Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ
    Awards

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಮತ್ತು ಶ್ರೀ‌ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಡಾ. ಬನಾರಿ, ಪ್ರೊ. ಸಾಮಗ, ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇವರಿಗೆ 2024-25ನೇ ಸಾಲಿನ ‘ಯಕ್ಷಮಂಗಳ ಪ್ರಶಸ್ತಿ’ ಹಾಗೂ ಅಶೋಕ ಹಾಸ್ಯಗಾರ ಇವರ ‘ದಶರೂಪಕಗಳ ದಶಾವತಾರ’ ಕೃತಿಗೆ ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಧಾನ ಸಮಾರಂಭವು ದಿನಾಂಕ 27 ಜೂನ್ 2025ರಂದು ಮಂಗಳೂರು ವಿ.ವಿ.ಯ ಡಾ. ಯು.ಆರ್. ರಾವ್ ಸಭಾಂಗಣದಲ್ಲಿ ನಡೆಯಿತು.

    ಈ ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಮೂಡಲಪಾಯ ಕಲೆಗಳು ಹೊಸ ತಲೆಮಾರಿನ ನಿರ್ಲಕ್ಷ್ಯದಿಂದ ಹಿನ್ನಡೆ ಅನುಭವಿಸುತ್ತಿದೆ. ಆದರೆ ಯಕ್ಷಗಾನ ಸುಯೋಗವೆಂದರೆ ಇಂಜಿನಿಯರ್, ಡಾಕ್ಟರ್, ಶಿಕ್ಷಕರು ಮೊದಲಾದ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿದೆ. ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆಯನ್ನೂ ಉಳಿಸಿಕೊಳ್ಳಬೇಕು” ಎಂದು ಹೇಳಿದರು.

    ಪ್ರೊ. ಕೆ. ಚಿನ್ನಪ್ಪ ಗೌಡರವರು ಅಭಿನಂದನಾ ಭಾಷಣ ಮಾಡುತ್ತಾ “ಡಾ. ರಮಾನಂದ ಬನಾರಿ ಮತ್ತು ಪ್ರೊ. ಎಂ.ಎಲ್. ಸಾಮಗ ಅವರು ಯಕ್ಷಗಾನದ ಅಧ್ಯಯನ ಮತ್ತು ವಿಸ್ತರಣೆಗೆ ಕೊಡುಗೆ ನೀಡಿದ್ದಾರೆ.‌ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಇವರು ಬಣ್ಣದ ಮಾಲಿಂಗರ ಬಣ್ಣದ ವೇಷದ ಸೌಂದರ್ಯವನ್ನು ವರ್ತಮಾನದಲ್ಲಿ ಸೃಜನಶೀಲತೆಯೊಂದಿಗೆ ತಂದ ಕಲಾವಿದರು. ಅಶೋಕ ಹಾಸ್ಯಗಾರರ ದಶರೂಪಕಗಳ ದಶಾವತಾರ ಕೃತಿ ಯಕ್ಷಗಾನವನ್ನು ಶಾಸ್ತ್ರೀಯ ಚೌಕಟ್ಟಿನಲ್ಲಿ ನೋಡುವ ಪ್ರಯತ್ನ” ಎಂದರು.

    ಮಂಗಳೂರು ವಿ.ವಿ. ಕುಲಸಚಿವ ರಾಜು ಮೊಗವೀರ ಮಾತನಾಡಿ “ಯಕ್ಷಗಾನ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಪರಿಚಯ ಮಾಡಿಕೊಡಬೇಕಾಗಿದೆ” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಂಗಳೂರು ವಿ.ವಿ. ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಮಾತನಾಡಿ “ಯಕ್ಷಗಾನ ಕೇಂದ್ರವು ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಎಲ್ಲರನ್ನು ಒಂದುಗೂಡಿಸುವ ಗುಣ ಯಕ್ಷಗಾನ ಕಲೆಗಿದೆ” ಎಂದು ಹೇಳಿದರು.

