ಬೆಂಗಳೂರು : ನಿರುದ್ಯೋಗಿ ಯುವಕ-ಯುವತಿಯರಿಗೆ ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರಾಮನಗರ ಜಿಲ್ಲೆಯ ಬಿಡದಿಯ ಜೋಗರದೊಡ್ಡಿಯಲ್ಲಿ ಕೆ.ಪಿ.ಜೆ. ಪ್ರಭು ಕರಕುಶಲ ತರಬೇತಿ ಸಂಸ್ಥೆಗೆ ದಿನಾಂಕ 25 ಜೂನ್ 2025ರಿಂದ ಪ್ರವೇಶಾತಿ ಆರಂಭವಾಗಲಿದೆ. ಸಂಸ್ಥೆಯು 1991ರಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ಮತ್ತು ಕುಂಭ ಕಲೆ ವಿಭಾಗಗಳಲ್ಲಿ ಉಚಿತವಾಗಿ ತರಬೇತಿ ನೀಡುತ್ತಿದೆ. ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರುವ 18ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ – ಯುವತಿಯವರು ಪ್ರವೇಶ ಪಡೆಯಬಹುದಾಗಿದೆ.
ಇದುವರೆಗೂ 1300 ಹೆಚ್ಚು ವಿದ್ಯಾರ್ಥಿಗಳು ಶಿಲ್ಪಕಲಾ ಶಿಕ್ಷಣ ಪಡೆದಿದ್ದಾರೆ. ಈ ಪೈಕಿ ಶೇ.92ರಷ್ಟು ವಿದ್ಯಾರ್ಥಿಗಳು ಲಾಭದಾಯಕ ಹುದ್ದೆಗಳಲ್ಲಿದ್ದು, ಹಲವರು ರಾಷ್ಟ್ರ, ರಾಜ್ಯ ಮಟ್ಟದ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಮರ, ಕಲ್ಲು ಕೆತ್ತನೆ ಹಾಗೂ ಲೋಹ ಶಿಲ್ಪ ವಿಭಾಗಗಳಲ್ಲಿ ತರಬೇತಿ ಅವ 18 ಮತ್ತು ಕುಂಭ ಕಲೆ (ಟೆರಕೋಟ) ವಿಭಾಗದ ತರಬೇತಿಯ ಅವ 6 ತಿಂಗಳಾಗಿದೆ. ತರಬೇತಿ ಅವಯಲ್ಲಿ ಊಟ, ವಸತಿ, ಸಮವಸ್ತ್ರ, ಉಪಕರಣಗಳು/ ಕಚ್ಚಾ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಲಾಗುವುದು ಅಲ್ಲದೆ, ತರಬೇತಿಗೆ ಪೂರಕವಾಗಿ ಉಚಿತ ಶೈಕ್ಷಣಿಕ ಪ್ರವಾಸವು ಇರಲಿದ್ದು, ನುರಿತ ಶಿಕ್ಷಕರಿಂದ ತರಬೇತಿ ನೀಡಲಿದ್ದಾರೆ. ಶಿಲ್ಪಕಲಾ ಶಿಕ್ಷಣದ ತರಬೇತಿ ತರಗತಿಗಳು ದಿನಾಂಕ 25 ಜೂನ್ 2025ರಿಂದ ಪ್ರಾರಂಭವಾಗಲಿದೆ, ಆಸಕ್ತರು ಹೆಚ್ಚಿನ ಮಾಹಿತಿಗೆ ಸಂಸ್ಥೆಯ ನಿರ್ದೇಶಕ ಶ್ರೀ ಶಿವರಾಮ ಕೆ. ಇವರನ್ನು ಮೊಬೈಲ್ 9731016210/9164984414 ಮೂಲಕ ಸಂಪರ್ಕಿಸಬಹುದು.