Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ
    Literature

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ನಾಡಿನ ಹಿರಿಯ ಸಾಹಿತಿ, ವಿಮರ್ಶಕರು, ಕವಿ ಚಿಂತಕರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿದ್ದ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ಇವರು ವಯೋಸಹಜ ಅನಾರೋಗ್ಯದಿಂದಾಗಿ ದಿನಾಂಕ 06 ಏಪ್ರಿಲ್ 2025ರಂದು ರಾತ್ರಿ ನಿಧನರಾಗಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

    ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ 1931ರಲ್ಲಿ ಜನಿಸಿದ ಸಿದ್ದಲಿಂಗಯ್ಯರವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದರು. ಇದೇ ವಿಶ್ವವಿದ್ಯಾಲಯದಿಂದ 1961ರಲ್ಲಿ ಸ್ನಾತಕೋತ್ತರ ಪದವೀಧರರಾಗಿ ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಉದ್ಯೋಗ ಆರಂಭಿಸಿದ್ದರು. ಮುಂದೆ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

    ಸಾಂಸ್ಕೃತಿಕ ಜಗತ್ತಿಗೆ ಕವಿ ಜಿ.ಎಸ್. ಸಿದ್ದಲಿಂಗಯ್ಯರ ಕೊಡುಗೆ ಗಮನಾರ್ಹವಾದದ್ದು. 1989ರಿಂದ 1992ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಅಧ್ಯಕ್ಷರಾಗಿ ಅವರು ಕೈಗೊಂಡ ಕೆಲಸಗಳು ಕನ್ನಡ ಸಾಹಿತ್ಯ ಪರಿಷತ್ತನ್ನು ಸದೃಢವಾಗಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದವು. ಸಾಹಿತ್ಯ ಪರಿಷತ್ತಿಗೆ ಒಂದು ನಿರ್ದಿಷ್ಟ ಧ್ವಜವನ್ನು ರೂಪಿಸುವಲ್ಲಿ ಅವರ ಪಾತ್ರ ಮಹತ್ವದ್ದು. ಆಡಳಿತಾತ್ಮಕವಾಗಿ, ಆರ್ಥಿಕವಾಗಿ ಪರಿಷತ್ತನ್ನು ಕಟ್ಟುವಲ್ಲಿ ಶ್ರಮಿಸಿದವರು ಜಿ.ಎಸ್. ಸಿದ್ದಲಿಂಗಯ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳಿಗೆ ವಿಶೇಷ ಗಮನ ಕೊಟ್ಟರು. ಜಿ.ಎಸ್. ಸಿದ್ದಲಿಂಗಯ್ಯ ಕವಿಯಾಗಿ, ವಿಮರ್ಶಕರಾಗಿ, ಅನುವಾದಕರಾಗಿ ಕನ್ನಡ ಪುಸ್ತಕ ಲೋಕಕ್ಕೆ ಅನನ್ಯ ಕೊಡುಗೆ ಕೊಟ್ಟಿದ್ದಾರೆ.

    ‘ರಸಗಂಗೆ’, ‘ಉತ್ತರ’, ‘ಚಿತ್ರ-ವಿಚಿತ್ರ’, ‘ಐವತ್ತರ ನೆರಳು’ ಸೇರಿ ವಿವಿಧ ಕವನ ಸಂಕಲನ, ‘ಶ್ರೀ ಕವಿ ಲಕ್ಷ್ಮೀಶ’, ‘ರತ್ನಾಕರವರ್ಣಿ’, ‘ಹೊಸಗನ್ನಡ ಕಾವ್ಯ’, ‘ಪಂಚಮುಖ ಚಾಮರಸ’, ‘ವಚನ ಸಾಹಿತ್ಯ-ಒಂದು ಇಣುಕು ನೋಟ’ ಸೇರಿ ವಿವಿಧ ವಿಮರ್ಶಾ ಕೃತಿಗಳು, ‘ಮಹಾನುಭಾವ ಬುದ್ಧ’, ‘ವಿರತಿಯ ಸಿರಿ ಸಪ್ಪಣ್ಣನವರು’, ‘ಬಸವಣ್ಣ’ ಮೊದಲಾದ ಜೀವನಚರಿತ್ರೆ, ‘ಶತಾಬಿ ದೀಪ’, ‘ಸಾಲು ದೀಪಗಳು’, ‘ಅಣ್ಣನ ನೂರೊಂದು ವನಗಳು’ ಸೇರಿ ವಿವಿಧ ಸಂಪಾದಿತ ಕೃತಿಗಳು ಸೇರಿ ಸಾಹಿತ್ಯ ವಿವಿಧ ಪ್ರಕಾರಗಳಲ್ಲಿ ಕೃತಿ ರಚಿಸಿದ್ದಾರೆ.

    ತುಮಕೂರಿನ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಮುಂಬೈನ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ಸೇರಿ ಹಲವು ಗೌರವಕ್ಕೆ ಹಾಗೂ ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11
    Next Article ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.