ಕಾರ್ಕಳ : ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಕಲಾರಂಗ (ರಿ.) ಕಾರ್ಕಳ ಮತ್ತು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭ ದಿನಾಂಕ 25 ಜೂನ್ 2025ರಂದು ನಡೆಯಿತು.
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಶೋಕ ಅಡ್ಯಂತಾಯ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ವಿಜ್ಞಾನಿ ಜನಾರ್ದನ ಇಡ್ಯ ಮಾತನಾಡಿ “ಕಲೆಯು ಜೀವನ ಮೌಲ್ಯ ವೃದ್ದಿಸುತ್ತದೆ, ಕಲೆಯಿಂದ ಸಂಸ್ಕಾರಯುತ ಮಕ್ಕಳು ರೂಪುಗೊಳ್ಳುತ್ತಾರೆ” ಎಂದರು.
ಕಾರ್ಯದರ್ಶಿ ದಿನೇಶ್ ಹೆಗ್ಡೆ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ವೇಣಿ ಸುಬ್ರಹ್ಮಣ್ಯ ಭಟ್, ಯಕ್ಷ ಶಿಕ್ಷಣ ಅಭಿಯಾನಕ್ಕೆ ಶುಭ ಹಾರೈಸಿದರು. ಕಾರ್ಕಳ ಕಲಾರಂಗ ಮತ್ತು ಘಟಕದ ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ, ಕೋಶಾಧ್ಯಕ್ಷರಾದ ಪ್ರೊ. ಶ್ರೀವರ್ಮ ಅಜ್ರಿ, ಯಕ್ಷ ಗುರು ಸತೀಶ್ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಲಾರಂಗದ ಕಾರ್ಯದರ್ಶಿ ಕಾಂತಾವರ ಮಹಾವೀರ ಪಾಂಡಿಯವರು ಯಕ್ಷ ಶಿಕ್ಷಣ ಅಬಿಯಾನದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಶಿಕ್ಷಕಿ ಶ್ರೀಮತಿ ಮಲ್ಲಿಕಾ ಸ್ವಾಗತಿಸಿ, ವಿದ್ಯಾರ್ಥಿ ವೇಣಿ ಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿ, ವಿಜ್ಞಾನ ಶಿಕ್ಷಕ ಶ್ರೀ ಸಂದೀಪ್ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ಸತೀಶ್ ಮಡಿವಾಳರು ವೀಳ್ಯ ಪಡೆದು ಯಕ್ಷಗಾನ ತರಗತಿ ನಡೆಸಿದರು.