Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ
    Awards

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಿದ್ಧಕಟ್ಟೆ : ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಸಿದ್ಧ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸಮ್ಮಾನದೊಂದಿಗೆ ಅಳಿಕೆ ರಾಮಯ್ಯ ರೈ ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 21 ಮೇ 2025ರಂದು ನಡೆಯಿತು.

    ಟ್ರಸ್ಟಿನ ಮುಖ್ಯ ಸಲಹೆಗಾರರಾದ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಮಾತನಾಡಿ “ತೆಂಕು ತಿಟ್ಟಿನ ಬಣ್ಣದ ವೇಷಗಾರಿಕೆ ಯಕ್ಷಗಾನ ರಂಗದ ವಿಸ್ಮಯಗಳಲ್ಲೊಂದು. ಅನುಭವೀ ಹಿರಿಯ ಕಲಾವಿದರು ಈ ಪ್ರಕಾರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಅದೇ ಪರಂಪರೆಯ ಜಾಡಿನಲ್ಲಿ ಹೊಸ ಆವಿಷ್ಕಾರದೊಂದಿಗೆ ಜನಮನ ಗೆದ್ದ ಕಲಾವಿದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್. ಅವರು ಓರ್ವ ಪ್ರಯೋಗಶೀಲ ಬಣ್ಣದ ವೇಷಧಾರಿ” ಎಂದು ಹೇಳಿದರು. ಇನ್ನೋರ್ವ ಸಲಹೆಗಾರ ಹಾಗೂ ಸದಾಶಿವ ಶೆಟ್ಟಿಗಾರ್ ಅವರ ಒಡನಾಡಿ ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು.

    ಆಯ್ಕೆ ಸಮಿತಿ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ “ಬಣ್ಣದ ಮಾಲಿಂಗಜ್ಜನ ಗರಡಿಯಲ್ಲಿ ಪಳಗಿದ ಸದಾಶಿವ ಶೆಟ್ಟಿಗಾರ್ ಪಾರಂಪರಿಕ ಶೈಲಿ, ಹೊಸತನದ ಮೆರುಗು ಮತ್ತು ಪ್ರಬುದ್ಧ ಮಾತುಗಾರಿಕೆಯ ಮೂಲಕ ಭರವಸೆಯ ಬಣ್ಣದ ವೇಷಧಾರಿಯಾಗಿ ಬೆಳೆದು ಬಂದವರು. ಗಜೇಂದ್ರ ಮೋಕ್ಷದ ಮಕರ, ರಾಮ ಕಾರುಣ್ಯದ ಕಾಕಾಸುರ ಅವರದೇ ಪರಿಕಲ್ಪನೆಯ ಬಣ್ಣದ ವಿಶಿಷ್ಟ ಮಾದರಿಗಳು. ಪ್ರಸ್ತುತ 60ರ ಹರೆಯದಲ್ಲಿ ಗಂಭೀರ ಕಾಯಿಲೆಗೆ ತುತ್ತಾಗಿ ತೀರಾ ಆರ್ಥಿಕ ಸಂಕಷ್ಟದಲ್ಲಿರುವ ಅವರಿಗೆ ಚಿಕಿತ್ಸೆಗಾಗಿ ದೊಡ್ಡ ಮೊತ್ತದ ಹಣ ಬೇಕಾಗಿದೆ. ಕಲಾಭಿಮಾನಿಗಳು ಉದಾರವಾಗಿ ಸ್ಪಂದಿಸಿದರೆ ಮಾತ್ರ ಯಕ್ಷಗಾನ ರಂಗದಲ್ಲಿ ಮುಂದೆಯೂ ಅವರು ದುಡಿಯಬಲ್ಲರು.” ನೆರವು ನೀಡುವವರು ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಬಹುದು. (ಗೂಗಲ್ ಪೇ ನಂ.9741025189) ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅಳಿಕೆ ಸ್ಮಾರಕ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾ ಪ್ರಸಾದ್ ರೈ ರೂ.20,000/- ಸಹಾಯ ನಿಧಿಯನ್ನು ಅರ್ಪಿಸಿ, ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

    ಸದಾಶಿವ ಶೆಟ್ಟಿಗಾರ್ ಮತ್ತು ಕಲಾವತಿ ದಂಪತಿಗಳನ್ನು ಸಿದ್ಧಕಟ್ಟೆಯ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸದಾಶಿವ ಶೆಟ್ಟಿಗಾರ್ “ಕೀರ್ತಿಶೇಷ ಅಳಿಕೆಯವರದು ತುಂಬಾ ಎತ್ತರದ ವ್ಯಕ್ತಿತ್ವ. ಅವರ ಜೊತೆಯಲ್ಲಿ ಒಂದು ವೇಷ ಮಾಡಿದ್ದೇನೆ. ಅವರ ಹೆಸರಿನ ಗೌರವ ಸಿಕ್ಕಿರುವುದಕ್ಕೆ ಧನ್ಯತೆಯ ಭಾವ ಮೂಡಿದೆ” ಎಂದು ಕೃತಜ್ಞತೆ ಸಲ್ಲಿಸಿದರು. ಕವಿ – ಸಂಘಟಕ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ ಸನ್ಮಾನ ಫಲಕ ವಾಚಿಸಿದರು. ಟ್ರಸ್ಟ್ ಸದಸ್ಯರಾದ ಮಹಾಬಲ ಶೆಟ್ಟಿ ಬಜನಿ ಗುತ್ತು, ಅಶೋಕ್ ಶೆಟ್ಟಿ ದರ್ಬೆ ಮತ್ತು ಶೆಟ್ಟಿಗಾರ್ ಅವರ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    award baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ
    Next Article ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ
    roovari

    Add Comment Cancel Reply


    Related Posts

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.