Subscribe to Updates

    Get the latest creative news from FooBar about art, design and business.

    What's Hot

    ಮೂಡಬಿದೆರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಗಾರ

    July 21, 2025

    ವಿದ್ಯಾರ್ಥಿಗಳಿಗಾಗಿ ‘ಮಿನಿ ಕಥೆ’ ರಚನೆ ಹಾಗೂ ಕವನ ರಚನೆ ಸ್ಪರ್ಧೆ | ಜುಲೈ 24

    July 21, 2025

    ಯಕ್ಷಗಾನ ಗುರು, ಭಾಗವತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರಿಗೆ ಗುರುಪೂರ್ಣಿಮೆಯ ಗುರುವಂದನೆ

    July 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಬರಹಗಾರ ಡಾ. ಸಿ. ನಾಗಣ್ಣನವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ. ಮಳಲಿ ವಸಂತ ಕುಮಾರ್ ಪ್ರಶಸ್ತಿ’
    Awards

    ಹಿರಿಯ ಬರಹಗಾರ ಡಾ. ಸಿ. ನಾಗಣ್ಣನವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ. ಮಳಲಿ ವಸಂತ ಕುಮಾರ್ ಪ್ರಶಸ್ತಿ’

    July 21, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಹಿರಿಯ ಬರಹಗಾರ ಡಾ. ಸಿ. ನಾಗಣ್ಣನವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ಮಳಲಿ ವಸಂತ ಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ.

    ಶ್ರೇಷ್ಠ ಬರಹಗಾರರಾದ ಡಾ. ಮಳಲಿ ವಸಂತ ಕುಮಾರ್ ಅವರು ‘ಮನುಕುಲದ ವಾಗ್ಮಿ’ ಎಂದು ಹೆಸರು ಪಡೆದಿದ್ದರು. ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಬರಹಗಾರರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ತಾವೇ 46 ಮಹತ್ವದ ಕೃತಿಗಳನ್ನು ರಚಿಸಿದ್ದರು. ಅವರ ನೆನಪಿನಲ್ಲಿ ಕುಟುಂಬದವರು ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಕನ್ನಡಕ್ಕೆ ಮಹತ್ವದ ಕೊಡುಗೆ ನೀಡಿದ ಬರಹಗಾರರಿಗೆ, ಕನ್ನಡಪರ ಹೋರಾಟಗಾರರಿಗೆ ಈ ಪುರಸ್ಕಾರ ನೀಡುವಂತೆ ಯೋಜನೆ ರೂಪಿಸಿದ್ದಾರೆ.

    ಮಳಲಿ ವಸಂತ ಕುಮಾರ್ ಪುರಸ್ಕಾರಕ್ಕೆ 2025ನೆಯ ಸಾಲಿಗೆ ಆಯ್ಕೆಯಾಗಿರುವ ಡಾ. ಸಿ. ನಾಗಣ್ಣನವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಪ್ರಸಾರಾಂಗದ ನಿರ್ದೇಶಕರಾಗಿ ಕೂಡ ಸೇವೆಯನ್ನು ಸಲ್ಲಿಸಿದ್ದಾರೆ. ಭಾಷಾಂತರ ಕ್ಷೇತ್ರದಲ್ಲಿ ಮಹತ್ವದ ಕೊಡುಗೆಯನ್ನು ಸಲ್ಲಿಸಿರುವ ಇವರು ಹಲವು ಪ್ರಮುಖ ವಿಶ್ವವಿದ್ಯಾಲಯಗಳ ತಜ್ಞರ ಸಮಿತಿ ಸದಸ್ಯರಾಗಿ ಕೂಡ ಸೇವೆಯನ್ನು ಸಲ್ಲಿಸಿದ್ದಾರೆ. ಅಂತರರಾಷ್ಟ್ರೀಯ, ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ಅಂಕಣಕಾರರಾಗಿ ಕೂಡ ಹೆಸರು ಮಾಡಿದವರು.

    ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಗೌರವ ಕೋಶಾಧ್ಯಕ್ಷರಾದ ಡಿ.ಆರ್. ವಿಜಯ ಕುಮಾರ್ ಮತ್ತು ದತ್ತಿದಾನಿಗಳ ಪರವಾಗಿ ಶಾಂತ ವಸಂತ ಕುಮಾರ್ ಭಾಗವಹಿಸಿ ಕೂಲಂಕಶವಾಗಿ ಚರ್ಚಿಸಿ ಡಾ. ಸಿ. ನಾಗಣ್ಣನವನ್ನು ಆಯ್ಕೆ ಮಾಡಲಾಗಿದೆ. ಪುರಸ್ಕೃತರಾದ ಡಾ. ಸಿ. ನಾಗಣ್ಣನವರನ್ನು ವಿಶೇಷವಾಗಿ ಅಭಿನಂದಿಸಿರುವ ನಾಡೋಜ ಡಾ. ಮಹೇಶ ಜೋಶಿಯವರು ಅವರ ಮುಂದಿನ ಸಾರಸ್ವತ ಸೇವೆಗೆ ಶುಭವನ್ನು ಕೋರಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ ಕುರಿತು ಸಂತೋಷವನ್ನು ವ್ಯಕ್ತ ಪಡಿಸಿರುವ ಡಾ. ಸಿ. ನಾಗಣ್ಣನವರು ಅಧ್ಯಕ್ಷರಿಗೆ ಪತ್ರವನ್ನು ಬರೆದು “ನನ್ನ ಸುದೀರ್ಘ ಬರಹದ ಬದುಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ಪ್ರಶಸ್ತಿಗೆ ನಾನು ಭಾಜನನಾಗುತ್ತಿರುವುದು ಇದೇ ಮೊದಲು. ತಮ್ಮ ಅಧ್ಯಕ್ಷಾವಧಿಯಲ್ಲಿ ಇದು ಸಾಕಾರವಾದ್ದು ನನ್ನ ಸಂತೋಷಕ್ಕೆ ಕಾರಣವಾಗಿದೆ. ಅದಕ್ಕಾಗಿ ತಮಗೆ ಹಾಗೂ ಆಯ್ಕೆ ಸಮಿತಿಯ ಸದಸ್ಯರಿಗೆ ನನ್ನ ವಂದನೆಗಳನ್ನು ಸಮರ್ಪಿಸುತ್ತಿದ್ದೇನೆ” ಎಂದು ತಮ್ಮ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ವಠಾರದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ | ಜುಲೈ 25ರಿಂದ 31
    Next Article ಯಶಸ್ವಿಯಾಗಿ ನೆರವೇರಿದ ಉಪಾಸನ ಬುಕ್ಸ್ ಪ್ರಕಟಣೆಯ ಕೃತಿಗಳ ಲೋಕಾರ್ಪಣಾ ಸಮಾರಂಭ
    roovari

    Add Comment Cancel Reply


    Related Posts

    ಮೂಡಬಿದೆರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಗಾರ

    July 21, 2025

    ವಿದ್ಯಾರ್ಥಿಗಳಿಗಾಗಿ ‘ಮಿನಿ ಕಥೆ’ ರಚನೆ ಹಾಗೂ ಕವನ ರಚನೆ ಸ್ಪರ್ಧೆ | ಜುಲೈ 24

    July 21, 2025

    ಯಕ್ಷಗಾನ ಗುರು, ಭಾಗವತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರಿಗೆ ಗುರುಪೂರ್ಣಿಮೆಯ ಗುರುವಂದನೆ

    July 21, 2025

    ಏರ್ಯ ಬೀಡಿನಲ್ಲಿ ‘ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ’ | ಜುಲೈ 27

    July 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.