ಬೆಂಗಳೂರು : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಸಂಸ್ಥೆ ವತಿಯಿಂದ ದಿನಾಂಕ 15 ಜೂನ್ 2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ರಾಷ್ಟ್ರ ಮಟ್ಟದ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ನೃತ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ನ್ಯಾಯಾಧೀಶರು ಸರ್ವೋಚ್ಚ ನ್ಯಾಯಾಲಯ ಹಾಗೂ ಮಾಜಿ ಲೋಕಾಯುಕ್ತರು ಶ್ರೀಮಾನ್ ಎನ್. ಸಂತೋಷ್ ಹೆಗ್ಡೆಯವರು ದೀಪ ಬೆಳಗಿಸಿ ಉದ್ಘಾಟನಾ ಭಾಷಣವನ್ನು ಮಾಡಿದರು. ಸಾಧಕರಿಗೆ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಡಾ. ಶೇಖ್ ವಾಹಿದ್ ದಾವೂದ್, ಖ್ಯಾತ ಗಾಯಕರು ಚಲನಚಿತ್ರ ನಟರಾದ ಶಶಿಧರ್ ಕೋಟೆ, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ಕಾರ್ಗದ್ದೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು, ಗೌರವ ಅಧ್ಯಕ್ಷರಾದ ಡಾ. ಕೆಂಚನೂರು ಶಂಕರ್, ನಾಟ್ಯ ಮಯೂರಿ ನೃತ್ಯ ಸಂಸ್ಥೆ ಸ್ಥಾಪಕ ಅಧ್ಯಕ್ಷರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಹಾಗೂ ಇನ್ನೂ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ರಾಜ್ಯದ ಹಲವಾರು ಕಡೆಗಳಿಂದ ಆಗಮಿಸಿದ ನೃತ್ಯ ತಂಡಗಳು ಉತ್ತಮ ಪ್ರದರ್ಶನ ನೀಡಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಕಾರ್ಯಕ್ರಮವನ್ನು ಶ್ರೀ ವೆಂಕಟರಾಜು ನಿರೂಪಿಸಿದರು.