Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home »  ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ
    Awards

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗದ ಅಧ್ಯಕ್ಷರಾಗಿ ಬಳಿಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಹಾಗೂ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಪತಿಗಳಾಗಿ ಸೇವೆ ಸಲ್ಲಿಸಿದ ವಿದ್ವಾಂಸ ಪ್ರೊ. ಬಿ.ಎ ವಿವೇಕ ರೈ ಅವರಿಗೆ ಕರ್ನಾಟಕ ಸರಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ದೊರಕಿದ ಪ್ರಯುಕ್ತ ಅಭಿವಂದನ ಸಮಾರಂಭವು ದಿನಾಂಕ 03 ಜೂನ್ 2025ರ ಮಂಗಳವಾರದಂದು ಮಂಗಳೂರು ವಿವಿಯಲ್ಲಿ ನಡೆಯಿತು.

    ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದ ಅವರು “ನಾವು ಕರಾವಳಿಯಲ್ಲಿ ದ್ವೇಷ ಬಿತ್ತುವುದು ಬೇಡ. ಬೆಂಕಿ ಹಚ್ಚೋದೂ ಬೇಡ. ಮನುಷ್ಯ ಪ್ರೀತಿಯ ದೀಪ ಹಚ್ಚೋಣ. ಬಹುತ್ವದ ಈ ಮಣ್ಣಿನಲ್ಲಿ ನಾಡಿಗೆ ಹೊಸ ಸಂವೇದನೆಯನ್ನು ದಾಟಿಸಬಲ್ಲ ಶಕ್ತಿಯಿದೆ. ಎಲ್ಲ ಅಭಿಪ್ರಾಯಗಳಿಗೂ ಕಿಟಕಿ ಬಾಗಿಲುಗಳನ್ನು ತೆರೆದಿಟ್ಟು ಪರಸ್ಪರ ಗೌರವ ಪ್ರೀತಿಗೆ ಬದ್ಧವಾದ ಸಮಾಜವನ್ನು ಕಟ್ಟೋಣ. ವಿಶ್ವವಿದ್ಯಾನಿಲಯಗಳನ್ನು ಕಟ್ಟಡ, ಹಣದಿಂದ ಕಟ್ಟಲು ಸಾಧ್ಯವಿಲ್ಲ. ಶೈಕ್ಷಣಿಕ ಕಾಳಜಿ, ಜ್ಞಾನದ ಬಗೆಗಿನ ಹಸಿವು ಮತ್ತು ಮಾನವೀಯ ಸಂಬಂಧಗಳ ಸಂಘಟಿತ ಪ್ರಯತ್ನದ ಮೂಲಕ ಕಟ್ಟಬೇಕು. ಕುವೆಂಪು ಮತ್ತು ಕಾರಂತರ ಬರವಣಿಗೆ ಮತ್ತು ಬದುಕು ನನಗೆ ಆದರ್ಶ. ಪಂಪ ನನ್ನ ಇಷ್ಟದ ಕವಿ. ಪಂಪನ ಕುರಿತಾಗಿಯೇ ಮುಂದಿನ ನನ್ನ ಕೃತಿ ಬರಲಿದೆ. ಸಾಹಿತ್ಯದ ಓದು ನನಗೆ ಬದುಕಿನ ಪ್ರಾಮಾಣಿಕತೆಯನ್ನು ಕಲಿಸಿದೆ. ಕುಲಪತಿಯಾದ ಬಳಿಕ ಮೂಡಾದಿಂದ ಸೈಟಿನ ಕೊಡುಗೆ ಬಂದಿತ್ತು. ಅಧಿಕಾರಿಗಳು ತಕೊಳ್ಳಿ ಸರ್ ಮುಂದೆ ಮಾರಬಹುದು ಎಂದರೂ ನನಗೆ ಸರಿ ಕಾಣಲಿಲ್ಲ. ನಾನು ಅದನ್ನು ನಿರಾಕರಿಸಿದೆ” ಎಂದರು.

