ಮಂಗಳೂರು : ಮಲಾರ್ ಅರಸ್ತಾನದ ಮದ್ರ ಪ್ರಕಾಶನ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಇವರು ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್ ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ-ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು ದಿನಾಂಕ 07 ಮೇ 2025ರಂದು ಸಂಜೆ 4-00 ಗಂಟೆಗೆ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ.
ಮೇಲ್ತೆನೆ ಸಂಘಟನೆಯ ಗೌರವಾಧ್ಯಕ್ಷ ಆಲಿಕುಂಞು ಪಾರೆ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಧ್ಯಕ್ಷ ವಿ. ಇಬ್ರಾಹಿಂ ನಡುಪದವು, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಬ್ಯಾರಿ ವಾರ್ತೆಯ ಉಪಸಂಪಾದಕ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಮದನಿ ಪಿ.ಯು. ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಇಸ್ಮಾಯಿಲ್ ಮಾಸ್ಟರ್, ಹಿರಿಯ ಸಾಹಿತಿ ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಭಾಗವಹಿಸಲಿದ್ದಾರೆ.