Subscribe to Updates

    Get the latest creative news from FooBar about art, design and business.

    What's Hot

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜನಪದ ಕಲಾವಿದ, ಮಾಚಾರು ಗೋಪಾಲ ನಾಯ್ಕ ನಿಧನ
    Folk

    ಜನಪದ ಕಲಾವಿದ, ಮಾಚಾರು ಗೋಪಾಲ ನಾಯ್ಕ ನಿಧನ

    April 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ: ಜನಪದ ಕಲಾವಿದ, ‘ತುಳು ಸಿರಿ ಕಾವ್ಯದ ಕಣಜ’ ಎಂದೇ ಖ್ಯಾತರಾಗಿದ್ದ ಬೆಳ್ತಂಗಡಿಯ ಬೆಳಾಲು ಗ್ರಾಮದ ಮಾಚಾರು ಗೋಪಾಲ ನಾಯ್ಕ (85) ಅಸೌಖ್ಯದಿಂದ ಸ್ವಗೃಹದಲ್ಲಿ ಏಪ್ರಿಲ್ 24ರಂದು ನಿಧನರಾದರು. ಅವರಿಗೆ ಪತ್ನಿ, ಪುತ್ರ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ.

    ಜನಪದ ಕ್ಷೇತ್ರದಲ್ಲಿನ ಅವರ ಸೇವೆಗೆ 2005ರ ‘ರಾಜ್ಯೋತ್ಸವ ಪ್ರಶಸ್ತಿ’ ಅವರಿಗೆ ಸಂದಿತ್ತು. ಸಿರಿ ಸಂಧಿಯಲ್ಲಿರುವ 15,683 ಸಾಲುಗಳ ದೀರ್ಘ ಪಠ್ಯವನ್ನು ನಿರರ್ಗಳವಾಗಿ ಹಾಡುತ್ತಿದ್ದರು. ಇತರ ಆರಾಧನಾ ಪದ್ಧತಿಗಳಲ್ಲಿ ಬರುವ ಸಂಧಿ-ಪಾಡ್ಡನಗಳನ್ನು ಹಾಡಿನೊಂದಿಗೆ ವಿವರಣೆಯನ್ನೂ ನೀಡುತ್ತಿದ್ದರು. ಸಿರಿ ಜಾತ್ರೆಗಳಲ್ಲಿ ನಡೆಯುವ ದಲ್ಯ ಆಚರಣೆಗಳಲ್ಲಿ ಅವರ ಸಿರಿ ಕಾವ್ಯ ಇಂದಿಗೂ ಪ್ರಸ್ತುತವಾಗಿದೆ. ಜನಪದ ಪುರಾಣಗಳು ಮತ್ತು ಪರಂಪರೆಯ ಕುರಿತು ಅಪಾರ ತಿಳಿವಳಿಕೆ ಹೊಂದಿದ್ದ ಅವರ ಸಿರಿ ಕಾವ್ಯದ ಕಥೆಯ ನಡಿಗೆ, ಅದರ ಕಥೆಗಳನ್ನು ಘಟಕಗಳನ್ನಾಗಿ ವಿಂಗಡಿಸಿ ಮರು ಕಟ್ಟುವ ಕಲೆ, ವರ್ಣನೆಯನ್ನು ಪರಂಪರೆಯಿಂದ ಆಯ್ದು ಅಳವಡಿಸುತ್ತಿದ್ದರು.

    ಫಿನ್ಲೆಂಡ್‌ನ ಖ್ಯಾತ ಜನಪದ ವಿದ್ವಾಂಸ ಲೌರಿ ಹೋಂಕೊ ಮತ್ತು ಅನ್ನೆಲಿ ಹೋಂಕೊ 1990ರಲ್ಲಿ ಧರ್ಮಸ್ಥಳಕ್ಕೆ ಬಂದವರು ಆಸಕ್ತಿಯಿಂದ ಗೋಪಾಲ ನಾಯ್ಕರ ಸಂಧಿ-ಪಾಡ್ಡನಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಪ್ರೊ. ಬಿ.ಎ. ವಿವೇಕ ರೈ ಹಾಗೂ ಡಾ. ಕೆ. ಚಿನ್ನಪ್ಪ ಗೌಡ ಸಿರಿ ಕಾವ್ಯ ಯೋಜನೆಯಲ್ಲಿ ಸಹಕರಿಸಿದ್ದರು. ಸುಮಾರು 8 ವರ್ಷಗಳ ಅಧ್ಯಯನ ಮತ್ತು ದಾಖಲೀಕರಣದ ಬಳಿಕ ಗೋಪಾಲ ನಾಯ್ಕರಿಂದ ಸಿರಿ ಸಂಧಿಗಳನ್ನು ಹಾಡಿಸಿ ದೀರ್ಘವಾದ ಪಠ್ಯವನ್ನು ಅವರು ದಾಖಲಿಸಿಕೊಂಡಿದ್ದರು. ಸಿರಿ ಕಾವ್ಯ ಪಠ್ಯದ ಎರಡು ಸಂಪುಟಗಳು ಇಂಗ್ಲಿಷ್‌ಗೆ ಭಾಷಾಂತರಗೊಂಡಿವೆ. ವಿಶ್ವದ ಜಾನಪದ ಲೋಕಕ್ಕೆ ಇದೊಂದು ಅಮೂಲ್ಯ ಕೊಡುಗೆಯಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleರಾಘವೇಂದ್ರ ಪಾಟೀಲ 72ರ ಅಭಿನಂದನ ಮತ್ತು ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ ಪ್ರದಾನ ಸಮಾರಂಭ
    Next Article ಬೆಂಗಳೂರು ರಂಗಾಸ್ಥೆ ರಂಗ ತಂಡದ ಸ್ಥಾಪಕ ದಿನಾಚರಣೆ
    roovari

    Add Comment Cancel Reply


    Related Posts

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.