Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಚಿತ್ರ ಕಲಾವಿದ ಸಕು ಅವರ ‘ಹ್ಯುಮಾನೆ -2’ ಶಿಲ್ಪಕಲಾಕೃತಿ ಪ್ರದರ್ಶನ
    Exhibition

    ಮಂಗಳೂರಿನಲ್ಲಿ ಚಿತ್ರ ಕಲಾವಿದ ಸಕು ಅವರ ‘ಹ್ಯುಮಾನೆ -2’ ಶಿಲ್ಪಕಲಾಕೃತಿ ಪ್ರದರ್ಶನ

    April 15, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    14-04-2023,ಮಂಗಳೂರು: ಉಡುಪಿಯ ಚಿತ್ರ ಕಲಾವಿದ ಸಕು ಅವರ ಶಿಲ್ಪ ಕಲಾಕೃತಿ (ರಿಲೀಫ್‌)ಗಳ ಪ್ರದರ್ಶನ ಹ್ಯುಮಾನೆ -2 ಮಂಗಳೂರಿನ ಬಲ್ಲಾಳ್ ಬಾಗ್‌ನ ಪ್ರಸಾದ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ 14-04-2023ರಂದು ಉದ್ಘಾಟನೆಗೊಂಡಿತು. ಈ ಶಿಲ್ಪಕಲಾ ಪ್ರದರ್ಶನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಶ್ರೀ ಆನಂದ ಕೆ. ಉದ್ಘಾಟಿಸಿದರು. ಅತಿಥಿಗಳಾಗಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕರಾಮ್‌ ಪೂಜಾರಿ, ಡಾ| ಟಿ.ಡಿ. ರಾಮಮೂರ್ತಿ, ಪ್ರಸಾದ್ ಆರ್ಟ್ ಗ್ಯಾಲರಿಯ ನಿರ್ದೇಶಕರಾದ ಕೋಟಿ ಪ್ರಸಾದ್ ಆಳ್ವ, ಹಿರಿಯ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ ಭಾಗವಹಿಸಿದರು
    ಚಿತ್ರ ಕಲಾವಿದ ಸಕು ಪಾಂಗಾಳ ಅವರು ಮಾತನಾಡಿ ’’ಈ ಶಿಲ್ಪ ಕಲಾಕೃತಿಗಳು ಕಪ್ಪೆ ಬೊಂಡಾಸ್‌ ಮೀನಿನ ಚಿಪ್ಪಿನಿಂದ (cuttlefish bone) ಮಾಡಲಾಗಿದೆ. 1997 ರಿಂದಲೇ ಕಡಲ ಬದಿಯಲ್ಲಿ ಸಿಗುವ ಈ ನಿರುಪಯುಕ್ತ ವಸ್ತುವಿನಿಂದ ಕಲಾಕೃತಿಗಳನ್ನು ರಚಿಸಲು ಪ್ರಾರಂಭಿಸಿದ್ದು ಇದರ ಮೊದಲ ಪ್ರದರ್ಶನ ಏಪ್ರಿಲ್ 3 ರಿಂದ 9 ರ ವರೆಗೆ ಉಡುಪಿಯಲ್ಲಿ ಯಶಸ್ವಿಯಾಗಿ ನಡೆದಿದೆ’’ ಎಂದರು. .
    ಈ ಪ್ರದರ್ಶನ ದಲ್ಲಿ 30 ಕಲಾಕೃತಿಗಳಿದ್ದು ಇದರಲ್ಲಿ ಮಾರಾಟವಾಗುವ ಕಲಾಕೃತಿಗಳಿಂದ ಬಂದ ಮೊತ್ತವನ್ನು ಕನ್ನಡ ಶಾಲೆಯ ಮಕ್ಕಳ ಕಲಿಕೆಗೆ ಉಪಯೋಗವಾಗುವಂತಹ ಶಬ್ಧಕೋಶಗಳನ್ನು ನೀಡುವ ಯೋಜನೆ ಹಮ್ಮಿಕೊಂಡಿದ್ದಾರೆ.
    ಈ ಪ್ರದರ್ಶನವು ಏಪ್ರಿಲ್ 14 ರಿಂದ 16ರ ವರೆಗೆ ನಡೆಯಲಿದೆ .

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ನಲಿ ಮನ’ದ ಮಕ್ಕಳ ಮನಸ್ಸು – ವಿಶೇಷ ಬೇಸಿಗೆ ಶಿಬಿರ
    Next Article ‘ಯಕ್ಷ ಯುವ ರತ್ನ’ – ಧೀರಜ್ ರೈ ಸಂಪಾಜೆ
    roovari

    Add Comment Cancel Reply


    Related Posts

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.