Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ
    Felicitation

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ವತಿಯಿಂದ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ ಕಾರ್ಯಕ್ರಮವು ದಿನಾಂಕ 17 ಮೇ 2025ರಂದು ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಪ್ರಾದ್ಯಾಪಕಿ, ಸಾಹಿತಿ ಡಾ. ನಿಕೇತನ “ಪರಸ್ಪರ ಒಗ್ಗೂಡುವಿಕೆ ನಮ್ಮ ಸಂಸ್ಕೃತಿ ಮತ್ತು ಭಾಷೆಯ ಅಪೂರ್ವವಾದ ಕೊಡುಗೆಯಾಗಿದೆ. ನಮ್ಮ ಸಾಹಿತ್ಯ ವಿವಿಧ ಮಜಲುಗಳನ್ನು ಸ್ಪರ್ಶಿಸಿ ವಿವಿಧ ರಂಗಕ್ಕೆ ಕಾಲಿಟ್ಟರೂ ಕೂಡ ಅದರ ಮೌಲ್ಯವನ್ನು ಕಳೆದುಕೊಳ್ಳದೆ ಇನ್ನಷ್ಟು ಎತ್ತರಕ್ಕೆ ಏರಿದೆ. ಸಾಮಗರವರ ದೈತ್ಯ ಪ್ರತಿಭೆ, ಅವರ ಮಾನವೀಯತೆಯ ನಡೆ ಅಭಿನಂದನಾರ್ಹ. ಕನ್ನಡ ಮತ್ತು ಆಂಗ್ಲ ಭಾಷೆಯ ಅವರ ಪ್ರೌಢಿಮೆ ಅವರು ನಾಡಿಗೆ ಕೊಟ್ಟಂತ ಶ್ರೇಷ್ಠ ಚಿಂತನೆಗಳು ಎಲ್ಲರಿಗೂ ಮಾದರಿಯಾಗಿದೆ. ಕನ್ನಡ ನಮ್ಮ ಸ್ವಾಭಿಮಾನದ ಸಂಕೇತವಾಗಿದೆ ಇದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ. ಈ ಹಿಂದೆ ಸಾಹಿತ್ಯ ಧರ್ಮ ಮತ್ತು ರಾಜಾಶ್ರಯ ಪಡೆದಿತ್ತು. ಆದರೆ ಇಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತಷ್ಟು ಗಟ್ಟಿಯಾಗಿ ಎತ್ತರಕ್ಕೆ ಏರಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಚರ್ಚೆಗಳು, ವಿಚಾರಗೋಷ್ಠಿ, ಯಕ್ಷ ಕವಿಗೋಷ್ಠಿ ಸೇರಿದಂತೆ ಬಹಳಷ್ಟು ಉತ್ತಮವಾದ ಕಾರ್ಯಕ್ರಮಗಳು ನಡೆದಿದೆ” ಎಂದು ಹೇಳಿದರು.

    ಸಮ್ಮೇಳನದ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ ಮಾತನಾಡಿ, “ಮಲ್ಪೆ ಎಂದರೆ ಎಲ್ಲರಿಗೂ ನೆನಪಾಗುವುದು ಶಂಕರನಾರಾಯಣ ಸಾಮಗ ಅಂತ ಶ್ರೇಷ್ಠ ವ್ಯಕ್ತಿ. ಅವರು ಕೊಟ್ಟಂತಹ ಕೊಡುಗೆಗಳು ನಮ್ಮನ್ನು ಈ ಎತ್ತರಕ್ಕೆ ಏರಿಸುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಕ್ಷಗಾನದ ಕಲಾವಿದರನ್ನು ಸಮ್ಮೇಳನ ಅಧ್ಯಕ್ಷ ಮಾಡಿರೋದು ಯಕ್ಷಗಾನಕ್ಕೆ ನೀಡಿದ ದೊಡ್ಡ ಅಭಿನಂದನೆಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ವೈವಿಧ್ಯಪೂರ್ಣ ಕಾರ್ಯಕ್ರಮಗಳಿಂದ ರಾಜ್ಯದ ಮನೆ ಮಾತಾಗಿದೆ. ಈ ರೀತಿಯ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರೆಯಬೇಕು” ಎಂದರು.

    ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕ.ಸಾ.ಪ. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ವಹಿಸಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ಯಕ್ಷರಂಗಾಯಣ ಕಾರ್ಕಳ ನಿರ್ದೇಶಕ ವೆಂಕಟ್ರಮಣ ಐತಾಳ, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಕೊಡವೂರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಸಾಧು ಸಾಲಿಯನ್, ಕಾರ್ಯದರ್ಶಿ ಸತೀಶ್ ಕೊಡವೂರು, ತಾಲೂಕು ಪದಾಧಿಕಾರಿಗಳಾದ ಜನಾರ್ದನ ಕೊಡವೂರು, ರಾಜೇಶ್ ಭಟ್ ಪಣಿಯಾಡಿ, ರಂಜಿನಿ ವಸಂತ್ ಮುಂತಾದವರು ಉಪಸ್ಥಿತರಿದ್ದರು. ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಅಭಿನಂದಿಸಲಾಯಿತು. ಸಮ್ಮೇಳನದ ಅಧ್ಯಕ್ಷ ದಂಪತಿಗಳಿಗೆ ಗೌರವಿಸಲಾಯಿತು. ಪ್ರಭಾಕರ್ ತುಮರಿ ಮತ್ತು ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ರಂಜನಿ ವಸಂತ್ ವಂದಿಸಿದರು. ನಂತರ ಯಕ್ಷ ರಂಗಾಯಣ ಇವರಿಂದ ಕುಮಾರವ್ಯಾಸ ಭಾರತ ವಿರಾಟ ಪರ್ವದಿಂದ ಆಯ್ದ ಭಾಗ ‘ಆರೊಡನೆ ಕಾದುವೆನು’ ಕಾರ್ಯಕ್ರಮ ಪ್ರಸ್ತುತಗೊಂಡಿತು.

    baikady felicitation Literature roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಲೇಖಕ, ಪ್ರಕಾಶನ, ರಂಗಕರ್ಮಿ ಡಾ. ರಮಾಕಾಂತ ಜೋಶಿ ನಿಧನ
    Next Article ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25
    roovari

    Add Comment Cancel Reply


    Related Posts

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.