Subscribe to Updates

    Get the latest creative news from FooBar about art, design and business.

    What's Hot

    ಚೆಂಬೂರು ಚೆಡ್ಡಾ ನಗರ ಸುಬ್ರಹ್ಮಣ್ಯ ಮಠದಲ್ಲಿ ‘ಶ್ರೀರಾಮ ನಿರ್ಯಾಣ’ ಯಕ್ಷಗಾನ ತಾಳಮದ್ದಳೆ

    August 19, 2025

    ಸಿರಿಬಾಗಿಲು ಪ್ರತಿಷ್ಠಾನಕ್ಕೆ ಉಜಿರೆ ಯಸ್. ಡಿ. ಯಂ. ವಿದ್ಯಾರ್ಥಿಗಳ ಭೇಟಿ

    August 19, 2025

    ಚೇಳಾರು ಗುತ್ತಿನಲ್ಲಿ ಆಗೋಳಿ ಮಂಜಣ್ಣ ನೆಂಪು ಹಾಗೂ ಪ್ರತಿಭಾ ಪುರಸ್ಕಾರ

    August 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚೇಳಾರು ಗುತ್ತಿನಲ್ಲಿ ಆಗೋಳಿ ಮಂಜಣ್ಣ ನೆಂಪು ಹಾಗೂ ಪ್ರತಿಭಾ ಪುರಸ್ಕಾರ
    Folk

    ಚೇಳಾರು ಗುತ್ತಿನಲ್ಲಿ ಆಗೋಳಿ ಮಂಜಣ್ಣ ನೆಂಪು ಹಾಗೂ ಪ್ರತಿಭಾ ಪುರಸ್ಕಾರ

    August 19, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಎಸ್. ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ ) ಆಶ್ರಯದಲ್ಲಿ ಸೋಣದ ಸಂಕ್ರಾಂತಿ ಮತ್ತು ಆಗೋಳಿ ಮಂಜಣ್ಣ ನೆಂಪು ಹಾಗೂ ಚೇಳಾರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 17 ಆಗಸ್ಟ್ 2025ರಂದು ಚೇಳಾರು ಗುತ್ತು ಮನೆಯಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್. ಆರ್. ಹೆಗ್ಡೆ ಚಾರಿಟೇಬಲ್ ಇದರ ಅಧ್ಯಕ್ಷೆ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಮಾತನಾಡಿ “ತುಳುವ ಸಂಸ್ಕೃತಿ, ಇತಿಹಾಸ, ಜನಪದ ಮತ್ತು ಸಾಂಸ್ಕೃತಿಕ ನಾಯಕರ ಕುರಿತು ಅಧ್ಯಯನಗಳು ಇನ್ನಷ್ಟು ನಡೆಯಬೇಕು. ಆಗೋಳಿ ಮಂಜಣ್ಣ ತುಳುನಾಡಿನ ವೀರ ನಾಯಕನಾಗಿದ್ದು ತುಳುನಾಡ ಇತಿಹಾಸದ ಹಿನ್ನೆಲೆಯಲ್ಲಿ ಅಧ್ಯಯನಗಳು ನಡೆಯುವ ಅಗತ್ಯವಿದೆ. ತನ್ನ ಚೇಳಾರು ಗುತ್ತು ಮಂಜನ್ನಾಯ್ಗೆ ರ್.. ಸಾಂಸ್ಕೃತಿಕ-ಐತಿಹಾಸಿಕ ಶೋಧ.. ಕೃತಿಯಲ್ಲಿ ಹೊಸ ವಿಚಾರಗಳು ನಿರೂಪಿತವಾಗಿದೆ. ತುಳುನಾಡ ಆಚರಣೆಯಲ್ಲಿ ಸೋಣ ಸಂಕ್ರಾಂತಿಗೆ ವಿಶೇಷ ಮಹತ್ವವಿದ್ದು ವಾರ್ಷಿಕ ಆವರ್ತನದ ಕ್ರಮಗಳು ಕೃಷಿ ಬದುಕಿನೊಂದಿಗೆ ನಂಟನ್ನು ಹೊಂದಿದೆ” ಎಂದರು.


