ಉಡುಪಿ : ಎಂ.ಜಿ.ಎಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು, ನಿರಂತರ ಕಲೆ ಹಾಗು ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀನಾರಾಯಣ ಕಾರಂತರಿಗೆ ದಿನಾಂಕ 12 ಜೂನ್ 2025ರ ಗುರುವಾರದಂದು ಉಡುಪಿ ತುಳು ಕೂಟದ ವತಿಯಿಂದ ಹೋಟೆಲ್ ಡಯಾನದಲ್ಲಿ ಅಭಿನಂದಿಸಿ ಗೌರವಿಸಲಾಯಿತು.
ಪ್ರಾರಂಭದಲ್ಲಿ ಅಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ ಅಸುನೀಗಿದವರಿಗೆ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾ೦ಜಲಿ ಸಲ್ಲಿಸಲಾಯಿತು. ಇತ್ತೀಚಿಗೆ ವೃತ್ತಿಯಿಂದ ನಿವೃತ್ತರಾದ ತುಳುಕೂಟದ ಸದಸ್ಯ ಜಯರಾಂ ಮಣಿಪಾಲ ಇವರನ್ನು ಸಂಮಾನಿಸಲಾಯಿತು. ಈ ಸಂದರ್ಭದಲ್ಲಿ ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗೌರಾವಾಧ್ಯಕ್ಷ ಭುವನ ಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಗಂಗಾಧರ ಕಿದಿಯೂರ್, ಕೋಶಾಧಿಕಾರಿ ಚೈತನ್ಯ ಎಂ.ಜಿ., ವಿವೇಕಾನಂದ ಹಾಗೂ ಪ್ರಭಾಕರ ಭಂಡಾರಿ ಉಪಸ್ಥಿತರಿದ್ದರು.