ಉಡುಪಿ : ರಾಗ ಧನ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಗರತ್ನಮಾಲಿಕೆ – 38ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 22 ಜೂನ್ 2025ರಂದು ಅಪರಾಹ್ನ 3-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮೊದಲಿಗೆ ರಾಗ ಧನ ಸಂಸ್ಥೆಯ ವಾರ್ಷಿಕ ಮಹಾಸಭೆ ನಡೆಯಲಿದ್ದು, ಸಂಜೆ 4-45 ಗಂಟೆಗೆ ಬೆಂಗಳೂರಿನ ಶ್ರೀಮತಿ ಕಲಾವತಿ ಅವಧೂತ್ ಇವರ ಹಾಡುಗಾರಿಕೆಗೆ ಬೆಂಗಳೂರಿನ ಬಿ.ಕೆ. ರಘು ಇವರಿಂದ ವಯೋಲಿನ್, ಬೆಂಗಳೂರಿನ ಕೆ.ಯು. ಜಯಚಂದ್ರ ರಾವ್ ಇವರು ಮೃದಂಗ ಮತ್ತು ಪುತ್ತೂರಿನ ಬಾಲಕೃಷ್ಣ ಹೊಸಮನೆ ಇವರು ಮೋರ್ಸಿಂಗ್ ನಲ್ಲಿ ಸಹಕರಿಸಲಿದ್ದಾರೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿದ್ದಾರೆ.