Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ
    Yakshagana

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಯಕ್ಷ ಶಿಕ್ಷಣ’ ಯೋಜನೆಯು ಉಪ್ಪಿನಂಗಡಿ ಘಟಕದ ಮೇಲ್ವಚಾರಣೆಯಲ್ಲಿ 2025-26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿ ಕಾರ್ಯಕ್ರಮವು ದಿನಾಂಕ 27 ಜೂನ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಉಪ್ಪಿನಂಗಡಿ ವೇದಶಂಕರ ನಗರದ ಶ್ರೀರಾಮ ಶಾಲೆಯ ಉರಿಮಜಲು ರಾಮ ಭಟ್ ವೇದಿಕೆಯಲ್ಲಿ ಉದ್ಘಾಟನೆಗೊಂಡಿತು.

    ಕಾರ್ಯಕ್ರಮವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ಕೆ. ಇವರು ಉದ್ಘಾಟಿಸಿ, ಪಟ್ಲ ಫೌಂಡೇಶನ್ ಸ್ಥಾಪನೆಯ ಉದ್ದೇಶ, ಕಾರ್ಯವೈಖರಿಯನ್ನು ತಿಳಿಸಿದರು. ಪಟ್ಲ ಫೌಂಡೇಶನ್ ಉಪ್ಪಿನಂಗಡಿ ಘಟಕದ ಸದಸ್ಯರಾದ ಶ್ರೀ ಸುಧಾಕರ್ ಶೆಟ್ಟಿ ಗಾಂಧೀಪಾರ್ಕ್ ಇವರು ಮಾತನಾಡಿ “ಮಕ್ಕಳು ಕಲೆಯನ್ನು ಉಳಿಸಿಕೊಂಡು, ಉತ್ತಮ ಸಂಸ್ಕಾರ ಬೆಳೆಸಿಕೊಂಡು ಹೋಗಬೇಕಾದರೆ ಇಂತಹ ತರಬೇತಿಗಳು ಅಗತ್ಯ” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಯು.ಜಿ. ರಾಧಾ ಮಾತನಾಡಿ “ಉಚಿತ ಯಕ್ಷಗಾನ ತರಬೇತಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು” ಎಂದರು. ಯಕ್ಷಗಾನ ನಾಟ್ಯ ಗುರುಗಳಾದ ಸತೀಶ್ ಆಚಾರ್ಯ ಮಾಣಿ ಇವರಿಗೆ ಸ್ವಸ್ತಿಕ ನೀಡಿ ಗುರುವಂದನೆ ಮಾಡಿ ಗೌರವಿಸಿದ ನಂತರ ನಾಟ್ಯ ತರಗತಿ ಆರಂಭಗೊಂಡಿತು. ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ಶಿಕ್ಷಕರಾದ ಪೂವಪ್ಪ, ಪ್ರಭಾರ ಮುಖ್ಯ ಮಾತಾಜಿ ಉಷಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾ ಮಾತಾಜಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಉಪ್ಪಿನಂಗಡಿ ಘಟಕದ ಸದಸ್ಯರಾದ ಶ್ರೀ ಯು. ಕೃಷ್ಣ ಮಲ್ಲಿಗೆ, ಶ್ರೀ ಯು. ಯತೀಶ್ ಶೆಟ್ಟಿ, ಶ್ರೀ ಗುಣಕರ ಅಗ್ನಾಡಿ, ಶ್ರೀ ಶರತ್ ಕೋಟೆ, ಶ್ರೀ ಗಣೇಶ ಆಚಾರ್ಯ ಭಾವನಾ ಕಲಾ ಆರ್ಟ್ಸ್, ಶ್ರೀ ರಾಮ ಶಾಲೆಯ ಪೋಷಕರ ಸಂಘದ ಅಧ್ಯಕ್ಷರಾದ ಶ್ರೀ ಉದಯ ಅತ್ರಮಜಲು, ಶ್ರೀ ರಾಮ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ
    Next Article ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ | ಜುಲೈ 01

    June 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.