ಮಂಜೇಶ್ವರ: ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರ ಸಾರಥ್ಯದಲ್ಲಿ ಹೊರ ಬರುತ್ತಿರುವ, ಗಡಿನಾಡು ಕಾಸರಗೋಡಿನ ವಿವಿಧ ಸಾಧಕರ ಪರಿಚಯ ಕೃತಿ ಸರಣಿಯಾದ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆಯ ಲೋಕಾರ್ಪಣೆ ಹಾಗೂ ಅವಲೋಕನ ಸಮಾರಂಭವು ದಿನಾಂಕ 07 ಜೂನ್ 2025ನೇ ಶನಿವಾರದಂದು ಮೀಯಪದವು ಶ್ರೀ ವಿದ್ಯವರ್ಧಕ ಉನ್ನತ ಪ್ರೌಢಶಾಲೆಯಲ್ಲಿ ನಡೆಯಿತು.
ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ.ರಮಾನಂದ ಬನಾರಿ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಖ್ಯಾತ ಸಾಹಿತಿ ಹಾಗೂ ವಿಮರ್ಶಕರಾದ ಅರವಿಂದ ಚೊಕ್ಕಾಡಿ ಮಾತನಾಡಿ “’ಕನ್ನಡಿಯಲ್ಲಿ ಕನ್ನಡಿಗ’ ಮಾಲಿಕೆ ವಿಶಿಷ್ಟವಾದುದು. ಗಡಿಭಾಗದ ಅನೇಕ ಸಾಧಕರನ್ನು ಪರಿಚಯಿಸುವ ಪುಸ್ತಕಗಳ ಮಾಲಿಕೆಯನ್ನು ಹೊರತರುವ ಈ ಪರಿಕಲ್ಪನೆ ನಾವೀನ್ಯತೆಯಿಂದ ಕೂಡಿದ್ದು, ಗಡಿನಾಡು ಸಂಸ್ಕೃತಿ ಅನಾವರಣ ಸ್ತುತ್ಯರ್ಹ ಎಂದು ಖ್ಯಾತ ಸಾಹಿತಿ, ವಿಮರ್ಶಕ ಅರವಿಂದ ಚೊಕ್ಕಾಡಿ ಹೇಳಿದರು.
ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಖ್ಯಾತ ದಂತ ವೈದ್ಯ ಹಾಗೂ ಸಾಹಿತಿಗಳಾದ ಡಾ. ಮುರಲೀ ಮೋಹನ ಚೂಂತಾರು ಮುಖ್ಯ ಅತಿಥಿಗಳಾಗಿದ್ದರು. ಸಾಹಿತಿ, ಪ್ರಾಧ್ಯಾಪಕ ಟಿ. ಎ. ಎನ್. ಖಂಡಿಗೆ, ಸಾಹಿತಿ ಡಾ. ಪ್ರಮೀಳಾ ಮಾಧವ, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪ್ರೊ. ಪಿ. ಎನ್. ಮೂಡಿತ್ತಾಯ ಮಾತನಾಡಿದರು.
ಸಂಚಿಕೆಯಲ್ಲಿನ ಸಾಧಕರಾದ ಡಾ. ಗೋವಿಂದ ಭಟ್ ಕೊಳ್ಳಪ್ಪೆ, ಶಾನ್ ಕಾಸರಗೋಡು, ಶೀಲಾಲಕ್ಷ್ಮೀ ಕಾಸರಗೋಡು, ಪಾರ್ವತಿದೇವಿ ಟಿ., ರಾಜೇಂದ್ರ ಕಲ್ಲೂರಾಯ ಎಡನೀರು, ಜಯಲಕ್ಷ್ಮೀ ಕಾರಂತ, ವೆಂಕಟ್ ಭಟ್ ಎಡನೀರು, ಸತ್ಯವತಿ ಭಟ್ ಕೊಳಚೆಪ್ಪು ಸಿ. ಎಚ್. ಗೋಪಾಲ ಭಟ್ ಚುಕ್ಕಿನಡ್ಕ, ಬಾಲ ಮಧುರಕಾನನ, ಶಶಿಕಲಾ ಬಾಯಾರು, ಪ್ರೋ. ಶ್ರೀಶ ದೇವಪೂಜಿತ್ತಾಯ, ಡಾ. ಬೇ. ಸೀ. ಗೋಪಾಲಕೃಷ್ಣ ಭಟ್, ರಾಮ ಭಟ್ ಸಜಂಗದ್ದೆ ಇವರಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ನ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕೀರಿಕ್ಕಾಡು ಮಾಸ್ಟರ್ ಸ್ಮಾರಕ ಯಕ್ಷಗಾನ ಅಧ್ಯಯನ ಕೇಂದ್ರ ಬನಾರಿ, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಮತ್ತು ವಿಕಾಸ ಮೀಯಪದವು ಸಹಕಾರದೊಂದಿಗೆ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಇವರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕವಯತ್ರಿ ಲಕ್ಷ್ಮೀ ವಿ. ಭಟ್ ಸಾಧಕರ ಪರಿಚಯ ಮಾಡಿ, ಅನುಜ್ಞಾಲಕ್ಷ್ಮೀ ಮೀಯಪದವು ಪ್ರಾರ್ಥನೆ ಹಾಡಿ, ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಸ್ವಾಗತಿಸಿ, ವಿಶಾಲಾಕ್ಷ ಪುತ್ರಕಳ ನಿರೂಪಿಸಿ, ಶೇಖರ ಶೆಟ್ಟಿ ಬಾಯಾರು ಧನ್ಯವಾದವಿತ್ತರು.
Subscribe to Updates
Get the latest creative news from FooBar about art, design and business.
ಲೋಕಾರ್ಪಣೆಗೊಂಡ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆ
Previous Articleಬದಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ
Next Article ಮಂಗಳೂರಿನಲ್ಲಿ ಕಲಾಭಿ ಯಕ್ಷಗಾನ ಅಧ್ಯಯನ ಕೇಂದ್ರ ಆರಂಭ