Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನ ‘ಅಭಯಲಕ್ಷ್ಮಿ’ ದತ್ತಿ ಪ್ರಶಸ್ತಿಗೆ ನಾಲ್ವರು ಆಯ್ಕೆ
    Awards

    ಕನ್ನಡ ಸಾಹಿತ್ಯ ಪರಿಷತ್ತಿನ ‘ಅಭಯಲಕ್ಷ್ಮಿ’ ದತ್ತಿ ಪ್ರಶಸ್ತಿಗೆ ನಾಲ್ವರು ಆಯ್ಕೆ

    April 10, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಶಸ್ತಿಗಳಲ್ಲೊಂದಾದ 2024ನೆಯ ಸಾಲಿನ ಅಭಯಲಕ್ಷ್ಮಿ ದತ್ತಿ ಪ್ರಶಸ್ತಿಗೆ ಡಾ. ಜಯಮಾಲ ಪೂವಣಿ, ಆರ್. ವೆಂಕಟರಾಜು, ಶಾಂತಲ ಧರ್ಮರಾಜ್, ಆರ್. ರಾಮಚಂದ್ರ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ.

    ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದದ ಜೊತೆಗೆ ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಪಾರ ಗೌರವದಿಂದ ಶ್ರೀಮತಿ ಪಿ. ಜಯಲಕ್ಷ್ಮಿಯವರು ತಮ್ಮ ಪತಿ ಎಸ್.ಎ. ಅಭಯಕುಮಾರ್ ಅವರ ದಿವ್ಯ ಸ್ಮರಣೆಯಲ್ಲಿ ‘ಅಭಯಲಕ್ಷ್ಮಿ’ ದತ್ತಿ ಪ್ರಶಸ್ತಿಯನ್ನು ಪರಿಷತ್ತಿನಲ್ಲಿ ಸ್ಥಾಪಿಸಿರುತ್ತಾರೆ. ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಇಬ್ಬರಿಗೆ ಪುರಸ್ಕಾರವನ್ನು ನೀಡಬೇಕೆನ್ನುವುದು ದತ್ತಿ ದಾನಿಗಳ ಆಶಯವಾಗಿದೆ

    2024ನೆಯ ಸಾಲಿನ ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಡಾ. ಜಯಮಾಲಾ ಪೂವಣಿಯವರು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದವರು, ಸಮಾಜ ವಿಜ್ಞಾನದಲ್ಲಿ ಡಾಕ್ಟೋರೇಟ್ ಪದವಿ ಪಡೆದ ಮೊದಲ ಜೈನ ಮಹಿಳೆ ಎಂಬ ಸಾಧನೆ ಮಾಡಿರುವ ಇವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಪ್ರಾಧ್ಯಾಪಿಕೆಯಾಗಿ ಸ್ವಯಂ ನಿವೃತ್ತಿ ಪಡೆದವರು. ಸಾಹಿತ್ಯ, ರಂಗಭೂಮಿ, ಅಧ್ಯಾತ್ಮ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಯನ್ನು ಮಾಡಿದ್ದು, ಬೆಂಗಳೂರಿನವರಾದ ಆರ್. ವೆಂಕಟರಾಜು ಹವ್ಯಾಸಿ ರಂಗಭೂಮಿಯ ಪ್ರಮುಖ ನಿರ್ದೇಶಕರ ನಾಟಕಗಳೂ ಸೇರಿದಂತೆ 150ಕ್ಕೂ ಹೆಚ್ಚಿನ ನಾಟಕಗಳಲ್ಲಿ ಅಭಿನಯಿಸಿರುತ್ತಾರೆ. 53 ಚಲನಚಿತ್ರಗಳಲ್ಲಿಯೂ ಅಭಿನಯಿಸಿರುವ ಇವರು ಕಂಠದಾನ ಕಲಾವಿದರಾಗಿಯೂ ಹೆಸರು ಮಾಡಿದ್ದಾರೆ. ಪ್ರಸ್ತುತ ಪಂಪ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಶಾಂತಲ ಧರ್ಮರಾಜ್ ಮೂರು ದಶಕಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕಾ ಬಳಗದಲ್ಲಿ ಕ್ರಿಯಾಶೀಲ ಪತ್ರಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಒಂದು ದಶಕಗಳಿಂದ ಕಸ್ತೂರಿ ಮಾಸ ಪತ್ರಿಕೆಯ ಸಂಪಾದಕರಾಗಿದ್ದು, ವಿಭಿನ್ನ ಶೈಲಿಯ ವರದಿ-ಲೇಖನಗಳನ್ನು ಅವರ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ನೀಡಿದ್ದು ಪತ್ರಿಕೋದ್ಯಮಕ್ಕೆ ಹೊಸ ರೂಪ ನೀಡಿದ್ದಾರೆ. ಉತ್ತಮ ಬರಹಗಾರ್ತಿ ಕೂಡ ಆಗಿರುವ ಇವರು ಹಲವು ಸಂಘಟನೆಯ ಜವಾಬ್ದಾರಿಯುತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರಿನ ಆರ್. ರಾಮಚಂದ್ರ ಕರುನಾಡ ರಂಗ ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷರು, ಪ್ರಚಂಡ ರಾವಣ, ಸತ್ಯ ಹರಿಶ್ಚಂದ್ರ, ಮಹಾಭಾರತ, ಎಚ್ಚಮ ನಾಯಕ ಮೊದಲಾದ ನಾಟಕಗಳಲ್ಲಿ ಅಭಿನಯಿಸಿ ಹೆಸರು ಮಾಡಿದ್ದಾರೆ.

    ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಡಾ. ಜಯಮಾಲ ಪೂವಣಿ, ಆರ್. ವೆಂಕಟರಾಜು, ಶಾಂತಲ ಧರ್ಮರಾಜ್, ಆರ್. ರಾಮಚಂದ್ರ ಇವರುಗಳನ್ನು ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಅಭಯಲಕ್ಷ್ಮಿ ಅಭಯಕುಮಾರ್ ಅವರುಗಳು ಭಾಗವಹಿಸಿದ್ದರು.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಂಗಣದಲ್ಲಿ ಸಭಿಕರನ್ನು ರಂಜಿಸಿದ ಕೊಂಕಣಿ ನಾಟಕ ‘ಎಸ್.ಬಿ.ಜಿ. ಟ್ರಾವೆಲ್ಸ್’
    Next Article ಮಂಗಳೂರಿನಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿ.ವಿ.ಯಲ್ಲಿ ‘ಮಿ. ಬೋಗೀಸ್’ ನಾಟಕ ಪ್ರದರ್ಶನ | ಏಪ್ರಿಲ್ 15
    roovari

    Add Comment Cancel Reply


    Related Posts

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.