ಮೈಸೂರು : ಡಿ.ವಿ.ಜಿ. ಬಳಗ ಪ್ರತಿಷ್ಠಾನ (ನೋಂ) ಇದರ ವತಿಯಿಂದ ‘ಡಿ.ವಿ.ಜಿ. ಪ್ರಶಸ್ತಿ 2025’ ಪ್ರದಾನ ಸಮಾರಂಭವನ್ನು ದಿನಾಂಕ 22 ಜೂನ್ 2025ರಂದು ಬೆಳಗ್ಗೆ 10-00 ಗಂಟೆಗೆ ಮೈಸೂರಿನ ಕುವೆಂಪು ನಗರದ ರಮಾ ಗೋವಿಂದ ಕಲಾವೇದಿಕೆಯಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಶಿವಮೊಗ್ಗದ ಖ್ಯಾತ ವಾಗ್ಮಿಗಳಾದ ವಿದ್ವಾನ್ ಜಿ.ಎಸ್. ನಟೇಶ್ ಇವರು ವಹಿಸಲಿದ್ದು, ಕವಿಗಳು ಹಾಗೂ ಸಾಹಿತಿ ಟಿ.ಎನ್. ಶಿವಕುಮಾರ್ (ತ ನಾ ಶಿ) ಇವರಿಗೆ ‘ಡಿ.ವಿ.ಜಿ. ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುವುದು. ಬೆಂಗಳೂರಿನ ಖ್ಯಾತ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರಜಗಿ ಮತ್ತು ಖ್ಯಾತ ಸಂಗೀತಗಾರರು ಹಾಗೂ ಸಂಗೀತ ಶಾಸ್ತ್ರಜ್ಞರಾದ ವಿದ್ವಾನ್ ಡಾ. ರಾ.ಸ. ನಂದಕುಮಾರ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.