    ಅಭಿನಂದನ ಭಾಷಣ ಮಾಡಿದ ಜಾನಪದ ವಿದ್ವಾಂಸ, ಕರ್ನಾಟಕ ಜಾನಪದ ವಿವಿ ಇದರ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪಗೌಡ “’ನಿಮ್ನ ಮುಡಿಗೆ ಹೂವನ್ನಲದೆ ಹುಲ್ಲ ತರೆನು’ ಇದು ಪ್ರೊ. ವಿವೇಕ್ ರೈಗಳ ಬದುಕಿನ ಯಶಸ್ಸಿನ ಗುಟ್ಟು. ಜೀವನದುದ್ದಕ್ಕೂ ಶಿಸ್ತು, ಕಾಯಕನಿಷ್ಟೆಯೊಂದಿಗೆ ಬೆಳೆದವರು. ಇವರ ವಿಮರ್ಶೆಗಳಲ್ಲೂ ಖಂಡನೆ ಇಲ್ಲ ಮಂಡನೆ ಇದೆ.
    ಕನ್ನಡ‌ ಕೆಲಸಗಳ ತೀವ್ರತೆ ಈಗ ಕಡಿಮೆಯಾಗಿದ್ದು, ಕನ್ನಡ ಮುರಿಯುವ ಕೆಲಸದ ಬದಲು ಕನ್ನಡವನ್ನು ‌ಕಟ್ಟುವ ಕೆಲಸ ನಮ್ಮಿಂದ ಆಗಬೇಕಿದೆ. ಎಲ್ಲಾ ಕನ್ನಡದ ಮನಸ್ಸುಗಳು ಒಟ್ಟಾಗಿ‌ ಕೆಲಸ ಮಾಡಿದರೆ ಮಾತ್ರ ಕನ್ನಡ ಬೆಳೆಯಬಹುದು ಎಂಬ ನಿಷ್ಠೆಯೊಂದಿಗೆ ವಿವೇಕ್ ರೈ ಅವರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡ ವಿದ್ವಾಂಸರಾಗಿದ್ದಾರೆ.
    ಸಾಹಿತ್ಯ, ಸಂಸ್ಕೃತಿಯನ್ನು ಜೋಡಿಸುವ ಪ್ರತಿಭಾನ್ವಿತ ಕವಿ ಪಂಪ. ಅವರ ಸಾಹಿತ್ಯದ‌ ನಡಿಗೆಯನ್ನು ವಿವೇಕ್ ರೈ ಅವರ ಬರವಣಿಗೆಗಳಲ್ಲಿ ಕಾಣಲು ಸಾಧ್ಯ. ಟೀಕಿಸುವವರಿಗೆ ಕೆಲಸದ ಮೂಲಕವೇ ಉತ್ತರಕೊಡಬೇಕು ಎನ್ನುವ ರೈ ಅವರು ಕನ್ನಡದ ಶೈಕ್ಷಣಿಕ ವಿಸ್ತರಣೆ, ತುಳು ಸಾಹಿತ್ಯದ ಪುನರ್ ವ್ಯಾಖ್ಯಾನ, ಮೌಖಿಕ ಸಾಹಿತ್ಯದ ದಾಖಲೀಕರಣ ಮೊದಲಾದ ಮೌಲ್ಯಯುತ ಕೆಲಸದೊಂದಿಗೆ ಕನ್ನಡದ ವಿವೇಕವಾಗಿ ಮೂಡಿಬಂದಿದ್ದಾರೆ. ಅವರಿಗೆ ಅರ್ಹವಾಗಿಯೇ ಪಂಪ ಪ್ರಶಸ್ತಿ ಬಂದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಗೌರವ ಪುರಸ್ಕಾರಗಳು ಲಭಿಸುವಂತಾಗಲಿ” ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಮಂಗಳೂರು ವಿವಿ ಇದರ ಕುಲಪತಿಗಳಾದ ಪ್ರೊ. ಪಿ. ಎಲ್. ಧರ್ಮ ಮಾತನಾಡಿ
    “ದ. ಕ. ಜಿಲ್ಲೆಯ ಸಾಹಿತ್ಯ , ಸಂಸ್ಕೃತಿಯ ಅಪಾರ ಜ್ಞಾನದೊಂದಿಗೆ ಮನಸ್ಸುಗಳನ್ನು ಜೋಡಿಸುವ ಕಾರ್ಯ ಮಾಡಿರುವ ಪ್ರೊ. ವಿವೇಕ್ ರೈ ಅವರು, ಮಂಗಳೂರು ಕ್ಯಾಂಪಸ್ ಹೊಸ ರೀತಿಯ ಶೈಕ್ಷಣಿಕ ವಾತಾವರಣವನ್ನು ನಿರ್ಮಾಣ ಮಾಡಿಕೊಟ್ಟಿದ್ದರು. ವಿವೇಕ್ ರೈ ಕಟ್ಟಿಕೊಟ್ಟಿರುವ ಪರಂಪರೆಯನ್ನು ಮುನ್ನಡೆಸಲಿದ್ದೇವೆ” ಎಂದರು.

    ಅಭಿವಂದನ ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಇಲ್ಲಿನ ಹಣಕಾಸು ಅಧಿಕಾರಿ ಪ್ರೊ. ವೈ. ಸಂಗಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ. ದೇವೇಂದ್ರಪ್ಪ, ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಅಭಯಕುಮಾರ್, ಪ್ರೊ. ಶಿವರಾಮ ಶೆಟ್ಟಿ , ಪ್ರಾಧ್ಯಾಪಕರಾದ ಡಾ.ನಾಗಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.

    ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ‌ರಾದ ಪ್ರೊ. ಸೋಮಣ್ಣ ಹೊಂಗಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಉಪನ್ಯಾಸಕ ಡಾ.ಯಶುಕುಮಾರ್ ಕಾರ್ಯಕ್ರಮ ನಿರೂಪಿಸಿ, ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ ಅವರು ವಂದಿಸಿದರು.

     

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು
    Next Article ಯುವ ನೃತ್ಯೋತ್ಸವ-2025| ಜೂನ್ 08
    roovari

    Add Comment Cancel Reply


    Related Posts

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.