ಆಯ್ಕೆ

    May 27, 2025

    ಪೆರ್ವಾಜೆ ಶಾಲೆಯಲ್ಲಿ ನಾಟಕ ಮತ್ತು ಕವನ ಸಂಕಲನ ಕೃತಿ ಬಿಡುಗಡೆ ಕಾರ್ಯಕ್ರಮ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.