    ಯಕ್ಷಮಂಗಳ ಪ್ರಶಸ್ತಿ‌ ಸ್ವೀಕರಿಸಿ ಮಾತನಾಡಿದ‌ ಡಾ. ರಮಾನಂದ ಬನಾರಿ “ಕಾಸರಗೋಡಿನ ಮಣ್ಣು ಅಚ್ಚಗನ್ನಡದ ನೆಲ. ಅಲ್ಲಿಂದ ನನ್ನನ್ನು ಪ್ರಶಸ್ತಿಗೆ ಗುರುತಿಸಿದ್ದು ಕಾಸರಗೋಡಿಗೆ ಸಂದ ಗೌರವ. ಕರ್ನಾಟಕದ ಅಕಾಡೆಮಿಗಳಿಗೆ, ಇತರೆ ಪ್ರಶಸ್ತಿಗಳಿಗೆ ಕಾಸರಗೋಡಿಗೆ ಪ್ರಾತಿನಿಧ್ಯ ಸಿಗಬೇಕು” ಅಂದರು. ಡಾ. ಎಂ.ಎಲ್. ಸಾಮಗ ಮತ್ತು ಅಶೋಕ ಹಾಸ್ಯಗಾರರು ಕೃತಜ್ಞತೆ ಸೂಚಿಸಿದರು. ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರರು ಅನಾರೋಗ್ಯ ನಿಮಿತ್ತ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ

    ಯಕ್ಷಗಾನ ಗುರುಗಳಾದ ದೀವಿತ್ ಕೋಟ್ಯಾನ್ ಹಾಗೂ ಯಕ್ಷಮಂಗಳ ವಿದ್ಯಾರ್ಥಿನಿ ಕಾವ್ಯಾ ಹಂದೆ ಅವರು ಪ್ರಶಸ್ತಿ ಪತ್ರ ವಾಚಿಸಿದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಧನಂಜಯ ಕುಂಬ್ಳೆಯವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರದ ಸಂಶೋಧನಾ ಅಧಿಕಾರಿ ಡಾ. ಸತೀಶ್ ಕೊಣಾಜೆ ವಂದಿಸಿ, ಯಕ್ಷಮಂಗಳ ವಿದ್ಯಾರ್ಥಿನಿ ಸಾಯಿಸುಮ ನಾವಡ ನಿರೂಪಿಸಿದರು.

    ಇಡೀ ಕಾರ್ಯಕ್ರಮವನ್ನು ಕಲಾವಿದೆ ಸಾಯಿಸುಮ ನಾವಡ ಯಕ್ಷಗಾನದ ಅರ್ಥಗಾರಿಕೆ ಶೈಲಿಯಲ್ಲಿ ನಿರೂಪಣೆ ನಡೆಸಿದ್ದು ವಿಶೇಷ ಗಮನ ಸೆಳೆಯಿತು. ಕಾರ್ಯಕ್ರಮದ ಉದ್ದಕ್ಕೂ ನಡುನಡುವೆ ಯಕ್ಷಗಾನದ ಹಾಡುಗಳನ್ನು, ದೀವಿತ್ ಶ್ರೀಧರ ಕೋಟ್ಯಾನ್ ರಚಿಸಿದ‌ ಅಭಿನಂದನಾ ಗೀತೆಯನ್ನು ಗಾಯಕ ಮನ್ವಿತ್ ಇರಾ ಹಾಡಿದರು. ಹಿಮ್ಮೇಳದಲ್ಲಿ ಕೌಶಿಕ್ ಪುತ್ತಿಗೆ, ಸ್ಕಂದ ಕೊನ್ನಾರ್ ಮತ್ತು ಹರಿಶ್ಚಂದ್ರ ನಾಯ್ಗ ಸಹಕರಿಸಿದ್ದರು. ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಾದ ಶ್ರೇಯಸ್, ಮಹೇಶ್ ಶೆಟ್ಟಿ, ಸುವರ್ಣ ಅವರಿಂದ ಪೂರ್ವರಂಗದ ಭಾಗವಾದ ಗಣಪತಿ ಕೌತುಕ ಪ್ರಸ್ತುತಪಡಿಸಲಾಯಿತು.

    award baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ
    Next Article ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ | ಜುಲೈ 01

    June 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.