    ವಿಶೇಷ ಉಪನ್ಯಾಸ ನೀಡಿದ ಗೋವಿಂದದಾಸ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಮಾತನಾಡಿ “ಪ್ರತಿಯೊಂದು ಗ್ರಾಮಕ್ಕೂ ತನ್ನದೇ ಆದ ಇತಿಹಾಸವಿದ್ದು ಅವೆಲ್ಲಗಳ ಸೇರಿಗೆಯೇ ರಾಷ್ಟ್ರ ಇತಿಹಾಸವಾಗಿದೆ. ಆಗೋಳಿ ಮಂಜಣ್ಣ ನಮ್ಮ ನಾಡಿನ ಆತ್ಮ ಧೈರ್ಯ. ಸಾಹಸ, ಶೌರ್ಯಗಳ ಪ್ರತೀಕವಾಗಿದ್ದು ಮಂಜಣ್ಣ ಸಂಕಥನದ ಮರು ನಿರೂಪಣೆ ಆಗಬೇಕಾಗಿದೆ” ಎಂದರು.
    ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವೆಂಕಟೇಶ್ ಶೆಟ್ಟಿ ಮಾತನಾಡಿ “ಮಂಜಣ್ಣ ಕತೆ ಕಲಾ ಮಾಧ್ಯಮಗಳಲ್ಲೂ ಬಂದಿದ್ದು ಜನಪ್ರಿಯತೆ ಪಡೆದಿದೆ” ಎಂದರು.
    ಕಾಲೇಜು ಅಭಿವೃದ್ಧಿ ಸಮಿ ತಿ ಯ ಸದಸ್ಯ ಪುಷ್ಪ ರಾಜ ಶೆಟ್ಟಿ ಮಾತನಾಡಿ “ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬೆಂಬಲಿಸಿ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ” ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ತೆರಸಾ ವೇಗಸ್ ಶುಭ ಹಾರೈಸಿದರು.
    ಅತ್ಯುನ್ನತ ಅಂಕಗಳಿಸಿದ ಪದವಿ ಪೂರ್ವ ಕಾಲೇಜಿನ ನಾಲ್ಕು ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ವಿದ್ಯಾರ್ಥಿನಿ ಸಂಜನಾ ಇವರು ಎಸ್. ಆರ್. ಹೆಗ್ಡೆ ಅವರ ಬದುಕು ಸಾಧನೆಗಳ ಕುರಿತು ಮಾತನಾಡಿದರು.

    ಚೇಳಾರು ಗುತ್ತಿನ ಚಂದ್ರಿಕಾ, ಉದಯ, ವತ್ಸಲಾ, ರಾಮ ಕೃಷ್ಣ ಪೂಂಜಾ, ಗಣೇಶ್ ಶೆಟ್ಟಿ, ದಿನೇಶ್ ಭಂಡಾರಿ, ಹಿರಿಯ ಕಲಾವಿದೆ ಗೀತಾ ಸುರತ್ಕಲ್, ಎಸ್. ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ಬೆನಟ್ ಅಮ್ಮನ್ನ, ಸುಜಾತ, ಉಪನ್ಯಾಸಕರಾದ ರವಿಚಂದ್ರ, ಜಯಶ್ರೀ ಮತ್ತು ಅಪರ್ಣ ಉಪಸ್ಥಿತರಿದ್ದರು.
    ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಜ್ಯೋತಿ ಚೇಳಾರು ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿ, ಇತಿಹಾಸ ಉಪನ್ಯಾಸಕಿ ತ್ರಿವೇಣಿ ಕಾರ್ಯಕ್ರಮ ನಿರೂಪಿಸಿ, ಚೇಳಾರು ಗುತ್ತಿನ ಕಸ್ತೂರಿ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ ಪ್ರಸ್ತುತಪಡಿಸಿದರು.

    baikady folk roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರೀಯ ಪ್ರಶಸ್ತಿ’
    Next Article ಸಿರಿಬಾಗಿಲು ಪ್ರತಿಷ್ಠಾನಕ್ಕೆ ಉಜಿರೆ ಯಸ್. ಡಿ. ಯಂ. ವಿದ್ಯಾರ್ಥಿಗಳ ಭೇಟಿ
    roovari

    Add Comment Cancel Reply


    Related Posts

    ಚೆಂಬೂರು ಚೆಡ್ಡಾ ನಗರ ಸುಬ್ರಹ್ಮಣ್ಯ ಮಠದಲ್ಲಿ ‘ಶ್ರೀರಾಮ ನಿರ್ಯಾಣ’ ಯಕ್ಷಗಾನ ತಾಳಮದ್ದಳೆ

    August 19, 2025

    ಸಿರಿಬಾಗಿಲು ಪ್ರತಿಷ್ಠಾನಕ್ಕೆ ಉಜಿರೆ ಯಸ್. ಡಿ. ಯಂ. ವಿದ್ಯಾರ್ಥಿಗಳ ಭೇಟಿ

    August 19, 2025

    ಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರೀಯ ಪ್ರಶಸ್ತಿ’

    August 19, 2025

    ಚೇಳ್ಯಾರು ಗುತ್ತಿನ ಮನೆಯಲ್ಲಿ ಆಗೋಳಿ ಮಂಜಣ್ಣ ನೆಂಪು ಮತ್ತು ಉಪನ್ಯಾಸ ಕಾರ್ಯಕ್ರಮ

    August 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.