Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06
    Awards

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಕಾಸರಗೋಡು, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನ ಕೊಡಗು ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ‘ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ -2025’ ಪ್ರದಾನ, ಕೊಡಗು ಮಳೆಗಾಲ ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 06 ಜುಲೈ 2025ರಂದು ಅಪರಾಹ್ನ 2-00 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಕನ್ನಡ ಭವನದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರು ವಹಿಸಲಿದ್ದು, ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ – ಸಂಧ್ಯಾರಾಣಿ ಟೀಚರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಕಿಗ್ಗಾಲು ಎನ್. ಗಿರೀಶ್ ಮೂರ್ನಾಡು, ಮೂಕಳೇರ ಟೈನಿ ಪೂಣಚ್ಚ ಪೊನ್ನಂಪೇಟೆ, ಪಂದ್ಯಂಡ ರೇಣುಕ ಸೋಮಯ್ಯ ಹೊಸೂರು ಅಮ್ಮತ್ತಿ, ಶ್ರೀಮತಿ ಅಪರ್ಣಾ ಹುಲಿತಾಳ ಮತ್ತು ಅಯ್ಯನೆರವಂಡ ಪ್ರಿತುನ್ ಪೂವಣ್ಣ ಇವರುಗಳಿಗೆ ‘ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ -2025’, ಶ್ರೀಮತಿ ಸ್ಮಿತಾ ಅಮೃತರಾಜ್, ಸುಬ್ರಾಯ ಸಂಪಾಜೆ ಮತ್ತು ಜೈರಸ್ ಥಾಮಸ್ ಅಲೆಗ್ಸಾಂಡೆರ್ ಇವರುಗಳಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ 2025’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ವೈಶಾಲಿನಿ ಟಿ. ಇವರ ‘ಮುಖವಾಡ’ ಕವನ ಸಂಕಲನವನ್ನು ಬೊಳ್ಳಜಿರ ಬಿ. ಅಯ್ಯಪ್ಪ ಇವರು ಬಿಡುಗಡೆ ಮಾಡಲಿದ್ದಾರೆ. ಸೋಮವಾರಪೇಟೆಯ ಶ್ರೀಮತಿ ತೆರೇಸಾ ಲೋಬೊ ಇವರಿಂದ ಗಾಯನ ಮತ್ತು ರಿಶಾ ಎಸ್.ಎ. ಇವರಿಂದ ನೃತ್ಯ ಪ್ರದರ್ಶನಗೊಳ್ಳಲಿದೆ. ಬಳಿಕ ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಇವರ ಅಧ್ಯಕ್ಷತೆಯಲ್ಲಿ ‘ಕೊಡಗು ಮಳೆಗಾಲ ಕವಿಗೋಷ್ಠಿ’ ನಡೆಯಲಿದೆ.

    award baikady bharatanatyam Book release dance felicitation kannada Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಶಕ್ತಿನಗರದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ
    Next Article ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.