ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ ಇವರ ಜಂಟಿ ಆಶ್ರಯದಲ್ಲಿ 105ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 10 ಜೂನ್ 2025ರಂದು ಮಧ್ಯಾಹ್ನ 2-00 ಗಂಟೆಗೆ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಚೈರ್ ಮ್ಯಾನ್ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಹಾಗೂ ಲೇಖಕರಾದ ರವೀಂದ್ರ ರೈ ಕಳ್ಳಿಮಾರ್ ಮತ್ತು ನಿರೂಪಕಿ ವಾರ್ತಾ ವಾಚಕಿ ಡಾ. ಪ್ರಿಯ ಹರೀಶ್ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.