Subscribe to Updates

    Get the latest creative news from FooBar about art, design and business.

    What's Hot

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ
    Awards

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 04 ಜೂನ್ 2025ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ, ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.

    ಈ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ “ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು. ಕೊಡಗಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ಬುಡಕಟ್ಟು ಜನಾಂಗಗಳ ಬಗ್ಗೆ ವಿಸ್ತೃತವಾದ ಅಧ್ಯಯನ ನಡೆಯುವಂತಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನಪದ ಮತ್ತು ಸಾಮಾಜಿಕ ಅಧ್ಯಯನ ಸಾಕಷ್ಟು ನಡೆದಿವೆ. ಅದೇ ರೀತಿ ಕೊಡಗು ಜಿಲ್ಲೆಯಲ್ಲಿಯೂ ಜಾನಪದ ಮತ್ತು ಸಾಮಾಜಿಕ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ಕೊಡಗು ಜಿಲ್ಲೆಯಲ್ಲಿ ಗಮಕ ಕ್ಷೇತ್ರವನ್ನು ಉಳಿಸಿ ಬೆಳೆಸುವಂತಾಗಬೇಕು. ಹಿಂದೆ ಗೋಪಾಲಕೃಷ್ಣ ಅವರು ಗಮಕ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಮುಂದಿನ ದಿನಗಳಲ್ಲಿ ಗಮಕ ಸಂಗೀತ ಕ್ಷೇತ್ರವನ್ನು ಉಳಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು” ಎಂದು ಸಲಹೆ ನೀಡಿದರು.

    ‘ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಸ್ಮಿತಾ ಅಮೃತರಾಜ್ “ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಲೋಕ ದರ್ಶನ ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಗಬೇಕು. ಕನ್ನಡ ಸಾಹಿತ್ಯ ಪರಿಷತ್ತು ಬರಹಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶಗಳು ದೊರೆಯುವಂತಾಗಬೇಕು” ಎಂದರು.

    ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಅವರು ಮಾತನಾಡಿ “ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ತಮ್ಮ ಅಧಿಕಾರ ಅವಧಿಯಲ್ಲಿ ಕೃಷ್ಣರಾಜ ನಾಗರ, ವಾಣಿ ವಿಲಾಸ ಸಾಗರ ಅಣೆಕಟ್ಟು ನಿರ್ಮಿಸಿ, ಕೃಷಿಕರ ಕಣ್ಮಣಿಯಾಗಿದ್ದಾರೆ. ಮೈಸೂರು ವೈದ್ಯಕೀಯ ಕಾಲೇಜು, ಮೈಸೂರು ವಿಶ್ವವಿದ್ಯಾನಿಲಯ, ಕನ್ನಡ ಸಾಹಿತ್ಯ ಪರಿಷತ್ತು, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಸ್ಯಾಂಡಲ್ ಸೋಪು, ಭಾರತೀಯ ವಿಜ್ಞಾನ ಸಂಸ್ಥೆ, ಮೈಸೂರು ಬ್ಯಾಂಕ್, ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಹೀಗೆ ಹಲವಾರು ಅಭಿವೃದ್ಧಿ ಮತ್ತು ಪ್ರಗತಿಪರ ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಮೈಸೂರು ರಾಜ್ಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದರು.

    ಸಾಹಿತಿ ನಾಗೇಶ್ ಕಾಲೂರು ಅವರು ಮಾತನಾಡಿ “ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಅವರವರ ಭಾಷೆಯನ್ನು ಪ್ರೀತಿಸಬೇಕು. ಗೌರವಿಸಬೇಕು ಹಾಗೂ ಇತರ ಭಾಷೆಗಳನ್ನು ಸಹ ಗೌರವಿಸಬೇಕು. ಅವರವರ ಮಾತೃ ಭಾಷೆ ಅವರಿಗೆ ಹೃದಯ ಶ್ರೀಮಂತಿಕೆ ಭಾಷೆಯಾಗಿದೆ. ಆ ನಿಟ್ಟಿನಲ್ಲಿ ಮತ್ತೊಂದು ಭಾಷೆಯನ್ನು ಗೌರವಿಸಬೇಕು” ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಅವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 40 ದತ್ತಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಗೌರವಿಸುತ್ತಾ ಬರಲಾಗಿದೆ. ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ” ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಅವರು ಮಾತನಾಡಿ ಬೂಕರ್ ಪ್ರಶಸ್ತಿ ವಿಜೇತರಾದ ಮಡಿಕೇರಿಯ ದೀಪಾ ಭಾಸ್ತಿಯವರಿಗೆ ಜೂ.9 ಅಥವಾ 10ರಂದು ಸನ್ಮಾನ ಕಾರ್ಯಕ್ರಮ ಏರ್ಪಡಿಸಲು ಉದ್ದೇಶಿಸಲಾಗಿದೆ. ಸ್ಮಿತಾ ಅಮೃತರಾಜ್ ಅವರ ಸಾಹಿತ್ಯ ವಿಚಾರಧಾರೆ ಹಾಗೂ ಸುಬ್ರಾಯ ಸಂಪಾಜೆ ಅವರ ಸಾಂಸ್ಕೃತಿಕ ಮತ್ತು ಆಕಾಶವಾಣಿಯಲ್ಲಿನ ಸೇವೆ ಬಗ್ಗೆ ಗುಣಗಾನ ಮಾಡಿದರು.

    ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದಿಂದ ಸುಬ್ರಾಯ ಸಂಪಾಜೆಯವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಪುದಿಯ ನೆರವನ ರೇವತಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕ.ಸಾ.ಪ. ಕಾರ್ಯಕಾರಿ ಸಮಿತಿ ಸದಸ್ಯರಾದ ಬಾರಿಯಂಡ ಜೋಯಪ್ಪ, ಕಾವೇರಿ ಪ್ರಕಾಶ್, ಬೈತಡ್ಕ ಜಾನಕಿ, ಕಟ್ರತನ ಲಲಿತ ಅಯ್ಯಣ್ಣ, ಲೋಕನಾಥ ಅಮೆಚೂರು, ಪ್ರೇಮ ರಾಘವಯ್ಯ, ಸುನೀತಾ ಲೋಕೇಶ್, ಸುಂದರಿ ಮಾಚಯ್ಯ, ಸಹನಾ ಕಾಂತಬೈಲು, ಗೀತಾ, ನೀತು, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಶಿಕ್ಷಣ ಇಲಾಖೆಯ ಕೃಷ್ಣಪ್ಪ ಇತರರು ಉಪಸ್ಥಿತರಿದ್ದರು. ವಿನೋದ್ ಮೂಡಗದ್ದೆ ನಿರೂಪಿಸಿ, ಕಡ್ಲೇರ ತುಳಸಿ ಮೋಹನ್ ಸ್ವಾಗತಿಸಿ, ವಾಸು ರೈ ವಂದಿಸಿದರು.

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08
    Next Article ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08
    roovari

    Add Comment Cancel Reply


    Related Posts

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.