ಸುರತ್ಕಲ್ : ಅನುದಾನಿತ ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಇಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವತಿಯಿಂದ 2025 – 2026 ನೇ ಸಾಲಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 30 ಜುಲೈ 2025 ರಂದು ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಸುರತ್ಕಲ್ ಘಟಕ ಇದರ ಉಪಾಧ್ಯಕ್ಷರಾದ ಶ್ರೀ ಲೀಲಾಧರ ಶೆಟ್ಟಿ ಕಟ್ಲ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷರಾದ ಶ್ರೀ ಜಯಚಂದ್ರ ಹತ್ವಾರ್ ಉದ್ಘಾಟಿಸಿದರು. ಯಕ್ಷಶಿಕ್ಷಣ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇದರ ಸಂಚಾಲಕರಾದ ಶ್ರೀ ಪಣಂಬೂರು ವಾಸುದೇವ ಐತಾಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿಂದೂ ವಿದ್ಯಾದಾಯಿನೀ ಸಂಘದ ಜೊತೆ ಕಾರ್ಯದರ್ಶಿಗಳಾದ ಶ್ರೀ ಎಮ್. ಜಿ. ರಾಮಚಂದ್ರ ಮುಕ್ಕ, ಶ್ರೀ ವೆಂಕಟರಮಣ ಶಾಲೆಯ ಸಂಚಾಲಕರಾದ ಶ್ರೀಮತಿ ಕಲಾವತಿ ಕೆ., ಶ್ರೀ ವೆಂಕಟರಮಣ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಗೋಪಾಲ್ ವಿ., ಶಿಕ್ಷಕರಾದ ಶ್ರೀ ಭಾಸ್ಕರ್ ಕೆ., ಯಕ್ಷ ಗುರುಗಳಾದ ಶ್ರೀಮತಿ ಪೂರ್ಣಿಮಾ ಯತೀಶ್ ರೈ, ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಸುರತ್ಕಲ್ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಾಳ ಗಂಗಾಧರ ಪೂಜಾರಿ, ಹಿಂದೂ ವಿದ್ಯಾದಾಯಿನೀ ಸಂಘದ ಪದಾಧಿಕಾರಿಗಳು, ಶಾಲೆಯ ಸಹ ಸಹಶಿಕ್ಷಕರು ಉಪಸ್ಥಿತರಿದ್ದರು.