ಬೆಂಗಳೂರು: ಹಿರಿಯ ಪತ್ರಕರ್ತ ಪ್ರಕಾಶ್ ಜಿ. ಇವರು ರಚಿಸಿದ ‘ನನ್ಸಿರಿ’ ಕಾದಂಬರಿಯ ಲೋಕಾರ್ಪಣಾ ಸಮಾರಂಭ ದಿನಾಂಕ 28 ಜೂನ್ 2025ರ ಶನಿವಾರದಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೃತಿ ಲೋಕರ್ಪಣೆಗೊಳಿಸಿದ ಖ್ಯಾತ ಸಾಹಿತಿ ಜೋಗಿ ಮಾತನಾಡಿ “ಪತ್ರಕರ್ತ ವೃತ್ತಿಯನ್ನಾಗಿಸಿಕೊಂಡವರಲ್ಲಿ ಬಹಳಷ್ಟು ಜನರು ಪ್ರವೃತ್ತಿಯಾಗಿ ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಂಡಿರುವುದು ಮಹತ್ವದ ಬೆಳವಣಿಗೆ. ಸಾಹಿತ್ಯದ ಬರವಣಿಗೆಯಲ್ಲಿ ತೊಡಗಿಸಿಕೊಂಡವರಲ್ಲಿ ಶಿಕ್ಷಕರು ಮತ್ತು ಪತ್ರಕರ್ತರ ಸಂಖ್ಯೆ ಹೆಚ್ಚಿದೆ. ಬೂಕರ್ ಪ್ರಶಸ್ತಿಗೆ ಪಾತ್ರರಾದ ಬಾನುಮುಷ್ತಾಕ್, ಇವರ ಕೃತಿಯನ್ನು ಇಂಗ್ಲೀಷ್ಗೆ ಅನುವಾದಿಸಿದ ದೀಪಾಭಾಸ್ತಿ ಇಬ್ಬರೂ ಪತ್ರಕರ್ತರು ಎನ್ನುವುದನ್ನು ಸಾಹಿತ್ಯಲೋಕ ಗಮನಿಸುತ್ತಿದೆ. ಸಾಹಿತ್ಯಕ್ಕೆ ಭಿನ್ನ ಬರಹಗಳು ಹೆಚ್ಚೆಚ್ಚು ಬರಬೇಕೆಂದರೆ ಉತ್ತಮ ಭಾಷಾ ಸಂವಹನ ಕೌಶಲ್ಯ ಹೊಂದಿರುವ ವರದಿಗಾರರು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು. ಧ್ಯಾನಸ್ಥ ಸ್ಥಿತಿಯಲ್ಲಿದ್ದರೆ ಮಾತ್ರವೇ ಬರವಣಿಗೆ ಮಾಡಲು ಸಾಧ್ಯ. ನಿತ್ಯವೂ ಓದು ಮತ್ತು ಬರೆಯುವ ಹವ್ಯಾಸವನ್ನು ತಪ್ಪದೇ ರೂಡಿಸಿಕೊಳ್ಳಬೇಕು” ಎಂದು ಹೇಳಿದರು.
ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಮಾತನಾಡಿ “ತಾವು ನೋಡಿದ ಸಂಗತಿಗಳನ್ನು, ಸಮಾಜದಲ್ಲಿ ಆಗುತ್ತಿರುವ ಬದಲಾವಣೆ, ತಲ್ಲಣಗಳನ್ನು ‘ನನ್ಸಿರಿ’ ಕಾದಂಬರಿ ರೂಪಕ್ಕೆ ತರುವಲ್ಲಿ ಪ್ರಕಾಶ್ ಉತ್ತಮ ಪ್ರಯತ್ನ ಮಾಡಿದ್ದಾರೆ” ಎಂದರು.
ಕರ್ನಾಟಕ ಕಾರ್ಯನಿರ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ “ಕ್ರೀಯಾಶೀಲ ವರದಿಗಾರರಾಗಿರುವ ಪ್ರಕಾಶ್, ಬರವಣಿಗೆಯ ಮೂಲಕ ಸಾಹಿತ್ಯ ಲೋಕಕ್ಕೂ ತೆರೆದುಕೊಂಡಿದ್ದಾರೆ. ಅವರಿಂದ ಇನ್ನಷ್ಟು ಉತ್ತಮ ಕೃತಿಗಳು ಬರಲಿ” ಎಂದು ಆಶಿಸಿದರು. ‘ಜನಮಿತ್ರ’ ಪತ್ರಿಕೆಯ ಸಂಪಾದಕ ಮತ್ತು ಕೆ. ಯು. ಡಬ್ಲೂೃ. ಕೆ. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್. ಬಿ. ಮದನಗೌಡ, ರವಿ ನಾಕಲಗೋಡು ಅವರು ಪ್ರಕಾಶ್ ಪ್ರಯತ್ನಕ್ಕೆ ಶುಭ ಕೋರಿದರು.
ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ ಇವರು ‘ನನ್ಸಿರಿ’ ಕೃತಿಯನ್ನು ಪರಿಚಯಿಸಿದರು. ಕೃತಿ ಕತೃ ಪ್ರಕಾಶ್ ಮಾತನಾಡಿ “ಇದು ತಮ್ಮ ಚೊಚ್ಚಲ ಪ್ರಯತ್ನವಾಗಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಿ, ಬೆನ್ನು ತಟ್ಟಿದ ಎಲ್ಲರಿಗೂ ಧನ್ಯವಾದ” ಎಂದರು. ಹಿರಿಯ ಪತ್ರಕರ್ತರಾದ ತಿಮ್ಮಪ್ಪಭಟ್ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಶುಭ ಹಾರೈಸಿದರು.
Subscribe to Updates
Get the latest creative news from FooBar about art, design and business.
Previous Articleಸೂರಜ್ ಪಿ.ಯು ಕಾಲೇಜಿನಲ್ಲಿ 107ನೆಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