ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಇವರು ಮಣಿಪಾಲ ಅಕಾಡೆಮಿ ಇದರ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ. ಎಚ್. ಶಾಂತಾರಾಮ್ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಕಾದಂಬರಿಯನ್ನು ಪರಿಗಣಿಸಿದ್ದು, 2023 ಮತ್ತು 2024ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ರೂಪಾಯಿ 15,000 ನಗದು ಮತ್ತು ಬೆಳ್ಳಿಯ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ ತಿಂಗಳಿನಲ್ಲಿ ನಡೆಯಲಿದೆ. ಆಸಕ್ತ ಪ್ರಕಾಶಕರು ಮತ್ತು ಲೇಖಕರು ಕಾದಂಬರಿಗಳು ನಾಲ್ಕು ಪ್ರತಿಗಳನ್ನು ದಿನಾಂಕ 15 ಮೇ 2025ರ ಒಳಗಾಗಿ ಡಾ. ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ – 576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶ ವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ. 8792107369 ಸಂಪರ್ಕಿಸಬಹುದು.