Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 
    Awards

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಸಹಯೋಗದೊಂದಿಗೆ ರಂಗ ಸುದರ್ಶನ (ರಿ.) ಸಸಿಹಿತ್ಲು ಪರಮ ಪದ್ಮ ಕಲಾವಿದರು ಸಾದರ ಪಡಿಸುವ ‘ಶಿವ ಪುರ್ಸಾದ ಬಬ್ಬರ್ಯ’ ನಾಟಕಕ್ಕೆ ಬಂಗಾರ ಸಡಗರ ಮತ್ತು ತುಳು ನಾಟಕ : ಬೆಳವಣಿಗೆ ಪರಿವರ್ತನೆ ವಿಚಾರ ಮಂಥನ ಕಾರ್ಯಕ್ರಮವನ್ನು ದಿನಾಂಕ 11 ಮೇ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಂಜೆ 5-00 ಗಂಟೆಗೆ ವಾಮಂಜೂರಿನ ಅಮೃತೇಶ್ವರ ನಾಟ್ಯಾಲಯದವರಿಂದ ವಿದುಷಿ ಚಿತ್ರಾಕ್ಷಿ ಅಜಿತ್ ಕುಮಾರ್ ಇವರ ನಿರ್ದೇಶನಅಲ್ಲಿ ‘ತುಳು ನೃತ್ಯ ಸಿರಿ’ ಮತ್ತು ಮತ್ತು ‘ತುಳು ಪದ ರಂಗಿತ’ ಪ್ರಸ್ತುತಗೊಳ್ಳಲಿದೆ. 6-00 ಗಂಟೆಗೆ ಬಬ್ಬರ್ಯ ಜಾನಪದ ಐತಿಹಾಸಿಕ ನಾಟಕದ ಬಂಗಾರ ಸಡಗರ ಮತ್ತು ತುಳು ನಾಟಕ : ಬೆಳವಣಿಗೆ ಪರಿವರ್ತನೆ ವಿಚಾರ ಮಂಥನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷತೆಯನ್ನು ತಾರಾನಾಥ ಗಟ್ಟಿ ಕಾಪಿಕಾಡ್ ಇವರು ವಹಿಸಲಿದ್ದು, ಹೊಟೇಲ್ ರಂಗೋಲಿಯ ಮಾಲಕರಾದ ಚಂದ್ರಹಾಸ ಶೆಟ್ಟಿ ಮತ್ತು ಭಾರತ್ ಕೋ-ಅಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಸೂರ್ಯಕಾಂತ್ ಜೆ. ಸುವರ್ಣ ಇವರು ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ‘ಹಳೆ ತಲೆಮಾರಿನ ನಾಟಕಗಳ ಪ್ರಸ್ತುತಿ ಮತ್ತು ಸ್ವೀಕಾರ’ ಎಂಬ ವಿಷಯದ ಬಗ್ಗೆ ಸಾಹಿತಿ ಯಶವಂತ ಬೋಳಾರು ಮತ್ತು ‘ಹೊಸ ತಲೆಮಾರಿನ ನಾಟಕಗಳ ಬೆಳವಣಿಗೆ ಮತ್ತು ಪರಿವರ್ತನೆ’ ಎಂಬ ವಿಷಯದ ಬಗ್ಗೆ ಸಾಹಿತಿ ನರೇಶ್ ಕುಮಾರ್ ಸಸಿಹಿತ್ಲು ಇವರು ವಿಚಾರ ಮಂಡನೆ ಮಾಡಲಿದ್ದಾರೆ.

    ಇದೇ ಸಂದರ್ಭದಲ್ಲಿ ಸೃಜನಶೀಲ ತುಳು ಕನ್ನಡ ಪ್ರಬುದ್ಧ ನಾಟಕಕಾರ ಶಶಿರಾಜ್ ರಾವ್ ಕಾವೂರು ಇವರಿಗೆ ‘ರಂಗ ಶಶಿ’ ಹಾಗೂ ಹೊರನಾಡಿನಲ್ಲಿ ತುಳು ಎಂ.ಎ.ಯಲ್ಲಿ ಮೊದಲ ರ‍್ಯಾಂಕ್ ಪಡೆದ ಪ್ರಥಮ ಮಹಿಳಾ ಸಾಧಕಿ ಶ್ರೀಮತಿ ಮಣಿ ಮನಮೋಹನ್ ರೈ ಇವರಿಗೆ ‘ಹೊರನಾಡ ತುಳು ಮಣಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಪರಮ ಪದ್ಮ ಕಲಾವಿದರಿಂದ ‘ಶಿವ ಪುರ್ಸಾದ ಬಬ್ಬರ್ಯ’ ಎಂಬ ನಾಟಕ ಪ್ರದರ್ಶನ ನಡೆಯಲಿದೆ.

    award baikady dance drama felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17
    Next Article ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.