ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಮೃತ ಕಾಲೇಜು ಪಡೀಲ್ ಮಂಗಳೂರು ಆಯೋಜಿಸುವ ಕಾಲೇಜು ವಿದ್ಯಾರ್ಥಿಗಳಿಗಾಗಿ 10 ದಿನಗಳ ತುಳು ನಾಟಕ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ದಿನಾಂಕ 24 ಜೂನ್ 2025ರಂದು ಅಪರಾಹ್ನ ಘಂಟೆ 2.30ಕ್ಕೆ ಮಂಗಳೂರಿನ ಪಡೀಲ್ ನಲ್ಲಿರುವ ಅಮೃತ ಕಾಲೇಜಿನಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹಿರಿಯ ರಂಗ ತಜ್ಞ ಹಾಗೂ ನಿರ್ದೇಶಕರಾದ ಶ್ರೀ ತಮ್ಮ ಲಕ್ಷ್ಮಣ ಉದ್ಘಾಟಿಸಿ ತುಳು ನಾಟಕ ಕ್ಷೇತ್ರ ಬೆಳೆದು ಬಂದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ರಂಗ ನಟರಾದ ಶ್ರೀ ಪ್ರಭಾಕರ ಕಾಪಿಕಾಡ್, ಹಿರಿಯ ನಟ, ನಿರ್ದೇಶಕ ಹಾಗೂ ನಾಟಕ ಕಾರ್ಯಾಗಾರದ ನಿರ್ದೇಶಕರಾದ ಶ್ರೀ ಜಗನ್ ಪವಾರ್ ಬೇಕಲ್ ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Previous Article‘ಬನ್ನಂಜೆ 90 – ಉಡುಪಿ ನಮನ’ ಕಾರ್ಯಕ್ರಮದ ಪೂರ್ವಭಾವಿ ಸಭೆ